ETV Bharat / bharat

ಮಹಿಳಾ ಮೀಸಲಾತಿ.. ದಿಕ್ಕು ತಪ್ಪಿಸುವ ತಂತ್ರ ಅನುಸರಿಸಿದ ಸರ್ಕಾರ: ರಾಹುಲ್ ಗಾಂಧಿ

author img

By ETV Bharat Karnataka Team

Published : Sep 22, 2023, 8:37 PM IST

Women's Reservation Bill: ಮಹಿಳಾ ಮೀಸಲಾತಿಯನ್ನು ವಿಳಂಬಗೊಳಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆ ತೆಗೆದುಕೊಂಡರು.

Congress MP Rahul Gandhi
ರಾಹುಲ್ ಗಾಂಧಿ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಲವಾಗಿ ಪ್ರತಿಪಾದಿಸಿದರು. ಜನಗಣತಿ ಮತ್ತು ಸೀಮಾರೇಖೆಯ ಷರತ್ತುಗಳನ್ನು ಸೇರಿಸುವುದನ್ನು ಟೀಕಿಸಿದರು. ಈ ಷರತ್ತುಗಳು ಮಸೂದೆಯ ಅನುಷ್ಠಾನವನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತವೆ ಎಂದು ಕಿಡಿಕಾರಿದರು.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಸರ್ಕಾರ ಜಾತಿವಾರು ಜನಗಣತಿ ನಡೆಸಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಜಾತಿ ಗಣತಿ ಮಾಹಿತಿ ಬಿಡುಗಡೆ ಮಾಡಬೇಕು'' ಎಂದು ಒತ್ತಾಯಿಸಿದರು. ''ಮಹಿಳೆಯರಿಗೆ ಇಂದೇ ಮೀಸಲಾತಿ ನೀಡಬಹುದು, ಆದರೆ, ಸರ್ಕಾರ ಅದನ್ನು ಮಾಡಲು ಬಯಸುವುದಿಲ್ಲ. ಗಮನ ಬೇರೆಡೆ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ. ಒಬಿಸಿ ಜನಗಣತಿಯಿಂದ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಭಾರತ ಸರ್ಕಾರದ 90 ಕಾರ್ಯದರ್ಶಿಗಳಲ್ಲಿ ಒಬಿಸಿ ವರ್ಗದ ಮೂವರು ಮಾತ್ರೆ ಏಕೆ ಇದ್ದಾರೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಬೇಕು'' ಎಂದು ರಾಹುಲ್​ ಗಾಂಧಿ ಒತ್ತಾಯಿಸಿದರು.

ದಿಕ್ಕು ತಪ್ಪಿಸುವ ತಂತ್ರ ಬಳಸುತ್ತಿರುವ ಸರ್ಕಾರ: ದೇಶದಲ್ಲಿ ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯವನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಬೆಂಬಲ ಸೂಚಿಸಿದ ಅವರು, ವಿಧೇಯಕ ಜಾರಿ ವಿಳಂಬವನ್ನು ಟೀಕಿಸಿದರು. ''ಸತ್ಯಾಂಶವೆಂದರೆ ಈ ಮೀಸಲಾತಿಯನ್ನು ಇಂದೇ ಜಾರಿಗೊಳಿಸಬಹುದು. ಹಾಗೆ ಮಾಡಲು ಸರ್ಕಾರದ ಹಿಂಜರಿಯುತ್ತಿದೆ. ಇದಲ್ಲದೆ, ನಿರ್ಣಾಯಕ ಜಾತಿ ಜನಗಣತಿಗಿಂತ ಮಹಿಳಾ ಮೀಸಲಾತಿ ಮಸೂದೆಗೆ ಆದ್ಯತೆ ನೀಡುವ ಮೂಲಕ ಸರ್ಕಾರವು ದಿಕ್ಕು ತಪ್ಪಿಸುವ ತಂತ್ರಗಳನ್ನು ಬಳಸುತ್ತಿದೆ'' ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಜಾತಿ ಗಣತಿ ದತ್ತಾಂಶವನ್ನು ಬಿಡುಗಡೆ ಮಾಡುವಂತೆ ಅವರು ಆಗ್ರಹಿಸಿದರು. ಮುಂದಿನ ಜನಗಣತಿಯಲ್ಲಿ ಜಾತಿ ದತ್ತಾಂಶವನ್ನು ಸೇರಿಸುವ ಮಹತ್ವವನ್ನು ಒತ್ತಿ ಹೇಳಿದರು. ಬಿಜೆಪಿ ಸಂಸದರನ್ನು ಸಂಸತ್ತಿನಲ್ಲಿ ಕೇವಲ ಪ್ರತಿಮೆಗಳಾಗಿ ಇರಿಸಲಾಗಿದೆ. ಅವರು ಸರ್ಕಾರದ ನೀತಿ ನಿರೂಪಣೆ ಅಥವಾ ಕಾನೂನು ರಚನೆ ಪ್ರಕ್ರಿಯೆಗಳಲ್ಲಿ ಅರ್ಥಪೂರ್ಣ ಭಾಗವಹಿತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ಮಸೂದೆ ವಿಳಂಬದ ಕುರಿತು ಅರ್ಥಮಾಡಿಕೊಳ್ಳಿ: ಮಸೂದೆಯನ್ನು ತ್ವರಿತವಾಗಿ ಜಾರಿಗೊಳಿಸಲು ಈ ನಿಬಂಧನೆಗಳನ್ನು ತೆಗೆದುಹಾಕಬೇಕೆಂದು ಪ್ರತಿಪಕ್ಷಗಳು ಒಗ್ಗೂಡಿ ಒತ್ತಾಯಿಸಿವೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಷರತ್ತುಗಳನ್ನು ಸಮರ್ಥಿಸಿಕೊಂಡಿದ್ದು, ಯಾವ ಸ್ಥಾನಗಳನ್ನು ಮೀಸಲಿಡಬೇಕು ಎಂಬುದನ್ನು ನಿರ್ಧರಿಸುವಲ್ಲಿ ಪಾರದರ್ಶಕತೆಯ ಅಗತ್ಯವನ್ನು ಉಲ್ಲೇಖಿಸಿದೆ. ಆದಾಗ್ಯೂ, ಈ ನಿಬಂಧನೆಗಳು ಮಸೂದೆಯ ಅನುಷ್ಠಾನವನ್ನು ಗಣನೀಯವಾಗಿ ವಿಳಂಬಗೊಳಿಸುತ್ತದೆ ಎಂದ ರಾಹುಲ್​ ಗಾಂಧಿ ಅವರು, ಈ ವಿಳಂಬ ನೀತಿಯನ್ನು ಅರ್ಥಮಾಡಿಕೊಳ್ಳುವಂತೆ ದೇಶದ ಮಹಿಳೆಯರನ್ನು ಕರೆ ನೀಡಿದರು.

ಇದನ್ನೂ ಓದಿ: ನಾರಿ ಶಕ್ತಿ ವಂದನ ಅಧಿನಿಯಮ್ ನವಭಾರತದ ಪ್ರಜಾಪ್ರಭುತ್ವ ಬದ್ಧತೆಯ ಸಂಕೇತ: ಪ್ರಧಾನಿ ಮೋದಿ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಲವಾಗಿ ಪ್ರತಿಪಾದಿಸಿದರು. ಜನಗಣತಿ ಮತ್ತು ಸೀಮಾರೇಖೆಯ ಷರತ್ತುಗಳನ್ನು ಸೇರಿಸುವುದನ್ನು ಟೀಕಿಸಿದರು. ಈ ಷರತ್ತುಗಳು ಮಸೂದೆಯ ಅನುಷ್ಠಾನವನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತವೆ ಎಂದು ಕಿಡಿಕಾರಿದರು.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಸರ್ಕಾರ ಜಾತಿವಾರು ಜನಗಣತಿ ನಡೆಸಬೇಕು. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಜಾತಿ ಗಣತಿ ಮಾಹಿತಿ ಬಿಡುಗಡೆ ಮಾಡಬೇಕು'' ಎಂದು ಒತ್ತಾಯಿಸಿದರು. ''ಮಹಿಳೆಯರಿಗೆ ಇಂದೇ ಮೀಸಲಾತಿ ನೀಡಬಹುದು, ಆದರೆ, ಸರ್ಕಾರ ಅದನ್ನು ಮಾಡಲು ಬಯಸುವುದಿಲ್ಲ. ಗಮನ ಬೇರೆಡೆ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ. ಒಬಿಸಿ ಜನಗಣತಿಯಿಂದ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಭಾರತ ಸರ್ಕಾರದ 90 ಕಾರ್ಯದರ್ಶಿಗಳಲ್ಲಿ ಒಬಿಸಿ ವರ್ಗದ ಮೂವರು ಮಾತ್ರೆ ಏಕೆ ಇದ್ದಾರೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ವಿವರಿಸಬೇಕು'' ಎಂದು ರಾಹುಲ್​ ಗಾಂಧಿ ಒತ್ತಾಯಿಸಿದರು.

ದಿಕ್ಕು ತಪ್ಪಿಸುವ ತಂತ್ರ ಬಳಸುತ್ತಿರುವ ಸರ್ಕಾರ: ದೇಶದಲ್ಲಿ ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯವನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಬೆಂಬಲ ಸೂಚಿಸಿದ ಅವರು, ವಿಧೇಯಕ ಜಾರಿ ವಿಳಂಬವನ್ನು ಟೀಕಿಸಿದರು. ''ಸತ್ಯಾಂಶವೆಂದರೆ ಈ ಮೀಸಲಾತಿಯನ್ನು ಇಂದೇ ಜಾರಿಗೊಳಿಸಬಹುದು. ಹಾಗೆ ಮಾಡಲು ಸರ್ಕಾರದ ಹಿಂಜರಿಯುತ್ತಿದೆ. ಇದಲ್ಲದೆ, ನಿರ್ಣಾಯಕ ಜಾತಿ ಜನಗಣತಿಗಿಂತ ಮಹಿಳಾ ಮೀಸಲಾತಿ ಮಸೂದೆಗೆ ಆದ್ಯತೆ ನೀಡುವ ಮೂಲಕ ಸರ್ಕಾರವು ದಿಕ್ಕು ತಪ್ಪಿಸುವ ತಂತ್ರಗಳನ್ನು ಬಳಸುತ್ತಿದೆ'' ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಜಾತಿ ಗಣತಿ ದತ್ತಾಂಶವನ್ನು ಬಿಡುಗಡೆ ಮಾಡುವಂತೆ ಅವರು ಆಗ್ರಹಿಸಿದರು. ಮುಂದಿನ ಜನಗಣತಿಯಲ್ಲಿ ಜಾತಿ ದತ್ತಾಂಶವನ್ನು ಸೇರಿಸುವ ಮಹತ್ವವನ್ನು ಒತ್ತಿ ಹೇಳಿದರು. ಬಿಜೆಪಿ ಸಂಸದರನ್ನು ಸಂಸತ್ತಿನಲ್ಲಿ ಕೇವಲ ಪ್ರತಿಮೆಗಳಾಗಿ ಇರಿಸಲಾಗಿದೆ. ಅವರು ಸರ್ಕಾರದ ನೀತಿ ನಿರೂಪಣೆ ಅಥವಾ ಕಾನೂನು ರಚನೆ ಪ್ರಕ್ರಿಯೆಗಳಲ್ಲಿ ಅರ್ಥಪೂರ್ಣ ಭಾಗವಹಿತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ಮಸೂದೆ ವಿಳಂಬದ ಕುರಿತು ಅರ್ಥಮಾಡಿಕೊಳ್ಳಿ: ಮಸೂದೆಯನ್ನು ತ್ವರಿತವಾಗಿ ಜಾರಿಗೊಳಿಸಲು ಈ ನಿಬಂಧನೆಗಳನ್ನು ತೆಗೆದುಹಾಕಬೇಕೆಂದು ಪ್ರತಿಪಕ್ಷಗಳು ಒಗ್ಗೂಡಿ ಒತ್ತಾಯಿಸಿವೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಷರತ್ತುಗಳನ್ನು ಸಮರ್ಥಿಸಿಕೊಂಡಿದ್ದು, ಯಾವ ಸ್ಥಾನಗಳನ್ನು ಮೀಸಲಿಡಬೇಕು ಎಂಬುದನ್ನು ನಿರ್ಧರಿಸುವಲ್ಲಿ ಪಾರದರ್ಶಕತೆಯ ಅಗತ್ಯವನ್ನು ಉಲ್ಲೇಖಿಸಿದೆ. ಆದಾಗ್ಯೂ, ಈ ನಿಬಂಧನೆಗಳು ಮಸೂದೆಯ ಅನುಷ್ಠಾನವನ್ನು ಗಣನೀಯವಾಗಿ ವಿಳಂಬಗೊಳಿಸುತ್ತದೆ ಎಂದ ರಾಹುಲ್​ ಗಾಂಧಿ ಅವರು, ಈ ವಿಳಂಬ ನೀತಿಯನ್ನು ಅರ್ಥಮಾಡಿಕೊಳ್ಳುವಂತೆ ದೇಶದ ಮಹಿಳೆಯರನ್ನು ಕರೆ ನೀಡಿದರು.

ಇದನ್ನೂ ಓದಿ: ನಾರಿ ಶಕ್ತಿ ವಂದನ ಅಧಿನಿಯಮ್ ನವಭಾರತದ ಪ್ರಜಾಪ್ರಭುತ್ವ ಬದ್ಧತೆಯ ಸಂಕೇತ: ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.