ETV Bharat / bharat

ಕೇಂದ್ರದಲ್ಲಿ 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರವಿದೆ: ರಾಹುಲ್ ಗಾಂಧಿ

author img

By

Published : Dec 2, 2020, 1:26 PM IST

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಂದ್ರವನ್ನು 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರ ಎಂದು ಟೀಕಿಸಿದ್ದಾರೆ.

Rahul Gandhi
Rahul Gandhi

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಕೃಷಿ ಮಸೂದೆಗಳ ವಿರುದ್ಧ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೇಂದ್ರವನ್ನು 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರ ಎಂದು ಕರೆದಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಈಗ ಅವರು ಏನು ಮಾಡಿದ್ದಾರೆ?, ತಮ್ಮ ಸ್ನೇಹಿತರ ಆದಾಯವನ್ನು ನಾಲ್ಕು ಪಟ್ಟು ಹೆಚ್ಚಿಸಿ, ರೈತರ ಆದಾಯವನ್ನು ಅರ್ಧದಷ್ಟು ಕಡಿಮೆ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

  • कहा- किसान की आय दुगनी होगी।

    किया- ‘मित्रों’ की आय हुई चौगुनी और किसान की होगी आधी।

    झूठ की, लूट की, सूट-बूट की सरकार। pic.twitter.com/anSiQ8Zird

    — Rahul Gandhi (@RahulGandhi) December 2, 2020 " class="align-text-top noRightClick twitterSection" data=" ">

ಕಳೆದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ನೂತನ ಕೃಷಿ ಮಸೂದೆಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಮುಂದಾಯಿತು. ಆದರೆ ರೈತರು ಕೇಂದ್ರದ ಈ ಬೇಡಿಕೆಯನ್ನು ತಿರಸ್ಕರಿಸಿದ್ದು, ಪ್ರತಿಭಟನೆ ಮುಂದುವರೆಸಿದ್ದಾರೆ.

ಓದಿ: ಬೀದಿಯಲ್ಲಿ ಕುಳಿತು ಅನ್ನದಾತರು ಪ್ರತಿಭಟನೆ, ಟಿವಿಯಲ್ಲಿ ಸುಳ್ಳಿನ ಭಾಷಣ: ಮೋದಿ ವಿರುದ್ಧ ರಾಹುಲ್​ ವ್ಯಂಗ್ಯ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಕೃಷಿ ಮಸೂದೆಗಳ ವಿರುದ್ಧ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೇಂದ್ರವನ್ನು 'ಸುಳ್ಳು ಮತ್ತು ಲೂಟಿಕೋರರ' ಸರ್ಕಾರ ಎಂದು ಕರೆದಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಈಗ ಅವರು ಏನು ಮಾಡಿದ್ದಾರೆ?, ತಮ್ಮ ಸ್ನೇಹಿತರ ಆದಾಯವನ್ನು ನಾಲ್ಕು ಪಟ್ಟು ಹೆಚ್ಚಿಸಿ, ರೈತರ ಆದಾಯವನ್ನು ಅರ್ಧದಷ್ಟು ಕಡಿಮೆ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

  • कहा- किसान की आय दुगनी होगी।

    किया- ‘मित्रों’ की आय हुई चौगुनी और किसान की होगी आधी।

    झूठ की, लूट की, सूट-बूट की सरकार। pic.twitter.com/anSiQ8Zird

    — Rahul Gandhi (@RahulGandhi) December 2, 2020 " class="align-text-top noRightClick twitterSection" data=" ">

ಕಳೆದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ನೂತನ ಕೃಷಿ ಮಸೂದೆಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಮುಂದಾಯಿತು. ಆದರೆ ರೈತರು ಕೇಂದ್ರದ ಈ ಬೇಡಿಕೆಯನ್ನು ತಿರಸ್ಕರಿಸಿದ್ದು, ಪ್ರತಿಭಟನೆ ಮುಂದುವರೆಸಿದ್ದಾರೆ.

ಓದಿ: ಬೀದಿಯಲ್ಲಿ ಕುಳಿತು ಅನ್ನದಾತರು ಪ್ರತಿಭಟನೆ, ಟಿವಿಯಲ್ಲಿ ಸುಳ್ಳಿನ ಭಾಷಣ: ಮೋದಿ ವಿರುದ್ಧ ರಾಹುಲ್​ ವ್ಯಂಗ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.