ETV Bharat / bharat

ರಾಮೇಶ್ವರಂನ ರಾಮನಾಥಸ್ವಾಮಿ ದೇಗುಲಕ್ಕೆ ನುಗ್ಗಿದ ಮಳೆ ನೀರು.. ಬೇಸರ ವ್ಯಕ್ತಪಡಿಸಿದ ಭಕ್ತರು

ತಮಿಳುನಾಡಿನ ರಾಮೇಶ್ವರಂನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ರಾಮನಾಥಸ್ವಾಮಿ ದೇಗುಲದೊಳಗೆ ಮಳೆ ನೀರಿನಲ್ಲೇ ಭಕ್ತರು ನಡೆದುಕೊಂಡು ಹೋಗಬೇಕಾದ ಸ್ಥಿತಿ ಉಲ್ಬಣಗೊಂಡಿದೆ. ಹೀಗಾಗಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ.

author img

By ETV Bharat Karnataka Team

Published : Oct 20, 2023, 9:44 AM IST

Rainwater enters Ramanathaswamy temple  Ramanathaswamy temple in Rameswaram  Rameswaram temple rainwater  Tamil Nadu news temple water  ರಾಮನಾಥಸ್ವಾಮಿ ದೇಗುಲಕ್ಕೆ ನುಗ್ಗಿದ ಮಳೆ ನೀರು  ಬೇಸರ ವ್ಯಕ್ತಪಡಿಸಿದ ಭಕ್ತರು  ರಾಮೇಶ್ವರಂನಲ್ಲಿ ಗುಡುಗು ಸಹಿತ ಭಾರಿ ಮಳೆ  ದೇಗುಲದೊಳಗೆ ಮಳೆ ನೀರಿನಲ್ಲೇ ಭಕ್ತರು  23ರವರೆಗೆ ತಮಿಳುನಾಡಿನಲ್ಲಿ ಮಳೆ  ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶಗಳಲ್ಲಿ ಜಲಾವೃತ
ರಾಮೇಶ್ವರಂನ ರಾಮನಾಥಸ್ವಾಮಿ ದೇಗುಲಕ್ಕೆ ನುಗ್ಗಿದ ಮಳೆ ನೀರು

ರಾಮನಾಥಪುರಂ, ತಮಿಳುನಾಡು : ರಾಮೇಶ್ವರಂನಲ್ಲಿರುವ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಗುರುವಾರ ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೇ ಸುರಿದ ಮಳೆಯಿಂದಾಗಿ ಮಳೆ ನೀರು ನುಗ್ಗಿದೆ. ಗುರುವಾರ ಬೆಳಗ್ಗೆ ರಾಮೇಶ್ವರಂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.

ಭಾರೀ ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ. ಇದರಿಂದ ಪ್ರಸಿದ್ಧ ರಾಮನಾಥಸ್ವಾಮಿ ದೇವಸ್ಥಾನದ ಮೂರನೇ ‘ಪ್ರಾಕಾರ’ದಲ್ಲಿ ಮಳೆ ನೀರು ನಿಂತು ಅಸ್ತವ್ಯಸ್ತವಾಗಿತ್ತು. ಇದರಿಂದ ದೇಗುಲದ ಆವರಣದೊಳಗೆ ಜಲಾವೃತಗೊಂಡಿದ್ದು, ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ಮಳೆನೀರಿನಲ್ಲಿಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಾಮನಾಥಸ್ವಾಮಿ ದೇಗುಲದಲ್ಲಿ ಮಳೆನೀರಿನ ಸಮಸ್ಯೆ ಕೆಲ ದಿನಗಳಿಂದ ತಲೆದೋರಿತ್ತು. ಮುಂದಿನ ದಿನಗಳಲ್ಲಿ ದೇವಸ್ಥಾನದ ಒಳಗೆ ಮಳೆ ನೀರು ಶೇಖರಣೆಯಾಗದಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಕ್ತ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕು. ಭಾರಿ ಮಳೆಯ ಸಮಯದಲ್ಲಿ ದೇವಾಲಯದ ಒಳ ಆವರಣವು ಜಲಾವೃತವಾಗದಂತೆ ನಿರ್ವಹಣೆ ಮತ್ತು ಪ್ಲಗ್ ಸೋರಿಕೆಯನ್ನು ಸುಧಾರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಕ್ತರು ಒತ್ತಾಯಿಸಿದರು.

ರಾಮನಾಥಸ್ವಾಮಿ ದೇವಾಲಯವು ಶಿವನಿಗೆ ಅರ್ಪಿತವಾದ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ತಮಿಳುನಾಡಿನ ರಾಮೇಶ್ವರಂನಲ್ಲಿದೆ. ಈ ದೇವಸ್ಥಾನಕ್ಕೆ ಪ್ರತಿನಿತ್ಯ ಜಿಲ್ಲೆ ಮತ್ತು ರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

23ರವರೆಗೆ ತಮಿಳುನಾಡಿನಲ್ಲಿ ಮಳೆ: ಆಗ್ನೇಯ ಕರಾವಳಿ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಅಕ್ಟೋಬರ್ 23 ರವರೆಗೆ ತಮಿಳುನಾಡು, ಪುದುಚೇರಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಚೆನ್ನೈ ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರದಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನ ಒಂದೆರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಚೆನ್ನೈ ಮತ್ತು ಅದರ ಉಪನಗರಗಳಲ್ಲಿ ಹವಾಮಾನ ಮುನ್ಸೂಚನೆಯು ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣದಿಂದ ಕೂಡಿರುತ್ತದೆ. ನಗರದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಬಹುದಾಗಿದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25-26 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣದಿಂದ ಕೂಡಿರುತ್ತದೆ. ನಗರದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಅರಬ್ಬಿ ಸಮುದ್ರ ಮತ್ತು ನೈಋತ್ಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರದೊಳಗೆ ತೆರಳದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಓದಿ: ಆಧ್ಯಾತ್ಮಿಕ ನಾಯಕ ಬಂಗಾರು ಅಡಿಗಲರ್ ನಿಧನ- ಸಂತಾಪ ಸೂಚಿಸಿದ ಸಿಎಂ ಸ್ಟಾಲಿನ್

ರಾಮನಾಥಪುರಂ, ತಮಿಳುನಾಡು : ರಾಮೇಶ್ವರಂನಲ್ಲಿರುವ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಗುರುವಾರ ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೇ ಸುರಿದ ಮಳೆಯಿಂದಾಗಿ ಮಳೆ ನೀರು ನುಗ್ಗಿದೆ. ಗುರುವಾರ ಬೆಳಗ್ಗೆ ರಾಮೇಶ್ವರಂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.

ಭಾರೀ ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ. ಇದರಿಂದ ಪ್ರಸಿದ್ಧ ರಾಮನಾಥಸ್ವಾಮಿ ದೇವಸ್ಥಾನದ ಮೂರನೇ ‘ಪ್ರಾಕಾರ’ದಲ್ಲಿ ಮಳೆ ನೀರು ನಿಂತು ಅಸ್ತವ್ಯಸ್ತವಾಗಿತ್ತು. ಇದರಿಂದ ದೇಗುಲದ ಆವರಣದೊಳಗೆ ಜಲಾವೃತಗೊಂಡಿದ್ದು, ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ಮಳೆನೀರಿನಲ್ಲಿಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಾಮನಾಥಸ್ವಾಮಿ ದೇಗುಲದಲ್ಲಿ ಮಳೆನೀರಿನ ಸಮಸ್ಯೆ ಕೆಲ ದಿನಗಳಿಂದ ತಲೆದೋರಿತ್ತು. ಮುಂದಿನ ದಿನಗಳಲ್ಲಿ ದೇವಸ್ಥಾನದ ಒಳಗೆ ಮಳೆ ನೀರು ಶೇಖರಣೆಯಾಗದಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಕ್ತ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕು. ಭಾರಿ ಮಳೆಯ ಸಮಯದಲ್ಲಿ ದೇವಾಲಯದ ಒಳ ಆವರಣವು ಜಲಾವೃತವಾಗದಂತೆ ನಿರ್ವಹಣೆ ಮತ್ತು ಪ್ಲಗ್ ಸೋರಿಕೆಯನ್ನು ಸುಧಾರಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಕ್ತರು ಒತ್ತಾಯಿಸಿದರು.

ರಾಮನಾಥಸ್ವಾಮಿ ದೇವಾಲಯವು ಶಿವನಿಗೆ ಅರ್ಪಿತವಾದ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ತಮಿಳುನಾಡಿನ ರಾಮೇಶ್ವರಂನಲ್ಲಿದೆ. ಈ ದೇವಸ್ಥಾನಕ್ಕೆ ಪ್ರತಿನಿತ್ಯ ಜಿಲ್ಲೆ ಮತ್ತು ರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

23ರವರೆಗೆ ತಮಿಳುನಾಡಿನಲ್ಲಿ ಮಳೆ: ಆಗ್ನೇಯ ಕರಾವಳಿ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಅಕ್ಟೋಬರ್ 23 ರವರೆಗೆ ತಮಿಳುನಾಡು, ಪುದುಚೇರಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಚೆನ್ನೈ ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರದಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನ ಒಂದೆರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಚೆನ್ನೈ ಮತ್ತು ಅದರ ಉಪನಗರಗಳಲ್ಲಿ ಹವಾಮಾನ ಮುನ್ಸೂಚನೆಯು ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣದಿಂದ ಕೂಡಿರುತ್ತದೆ. ನಗರದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಬಹುದಾಗಿದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25-26 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣದಿಂದ ಕೂಡಿರುತ್ತದೆ. ನಗರದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ಅರಬ್ಬಿ ಸಮುದ್ರ ಮತ್ತು ನೈಋತ್ಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರದೊಳಗೆ ತೆರಳದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಓದಿ: ಆಧ್ಯಾತ್ಮಿಕ ನಾಯಕ ಬಂಗಾರು ಅಡಿಗಲರ್ ನಿಧನ- ಸಂತಾಪ ಸೂಚಿಸಿದ ಸಿಎಂ ಸ್ಟಾಲಿನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.