ETV Bharat / bharat

ಶನಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ.. ನಾಲ್ವರ ಸಾವು, 18 ಮಂದಿಗೆ ಗಾಯ

author img

By ANI

Published : Oct 14, 2023, 10:40 AM IST

ರಾಜಸ್ಥಾನದ ಪ್ರತಾಪಗಢದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ.

4 people dead  injured after bus collides with trolly  bus collides with trolly in Pratapgarh  ಶನಿ ಮಹಾರಾಜರ ದರ್ಶನ  ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ  ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ  ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತ  ಗಾಯಾಳುಗಳನ್ನು ಪ್ರತಾಪಗಢ ಜಿಲ್ಲಾಸ್ಪತ್ರೆಗೆ  ಸನ್ವಾರಿಯಾ ಜೀ ಮತ್ತು ಶನಿ ಮಹಾರಾಜರ ದರ್ಶನ  ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ
ಶನಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ

ಪ್ರತಾಪಗಢ, ರಾಜಸ್ಥಾನ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಕಚೋಟಿಯಾ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪ್ರತಾಪಗಢ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಡಾ.ಇಂದರ್ಜಿತ್ ಯಾದವ್ ಮತ್ತು ಎಸ್ಪಿ ಅಮಿತ್ ಕುಮಾರ್ ಜಿಲ್ಲಾಸ್ಪತ್ರೆಗೆ ತರಳಿ, ವೈದ್ಯರೊಂದಿಗೆ ಮಾತನಾಡಿ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದರು.

ಶನಿವಾರ ಬೆಳಗಿನ ಜಾವ 4.30ರ ಸುಮಾರಿಗೆ ಶನಿ ಅಮಾವಾಸ್ಯೆಯಂದು ಸನ್ವಾರಿಯಾ ಜೀ ಮತ್ತು ಶನಿ ಮಹಾರಾಜರ ದರ್ಶನಕ್ಕಾಗಿ 41 ಜನರೊಂದಿಗೆ ನಮ್ಮ ಗ್ರಾಮದಿಂದ ಹೊರಟಿದ್ದೆವು ಎಂದು ಲಂಬಾಬ್ರಾದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೀವನ್‌ಲಾಲ್ ತಿಳಿಸಿದ್ದಾರೆ.

ಗ್ರಾಮದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 56ರಲ್ಲಿ ನಮ್ಮ ಬಸ್​ ಓವರ್ ಟೇಕ್ ಮಾಡಲು ಯತ್ನಿಸುತ್ತಿತ್ತು. ಈ ವೇಳೆ, ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರೈಲರ್​ಗೆ ನಾವು ಸಂಚರಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಎಲ್ಲ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಒಟ್ಟು 41 ಜನರು ಪ್ರಯಾಣಿಸುತ್ತಿದ್ದೆವು ಎಂದು ಜೀವನ್​ಲಾಲ್​ ಹೇಳಿದರು.

ಸುದ್ದಿ ತಿಳಿದ ತಕ್ಷಣ ಗ್ರಾಮಸ್ಥರು ಹಾಗೂ ಗಾಯಾಳುಗಳ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ತಲುಪಿದ್ದಾರೆ. ಹೀಗಾಗಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಯ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶನಿವಾರದಂದು ಲಂಬಾಬ್ರಾ ಮತ್ತು ಕಟಾರೋ ಕಾ ಖೇಡಾ ಗ್ರಾಮಗಳ 41 ಜನರು ಸನ್ವಾಲಿಯಾ ಜಿ ಮತ್ತು ಶನಿ ಮಹಾರಾಜರ ದರ್ಶನಕ್ಕೆ ಬಸ್‌ನಲ್ಲಿ ಹೋಗುತ್ತಿದ್ದಾಗ ಸುಹಾಗ್‌ಪುರ ಪಂಚಾಯತ್ ಸಮಿತಿ ವ್ಯಾಪ್ತಿಯ ಕಚೋಟಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರೆಲ್ಲರ ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಲ್ಲದೇ, ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಇನ್ನು ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓದಿ: ಬೈಕ್​ನಲ್ಲಿ ಚಲಿಸುತ್ತಿರುವಾಗಲೇ ಟಿಪ್ಪರ್​ ಚಕ್ರಕ್ಕೆ ಸಿಲುಕಿದ ವ್ಯಕ್ತಿ.. 2 ಕಾಲುಗಳಿಗೂ ಗಂಭೀರ ಗಾಯ - ವಿಡಿಯೋ

ಪ್ರತಾಪಗಢ, ರಾಜಸ್ಥಾನ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಕಚೋಟಿಯಾ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪ್ರತಾಪಗಢ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಡಾ.ಇಂದರ್ಜಿತ್ ಯಾದವ್ ಮತ್ತು ಎಸ್ಪಿ ಅಮಿತ್ ಕುಮಾರ್ ಜಿಲ್ಲಾಸ್ಪತ್ರೆಗೆ ತರಳಿ, ವೈದ್ಯರೊಂದಿಗೆ ಮಾತನಾಡಿ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದರು.

ಶನಿವಾರ ಬೆಳಗಿನ ಜಾವ 4.30ರ ಸುಮಾರಿಗೆ ಶನಿ ಅಮಾವಾಸ್ಯೆಯಂದು ಸನ್ವಾರಿಯಾ ಜೀ ಮತ್ತು ಶನಿ ಮಹಾರಾಜರ ದರ್ಶನಕ್ಕಾಗಿ 41 ಜನರೊಂದಿಗೆ ನಮ್ಮ ಗ್ರಾಮದಿಂದ ಹೊರಟಿದ್ದೆವು ಎಂದು ಲಂಬಾಬ್ರಾದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೀವನ್‌ಲಾಲ್ ತಿಳಿಸಿದ್ದಾರೆ.

ಗ್ರಾಮದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 56ರಲ್ಲಿ ನಮ್ಮ ಬಸ್​ ಓವರ್ ಟೇಕ್ ಮಾಡಲು ಯತ್ನಿಸುತ್ತಿತ್ತು. ಈ ವೇಳೆ, ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರೈಲರ್​ಗೆ ನಾವು ಸಂಚರಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಎಲ್ಲ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಒಟ್ಟು 41 ಜನರು ಪ್ರಯಾಣಿಸುತ್ತಿದ್ದೆವು ಎಂದು ಜೀವನ್​ಲಾಲ್​ ಹೇಳಿದರು.

ಸುದ್ದಿ ತಿಳಿದ ತಕ್ಷಣ ಗ್ರಾಮಸ್ಥರು ಹಾಗೂ ಗಾಯಾಳುಗಳ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ತಲುಪಿದ್ದಾರೆ. ಹೀಗಾಗಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಯ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶನಿವಾರದಂದು ಲಂಬಾಬ್ರಾ ಮತ್ತು ಕಟಾರೋ ಕಾ ಖೇಡಾ ಗ್ರಾಮಗಳ 41 ಜನರು ಸನ್ವಾಲಿಯಾ ಜಿ ಮತ್ತು ಶನಿ ಮಹಾರಾಜರ ದರ್ಶನಕ್ಕೆ ಬಸ್‌ನಲ್ಲಿ ಹೋಗುತ್ತಿದ್ದಾಗ ಸುಹಾಗ್‌ಪುರ ಪಂಚಾಯತ್ ಸಮಿತಿ ವ್ಯಾಪ್ತಿಯ ಕಚೋಟಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರೆಲ್ಲರ ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಲ್ಲದೇ, ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಇನ್ನು ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓದಿ: ಬೈಕ್​ನಲ್ಲಿ ಚಲಿಸುತ್ತಿರುವಾಗಲೇ ಟಿಪ್ಪರ್​ ಚಕ್ರಕ್ಕೆ ಸಿಲುಕಿದ ವ್ಯಕ್ತಿ.. 2 ಕಾಲುಗಳಿಗೂ ಗಂಭೀರ ಗಾಯ - ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.