ETV Bharat / bharat

ತಮಿಳುನಾಡಲ್ಲಿ ಪ್ರವಾಹ: ಕೇಂದ್ರ ಸರ್ಕಾರದಿಂದ ಪರಿಹಾರ ಕೋರಿದ ಸಿಎಂ - ಎಂ.ಕೆ ಸ್ಟಾಲಿನ್‌

ತಮಿಳುನಾಡಿನಲ್ಲಿ ಈ ವರ್ಷ ಭಾರೀ ಪ್ರವಾಹ ಉಂಟಾಗಿದ್ದು, ಹಲವಾರು ಜನರು ಆಸ್ತಿ ಪಾಸ್ತಿ ಮನೆ ಮಠ ಕಳೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಪರಿಹಾರ ಕೋರಿದ ಸಿಎಂ
ಕೇಂದ್ರ ಸರ್ಕಾರದಿಂದ ಪರಿಹಾರ ಕೋರಿದ ಸಿಎಂ
author img

By

Published : Nov 25, 2021, 6:19 AM IST

ಚೆನ್ನೈ: ಈ ವರ್ಷ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಪ್ರವಾಹ ಉಂಟಾಗಿದೆ. ಇದರ ನಡುವೆ 4625.80 ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ಸಿಎಂ ಎಂ.ಕೆ ಸ್ಟಾಲಿನ್‌ ಮನವಿ ಮಾಡಿದ್ದಾರೆ.

ಇನ್ನು ಪ್ರವಾಹದ ಹಾನಿಯನ್ನು ಸರಿಪಡಿಸಲು 549.63 ಕೋಟಿ ರೂ.ಗಳ ಪರಿಹಾರ ಧನ ಅಗತ್ಯವಿದೆ, ಶಾಶ್ವತ ನವೀಕರಣಕ್ಕಾಗಿ 2079.89 ಕೋಟಿ ರೂ. ಅಗತ್ಯವಿದೆ, ವಿಪತ್ತು ಪರಿಹಾರ ನಿಧಿಯಿಂದ ಒಟ್ಟು 2629.29 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಬೇಕು ಎಂದು ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ: ಮೇಘಾಲಯ: ಮಾಜಿ ಸಿಎಂ ಸೇರಿದಂತೆ ರಾತ್ರೋರಾತ್ರಿ ತೃಣಮೂಲ ಪಕ್ಷಕ್ಕೆ ಸೇರಿದ 12 ಕಾಂಗ್ರೆಸ್ ಶಾಸಕರು

ವರದಿ ಸಲ್ಲಿಸಿದ ನಂತರ ಹೆಚ್ಚುವರಿ ಹಾನಿಯ ವಿವರಗಳ ಬಗ್ಗೆ ತಿಳಿಸಲಾಗುವುದು. ಈಗ ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ರೂ.521.28 ಕೋಟಿ ಮತ್ತು ಶಾಶ್ವತ ನೆಲೆಗಾಗಿ ರೂ.1475.22 ಕೋಟಿ ಅಂದರೆ ಒಟ್ಟು ರೂ.1996.50 ಕೋಟಿ ಅಗತ್ಯವಿದೆ ಎಂದು ಅಂದಾಜಿಸಿದೆ.

ಚೆನ್ನೈ: ಈ ವರ್ಷ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಪ್ರವಾಹ ಉಂಟಾಗಿದೆ. ಇದರ ನಡುವೆ 4625.80 ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ಸಿಎಂ ಎಂ.ಕೆ ಸ್ಟಾಲಿನ್‌ ಮನವಿ ಮಾಡಿದ್ದಾರೆ.

ಇನ್ನು ಪ್ರವಾಹದ ಹಾನಿಯನ್ನು ಸರಿಪಡಿಸಲು 549.63 ಕೋಟಿ ರೂ.ಗಳ ಪರಿಹಾರ ಧನ ಅಗತ್ಯವಿದೆ, ಶಾಶ್ವತ ನವೀಕರಣಕ್ಕಾಗಿ 2079.89 ಕೋಟಿ ರೂ. ಅಗತ್ಯವಿದೆ, ವಿಪತ್ತು ಪರಿಹಾರ ನಿಧಿಯಿಂದ ಒಟ್ಟು 2629.29 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಬೇಕು ಎಂದು ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ: ಮೇಘಾಲಯ: ಮಾಜಿ ಸಿಎಂ ಸೇರಿದಂತೆ ರಾತ್ರೋರಾತ್ರಿ ತೃಣಮೂಲ ಪಕ್ಷಕ್ಕೆ ಸೇರಿದ 12 ಕಾಂಗ್ರೆಸ್ ಶಾಸಕರು

ವರದಿ ಸಲ್ಲಿಸಿದ ನಂತರ ಹೆಚ್ಚುವರಿ ಹಾನಿಯ ವಿವರಗಳ ಬಗ್ಗೆ ತಿಳಿಸಲಾಗುವುದು. ಈಗ ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ರೂ.521.28 ಕೋಟಿ ಮತ್ತು ಶಾಶ್ವತ ನೆಲೆಗಾಗಿ ರೂ.1475.22 ಕೋಟಿ ಅಂದರೆ ಒಟ್ಟು ರೂ.1996.50 ಕೋಟಿ ಅಗತ್ಯವಿದೆ ಎಂದು ಅಂದಾಜಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.