ETV Bharat / bharat

ಲೋಕಸಭೆಯಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಮೊದಲ ಮಾಧ್ಯಮಗೋಷ್ಟಿ

author img

By

Published : Mar 25, 2023, 11:25 AM IST

Updated : Mar 25, 2023, 11:41 AM IST

ಗುಜರಾತ್ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್​ ಗಾಂಧಿಯನ್ನು ತಪ್ಪಿತಸ್ಥ ಎಂದು ಘೋಷಿಸಿ, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಇಂದು ಮೊದಲ ಬಾರಿಗೆ ಮಾಧ್ಯಮಗೋಷ್ಟಿ ನಡೆಸಿ ಈ ಸಂಬಂಧ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

rahul gandhi
ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಿಂದ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಲಿದ್ದಾರೆ. 2019 ರ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಬಳಿಕ ಪ್ರಥಮ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಹುಲ್ ಕೇರಳದ ವಯನಾಡ್ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದರು. ಇದೀಗ, 2 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಕಾರಣ ನಿಯಮದಂತೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನ (ಮಾರ್ಚ್​ 24 ರಂದು) ಅನರ್ಹಗೊಳಿಸಿ ಆದೇಶಿಸಲಾಗಿದೆ. ರಾಹುಲ್​ ಎಂಪಿ ಸ್ಥಾನಮಾನವನ್ನು ಕಳೆದುಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹೊಡೆತ ನೀಡಿದೆ. ಏಕೆಂದರೆ, ಅವರು ಅಖಿಲ ಭಾರತ ಕಾಂಗ್ರೆಸ್​ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ ನಂತರ ಮೊದಲ ಬಾರಿಗೆ ಗುರುವಾರ ಟ್ವೀಟ್​ ಮಾಡಿ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್​ ನಾಯಕ ರಾಗಾ, "ಭಾರತದ ಧ್ವನಿಗಾಗಿ ನಾನು ಹೋರಾಡುತ್ತಿದ್ದೇನೆ. ಇದಕ್ಕಾಗಿ "ಯಾವುದೇ ಬೆಲೆ ತೆರಲು" ಸಿದ್ಧ ಎಂದಿದ್ದರು.

ಚುನಾವಣೆ ಘೋಷಣೆ ಸಾಧ್ಯತೆ: ರಾಹುಲ್​ ಅನರ್ಹಗೊಂಡ ಪರಿಣಾಮ ವಯನಾಡ್ ಎಂಪಿ ಸ್ಥಾನ ಖಾಲಿಯಾಗಿದೆ. ಹೀಗಾಗಿ,, ಚುನಾವಣಾ ಆಯೋಗವು ವಯನಾಡ್‌ಗೆ ಹೊಸದಾಗಿ ಉಪ ಚುನಾವಣೆ ಘೋಷಣೆ ಮಾಡಬಹುದು. ಅಲ್ಲದೇ, ಅನರ್ಹತೆಯ ತೀರ್ಪನ್ನು ಉನ್ನತ ನ್ಯಾಯಾಲಯವು ವಜಾ ಮಾಡದಿದ್ದರೆ ಮುಂದಿನ 6 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಈಗಾಗಲೇ ಭಾರತದ ರಾಜಕೀಯದಲ್ಲಿ ತನ್ನ ನೆಲೆ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ಈ ವಿಚಾರ ಮತ್ತಷ್ಟು ಆಘಾತ ನೀಡಿದೆ.

ಇದನ್ನೂ ಓದಿ: 'ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇಂದು ಕರಾಳ ದಿನ': ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಪ್ರತಿಪಕ್ಷದ ನಾಯಕರು

ಏನಿದು ಪ್ರಕರಣ? : 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ನೀರವ್‌ ಮೋದಿಯಾಗಿರಲಿ, ಲಲಿತ್‌ ಮೋದಿಯಾಗಿರಲಿ ಅಥವಾ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಕಳ್ಳರ ಸರ್‌ ನೇಮ್‌ ಮೋದಿಯೇ ಆಗಿರುವುದೇಕೆ? ಎಂದು ಪ್ರಶ್ನಿಸಿದ್ದರು. ಈ ಕುರಿತು ಗುಜರಾತ್‌ನ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ರಾಹುಲ್‌ ಗಾಂಧಿ ವಿರುದ್ಧ ಕ್ರಿಮಿನಲ್​ ಮಾನಹಾನಿ ಪ್ರಕರಣ ದಾಖಲಿಸಿ ಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಮೋದಿ ಉಪನಾಮ ಪ್ರಕರಣ: ಏ.12 ರಂದು ಪಾಟ್ನಾ ಕೋರ್ಟ್​ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ರಾಹುಲ್ ಪರ ನಿಂತ ವಿವಿಧ ಪಕ್ಷಗಳ ನಾಯಕರು: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ರಾಹುಲ್​ ಪರವಾಗಿ ದೇಶದ ವಿವಿಧ ಪಕ್ಷಗಳ ನಾಯಕರು ಬೆಂಬಲಕ್ಕೆ ನಿಂತಿದ್ದಾರೆ. ಕರ್ನಾಟಕದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ತಮಿಳುನಾಡಿನ ಸಿಎಂ ಎಂಕೆ ಸ್ಟಾಲಿನ್​, ತೆಲಂಗಾಣ ಸಿಎಂ ಕೆ ಚಂದ್ರಶೇಖರ್​ ರಾವ್, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್,​ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು​ ರಾಹುಲ್​ ಅನರ್ಹತೆ ಆದೇಶವನ್ನು ವಿರೋಧಿಸಿದ್ದಾರೆ. ಅಷ್ಟೇ ಅಲ್ಲದೆ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಿಂದ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಲಿದ್ದಾರೆ. 2019 ರ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಬಳಿಕ ಪ್ರಥಮ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಹುಲ್ ಕೇರಳದ ವಯನಾಡ್ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದರು. ಇದೀಗ, 2 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಕಾರಣ ನಿಯಮದಂತೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನ (ಮಾರ್ಚ್​ 24 ರಂದು) ಅನರ್ಹಗೊಳಿಸಿ ಆದೇಶಿಸಲಾಗಿದೆ. ರಾಹುಲ್​ ಎಂಪಿ ಸ್ಥಾನಮಾನವನ್ನು ಕಳೆದುಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹೊಡೆತ ನೀಡಿದೆ. ಏಕೆಂದರೆ, ಅವರು ಅಖಿಲ ಭಾರತ ಕಾಂಗ್ರೆಸ್​ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ ನಂತರ ಮೊದಲ ಬಾರಿಗೆ ಗುರುವಾರ ಟ್ವೀಟ್​ ಮಾಡಿ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್​ ನಾಯಕ ರಾಗಾ, "ಭಾರತದ ಧ್ವನಿಗಾಗಿ ನಾನು ಹೋರಾಡುತ್ತಿದ್ದೇನೆ. ಇದಕ್ಕಾಗಿ "ಯಾವುದೇ ಬೆಲೆ ತೆರಲು" ಸಿದ್ಧ ಎಂದಿದ್ದರು.

ಚುನಾವಣೆ ಘೋಷಣೆ ಸಾಧ್ಯತೆ: ರಾಹುಲ್​ ಅನರ್ಹಗೊಂಡ ಪರಿಣಾಮ ವಯನಾಡ್ ಎಂಪಿ ಸ್ಥಾನ ಖಾಲಿಯಾಗಿದೆ. ಹೀಗಾಗಿ,, ಚುನಾವಣಾ ಆಯೋಗವು ವಯನಾಡ್‌ಗೆ ಹೊಸದಾಗಿ ಉಪ ಚುನಾವಣೆ ಘೋಷಣೆ ಮಾಡಬಹುದು. ಅಲ್ಲದೇ, ಅನರ್ಹತೆಯ ತೀರ್ಪನ್ನು ಉನ್ನತ ನ್ಯಾಯಾಲಯವು ವಜಾ ಮಾಡದಿದ್ದರೆ ಮುಂದಿನ 6 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಈಗಾಗಲೇ ಭಾರತದ ರಾಜಕೀಯದಲ್ಲಿ ತನ್ನ ನೆಲೆ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ಈ ವಿಚಾರ ಮತ್ತಷ್ಟು ಆಘಾತ ನೀಡಿದೆ.

ಇದನ್ನೂ ಓದಿ: 'ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇಂದು ಕರಾಳ ದಿನ': ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಪ್ರತಿಪಕ್ಷದ ನಾಯಕರು

ಏನಿದು ಪ್ರಕರಣ? : 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ನೀರವ್‌ ಮೋದಿಯಾಗಿರಲಿ, ಲಲಿತ್‌ ಮೋದಿಯಾಗಿರಲಿ ಅಥವಾ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಕಳ್ಳರ ಸರ್‌ ನೇಮ್‌ ಮೋದಿಯೇ ಆಗಿರುವುದೇಕೆ? ಎಂದು ಪ್ರಶ್ನಿಸಿದ್ದರು. ಈ ಕುರಿತು ಗುಜರಾತ್‌ನ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ರಾಹುಲ್‌ ಗಾಂಧಿ ವಿರುದ್ಧ ಕ್ರಿಮಿನಲ್​ ಮಾನಹಾನಿ ಪ್ರಕರಣ ದಾಖಲಿಸಿ ಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಮೋದಿ ಉಪನಾಮ ಪ್ರಕರಣ: ಏ.12 ರಂದು ಪಾಟ್ನಾ ಕೋರ್ಟ್​ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ರಾಹುಲ್ ಪರ ನಿಂತ ವಿವಿಧ ಪಕ್ಷಗಳ ನಾಯಕರು: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ರಾಹುಲ್​ ಪರವಾಗಿ ದೇಶದ ವಿವಿಧ ಪಕ್ಷಗಳ ನಾಯಕರು ಬೆಂಬಲಕ್ಕೆ ನಿಂತಿದ್ದಾರೆ. ಕರ್ನಾಟಕದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ತಮಿಳುನಾಡಿನ ಸಿಎಂ ಎಂಕೆ ಸ್ಟಾಲಿನ್​, ತೆಲಂಗಾಣ ಸಿಎಂ ಕೆ ಚಂದ್ರಶೇಖರ್​ ರಾವ್, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್,​ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು​ ರಾಹುಲ್​ ಅನರ್ಹತೆ ಆದೇಶವನ್ನು ವಿರೋಧಿಸಿದ್ದಾರೆ. ಅಷ್ಟೇ ಅಲ್ಲದೆ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Last Updated : Mar 25, 2023, 11:41 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.