ETV Bharat / bharat

ಮುಜಾಫರ್‌ಪುರ: ವಿದ್ಯಾರ್ಥಿಗೆ ರ‍್ಯಾಗಿಂಗ್ - 60ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಮಾನತು

author img

By ETV Bharat Karnataka Team

Published : Dec 22, 2023, 2:13 PM IST

ದೇಶದ ಹಲವು ಕಾಲೇಜುಗಳಲ್ಲಿ ಇಂದಿಗೂ ರ‍್ಯಾಗಿಂಗ್ ನಡೆಯುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಮುಜಾಫರ್‌ಪುರದಲ್ಲಿ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಮುಜಾಫರ್‌ಪುರ
ಮುಜಾಫರ್‌ಪುರ

ಮುಜಾಫರ್‌ಪುರ (ಬಿಹಾರ) : ಉತ್ತರ ಬಿಹಾರದ ಅತಿದೊಡ್ಡ ವೈದ್ಯಕೀಯ ಸಂಸ್ಥೆಯಾದ ಶ್ರೀ ಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎಸ್‌ಕೆಎಂಸಿಹೆಚ್) ವಿದ್ಯಾರ್ಥಿಯೊಬ್ಬರ ಮೇಲೆ ರ‍್ಯಾಗಿಂಗ್ ಮಾಡಲಾಗಿದೆ. ಸಂತ್ರಸ್ತ ವಿದ್ಯಾರ್ಥಿಯು ಪ್ಯಾರಾಮೆಡಿಕಲ್ ಅಧ್ಯಯನ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಪ್ರಾಂಶುಪಾಲ ಪ್ರೊ. ಅಭಾ ರಾಣಿ ಸಿನ್ಹಾ ಅವರು, 60 ಕ್ಕೂ ಹೆಚ್ಚು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು 2022ರ ಬ್ಯಾಚ್‌ನವರು ಎಂಬುದಾಗಿ ತಿಳಿದುಬಂದಿದೆ.

ಎಸ್‌ಕೆಎಂಸಿಹೆಚ್‌ನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ : 2023ನೇ ಬ್ಯಾಚ್‌ನ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಲಿಖಿತ ದೂರಿನ ಅರ್ಜಿಯನ್ನು ಪ್ರಾಂಶುಪಾಲರಿಗೆ ನೀಡಿ, ರ‍್ಯಾಗಿಂಗ್ ಬಗ್ಗೆ ದೂರು ನೀಡಿದ್ದರು. ಇದೇ ವೇಳೆ ಹಿರಿಯ ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ತನ್ನ ಸೀನಿಯರ್‌ಗಳು ಪ್ರಯೋಗಾಲಯದಲ್ಲಿ ತನಗೆ ಸಾಕಷ್ಟು ರ‍್ಯಾಗಿಂಗ್ ಮಾಡುತ್ತಿದ್ದರು. ಇದರಿಂದ ಸರಿಯಾಗಿ ಓದಲು ಸಾಧ್ಯವಾಗುತ್ತಿಲ್ಲ ಎಂದು ಎಂದು ವಿದ್ಯಾರ್ಥಿ ದೂರಿನಲ್ಲಿ ಹೇಳಿದ್ದಾರೆ. ದೂರಿನ ನಂತರ, ಪ್ರಾಂಶುಪಾಲರು ರ‍್ಯಾಗಿಂಗ್ ವಿರೋಧಿ ಸಮಿತಿಯ ಸಭೆಯನ್ನು ಕರೆದರು. ಇದರಲ್ಲಿ ಆರೋಪಿಗಳಾದ ವಿದ್ಯಾರ್ಥಿಗಳನ್ನು ಕೂಡ ಕರೆಸಿ, ರ‍್ಯಾಗಿಂಗ್ ಮಾಡಿದ್ದಕ್ಕಾಗಿ ಅಮಾನತು ಮಾಡಿದ್ದಾರೆ.

ಪ್ರಾಂಶುಪಾಲರ ಕಚೇರಿ ಎದುರು ಪ್ರತಿಭಟನೆ : ಇದಕ್ಕೂ ಮುನ್ನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ರ‍್ಯಾಗಿಂಗ್ ವಿರುದ್ಧ ಪ್ರಾಂಶುಪಾಲರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು. ಪ್ರಾತ್ಯಕ್ಷಿಕೆ ಬಳಿಕ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ದೂರಿನ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಪ್ರಾಂಶುಪಾಲರು ಸಂತ್ರಸ್ತ ವಿದ್ಯಾರ್ಥಿಗೆ ಕರೆ ಮಾಡಿದ್ದಾರೆ. ನಂತರ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಬಳಿಕ ಆರೋಪಿ ವಿದ್ಯಾರ್ಥಿಗಳನ್ನೂ ಕರೆಸಿದ್ದರು. ನಂತರ ರ‍್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳಿಗೆ ಅವರು ಛೀಮಾರಿ ಕೂಡಾ ಹಾಕಿದ್ದಾರೆ.

'ಕಾಲೇಜಿನಲ್ಲಿ ರ‍್ಯಾಗಿಂಗ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗುತ್ತಿದೆ. ನಮ್ಮ ಆ್ಯಂಟಿ ರ‍್ಯಾಗಿಂಗ್ ಕಮಿಟಿ ಇಂತಹ ಪ್ರಕರಣಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುತ್ತಿದೆ. ಯಾವುದೇ ರ‍್ಯಾಗಿಂಗ್ ಪ್ರಕರಣವನ್ನು ಸಹಿಸುವುದಿಲ್ಲ' ಎಂದು ಎಸ್‌ಕೆಎಂಸಿಹೆಚ್ ಪ್ರಾಂಶುಪಾಲರಾದ ಪ್ರೊ. ಅಭಾ ರಾಣಿ ಸಿನ್ಹಾ ಅವರು ಹೇಳಿದ್ದಾರೆ.

ಈ ಹಿಂದೆಯೂ ನಡೆದಿತ್ತು ರ‍್ಯಾಗಿಂಗ್ ಪ್ರಕರಣ: ಈ ಹಿಂದೆಯೂ ಎಸ್​ಕೆಎಂಸಿಹೆಚ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಿಂದ ರ‍್ಯಾಗಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು. ಸಂತ್ರಸ್ತ ವಿದ್ಯಾರ್ಥಿನಿಯ ಹಿರಿಯ ಸಹೋದರ ಯುಜಿಸಿಯ ಆ್ಯಂಟಿ ರ‍್ಯಾಗಿಂಗ್ ಸೆಲ್‌ಗೆ ದೂರು ನೀಡಿದ್ದರು. ಇದಾದ ಬಳಿಕ ಆ್ಯಂಟಿ ರ‍್ಯಾಗಿಂಗ್ ಸೆಲ್‌ನಿಂದ ಪ್ರಾಂಶುಪಾಲರಿಗೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಪತ್ರ ಬಂದಿತ್ತು. ಈ ಪ್ರಕರಣದಲ್ಲಿ 2022ರ ಎಂಬಿಬಿಎಸ್ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದರು.

ಇದನ್ನೂ ಓದಿ: ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು.. ರ‍್ಯಾಗಿಂಗ್ ಆರೋಪ

ಮುಜಾಫರ್‌ಪುರ (ಬಿಹಾರ) : ಉತ್ತರ ಬಿಹಾರದ ಅತಿದೊಡ್ಡ ವೈದ್ಯಕೀಯ ಸಂಸ್ಥೆಯಾದ ಶ್ರೀ ಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎಸ್‌ಕೆಎಂಸಿಹೆಚ್) ವಿದ್ಯಾರ್ಥಿಯೊಬ್ಬರ ಮೇಲೆ ರ‍್ಯಾಗಿಂಗ್ ಮಾಡಲಾಗಿದೆ. ಸಂತ್ರಸ್ತ ವಿದ್ಯಾರ್ಥಿಯು ಪ್ಯಾರಾಮೆಡಿಕಲ್ ಅಧ್ಯಯನ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಪ್ರಾಂಶುಪಾಲ ಪ್ರೊ. ಅಭಾ ರಾಣಿ ಸಿನ್ಹಾ ಅವರು, 60 ಕ್ಕೂ ಹೆಚ್ಚು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು 2022ರ ಬ್ಯಾಚ್‌ನವರು ಎಂಬುದಾಗಿ ತಿಳಿದುಬಂದಿದೆ.

ಎಸ್‌ಕೆಎಂಸಿಹೆಚ್‌ನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ : 2023ನೇ ಬ್ಯಾಚ್‌ನ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಲಿಖಿತ ದೂರಿನ ಅರ್ಜಿಯನ್ನು ಪ್ರಾಂಶುಪಾಲರಿಗೆ ನೀಡಿ, ರ‍್ಯಾಗಿಂಗ್ ಬಗ್ಗೆ ದೂರು ನೀಡಿದ್ದರು. ಇದೇ ವೇಳೆ ಹಿರಿಯ ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ತನ್ನ ಸೀನಿಯರ್‌ಗಳು ಪ್ರಯೋಗಾಲಯದಲ್ಲಿ ತನಗೆ ಸಾಕಷ್ಟು ರ‍್ಯಾಗಿಂಗ್ ಮಾಡುತ್ತಿದ್ದರು. ಇದರಿಂದ ಸರಿಯಾಗಿ ಓದಲು ಸಾಧ್ಯವಾಗುತ್ತಿಲ್ಲ ಎಂದು ಎಂದು ವಿದ್ಯಾರ್ಥಿ ದೂರಿನಲ್ಲಿ ಹೇಳಿದ್ದಾರೆ. ದೂರಿನ ನಂತರ, ಪ್ರಾಂಶುಪಾಲರು ರ‍್ಯಾಗಿಂಗ್ ವಿರೋಧಿ ಸಮಿತಿಯ ಸಭೆಯನ್ನು ಕರೆದರು. ಇದರಲ್ಲಿ ಆರೋಪಿಗಳಾದ ವಿದ್ಯಾರ್ಥಿಗಳನ್ನು ಕೂಡ ಕರೆಸಿ, ರ‍್ಯಾಗಿಂಗ್ ಮಾಡಿದ್ದಕ್ಕಾಗಿ ಅಮಾನತು ಮಾಡಿದ್ದಾರೆ.

ಪ್ರಾಂಶುಪಾಲರ ಕಚೇರಿ ಎದುರು ಪ್ರತಿಭಟನೆ : ಇದಕ್ಕೂ ಮುನ್ನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ರ‍್ಯಾಗಿಂಗ್ ವಿರುದ್ಧ ಪ್ರಾಂಶುಪಾಲರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು. ಪ್ರಾತ್ಯಕ್ಷಿಕೆ ಬಳಿಕ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ದೂರಿನ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಪ್ರಾಂಶುಪಾಲರು ಸಂತ್ರಸ್ತ ವಿದ್ಯಾರ್ಥಿಗೆ ಕರೆ ಮಾಡಿದ್ದಾರೆ. ನಂತರ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಬಳಿಕ ಆರೋಪಿ ವಿದ್ಯಾರ್ಥಿಗಳನ್ನೂ ಕರೆಸಿದ್ದರು. ನಂತರ ರ‍್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳಿಗೆ ಅವರು ಛೀಮಾರಿ ಕೂಡಾ ಹಾಕಿದ್ದಾರೆ.

'ಕಾಲೇಜಿನಲ್ಲಿ ರ‍್ಯಾಗಿಂಗ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗುತ್ತಿದೆ. ನಮ್ಮ ಆ್ಯಂಟಿ ರ‍್ಯಾಗಿಂಗ್ ಕಮಿಟಿ ಇಂತಹ ಪ್ರಕರಣಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುತ್ತಿದೆ. ಯಾವುದೇ ರ‍್ಯಾಗಿಂಗ್ ಪ್ರಕರಣವನ್ನು ಸಹಿಸುವುದಿಲ್ಲ' ಎಂದು ಎಸ್‌ಕೆಎಂಸಿಹೆಚ್ ಪ್ರಾಂಶುಪಾಲರಾದ ಪ್ರೊ. ಅಭಾ ರಾಣಿ ಸಿನ್ಹಾ ಅವರು ಹೇಳಿದ್ದಾರೆ.

ಈ ಹಿಂದೆಯೂ ನಡೆದಿತ್ತು ರ‍್ಯಾಗಿಂಗ್ ಪ್ರಕರಣ: ಈ ಹಿಂದೆಯೂ ಎಸ್​ಕೆಎಂಸಿಹೆಚ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಿಂದ ರ‍್ಯಾಗಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು. ಸಂತ್ರಸ್ತ ವಿದ್ಯಾರ್ಥಿನಿಯ ಹಿರಿಯ ಸಹೋದರ ಯುಜಿಸಿಯ ಆ್ಯಂಟಿ ರ‍್ಯಾಗಿಂಗ್ ಸೆಲ್‌ಗೆ ದೂರು ನೀಡಿದ್ದರು. ಇದಾದ ಬಳಿಕ ಆ್ಯಂಟಿ ರ‍್ಯಾಗಿಂಗ್ ಸೆಲ್‌ನಿಂದ ಪ್ರಾಂಶುಪಾಲರಿಗೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಪತ್ರ ಬಂದಿತ್ತು. ಈ ಪ್ರಕರಣದಲ್ಲಿ 2022ರ ಎಂಬಿಬಿಎಸ್ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದರು.

ಇದನ್ನೂ ಓದಿ: ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು.. ರ‍್ಯಾಗಿಂಗ್ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.