ETV Bharat / bharat

'ಮುಂದಿನ ಅಧಿಕಾರಾವಧಿಗೆ ನನ್ನ ಶುಭಾಶಯಗಳು'... ದೀದಿಗೆ ವಿಶ್​ ಮಾಡಿದ ರಾಜನಾಥ್​ ಸಿಂಗ್​

author img

By

Published : May 2, 2021, 5:55 PM IST

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಅವಧಿಗೆ ತೃಣಮೂಲ ಕಾಂಗ್ರೆಸ್​ ಅಧಿಕಾರ ರಚನೆ ಮಾಡುವುದು ಬಹುತೇಕ ಖಚಿತಗೊಂಡಿದ್ದು, ಟಿಎಂಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಅನೇಕ ಮುಖಂಡರು ಮಮತಾ ಬ್ಯಾನರ್ಜಿಗೆ ಅಭಿನಂಧನೆ ಸಲ್ಲಿಸುತ್ತಿದ್ದಾರೆ.

Rajnath Singh
Rajnath Singh

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ.

  • Congratulations to the Chief Minister of West Bengal, @MamataOfficial Didi on her party’s victory in West Bengal assembly elections. My best wishes to her for her next tenure.

    — Rajnath Singh (@rajnathsingh) May 2, 2021 " class="align-text-top noRightClick twitterSection" data=" ">

Congratulations to the Chief Minister of West Bengal, @MamataOfficial Didi on her party’s victory in West Bengal assembly elections. My best wishes to her for her next tenure.

— Rajnath Singh (@rajnathsingh) May 2, 2021

215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​​ ಮಮತಾ ಬ್ಯಾನರ್ಜಿಗೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವುದಕ್ಕೆ ಅಭಿನಂದನೆಗಳು. ಮುಂದಿನ ಅಧಿಕಾರಾವಧಿಗೆ ನನ್ನ ಶುಭಾಶಯಗಳು ಎಂದು ಟ್ವೀಟ್​ ಮಾಡಿದ್ದಾರೆ. ಇದರ ಜೊತೆಗೆ ತಮಿಳುನಾಡಿನಲ್ಲಿ ಗೆಲುವು ಸಾಧಿಸುತ್ತಿರುವ ಡಿಎಂಕೆ ಹಾಗೂ ಕೇರಳದ ಪಿಣರಾಯಿ ವಿಜಯನ್​ಗೂ ರಾಜನಾಥ್​ ಸಿಂಗ್​​ ಅಭಿನಂದನೆ ಸಲ್ಲಿಸಿದ್ದಾರೆ.

ಈಗಾಗಲೇ ಮಮತಾ ಬ್ಯಾನರ್ಜಿಗೆ ಅಖಿಲೇಶ್​ ಯಾದವ್​, ಶಿವಸೇನೆ ಹಾಗೂ ಎನ್​ಸಿಪಿ ಮುಖಂಡ ಶರದ್​ ಪವಾರ್​ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. 294 ಕ್ಷೇತ್ರಗಳ ಪಶ್ಚಿಮ ಬಂಗಾಳ ವಿಧಾನಸಭೆಗೆ 8 ಹಂತಗಳಲ್ಲಿ ಚುನಾವಣೆ ನಡೆದಿತ್ತು. ತೃಣಮೂಲ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದರಿಂದ ಚುನಾವಣೆ ಹಾಗೂ ಪ್ರಚಾರದ ವೇಳೆ ಕೆಲವೊಂದು ಅಹಿತಕರ ಘಟನೆ ಸಹ ನಡೆದಿದ್ದವು. ಇದೆಲ್ಲ ಮುಗಿದು ಇಂದು ಮತ ಎಣಿಕೆ ನಡೆಯುತ್ತಿದ್ದು, ಟಿಎಂಸಿ 215ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: Watch: ಊಟಕ್ಕೂ ಮೊದಲು ಪ್ರಾರ್ಥನೆ.. ನಾಯಿ ಮರಿಗಳಿಗೆ ಪಾಠ ಹೇಳುವ ಮಹಿಳೆ

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ.

  • Congratulations to the Chief Minister of West Bengal, @MamataOfficial Didi on her party’s victory in West Bengal assembly elections. My best wishes to her for her next tenure.

    — Rajnath Singh (@rajnathsingh) May 2, 2021 " class="align-text-top noRightClick twitterSection" data=" ">

215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​​ ಮಮತಾ ಬ್ಯಾನರ್ಜಿಗೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವುದಕ್ಕೆ ಅಭಿನಂದನೆಗಳು. ಮುಂದಿನ ಅಧಿಕಾರಾವಧಿಗೆ ನನ್ನ ಶುಭಾಶಯಗಳು ಎಂದು ಟ್ವೀಟ್​ ಮಾಡಿದ್ದಾರೆ. ಇದರ ಜೊತೆಗೆ ತಮಿಳುನಾಡಿನಲ್ಲಿ ಗೆಲುವು ಸಾಧಿಸುತ್ತಿರುವ ಡಿಎಂಕೆ ಹಾಗೂ ಕೇರಳದ ಪಿಣರಾಯಿ ವಿಜಯನ್​ಗೂ ರಾಜನಾಥ್​ ಸಿಂಗ್​​ ಅಭಿನಂದನೆ ಸಲ್ಲಿಸಿದ್ದಾರೆ.

ಈಗಾಗಲೇ ಮಮತಾ ಬ್ಯಾನರ್ಜಿಗೆ ಅಖಿಲೇಶ್​ ಯಾದವ್​, ಶಿವಸೇನೆ ಹಾಗೂ ಎನ್​ಸಿಪಿ ಮುಖಂಡ ಶರದ್​ ಪವಾರ್​ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. 294 ಕ್ಷೇತ್ರಗಳ ಪಶ್ಚಿಮ ಬಂಗಾಳ ವಿಧಾನಸಭೆಗೆ 8 ಹಂತಗಳಲ್ಲಿ ಚುನಾವಣೆ ನಡೆದಿತ್ತು. ತೃಣಮೂಲ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದರಿಂದ ಚುನಾವಣೆ ಹಾಗೂ ಪ್ರಚಾರದ ವೇಳೆ ಕೆಲವೊಂದು ಅಹಿತಕರ ಘಟನೆ ಸಹ ನಡೆದಿದ್ದವು. ಇದೆಲ್ಲ ಮುಗಿದು ಇಂದು ಮತ ಎಣಿಕೆ ನಡೆಯುತ್ತಿದ್ದು, ಟಿಎಂಸಿ 215ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: Watch: ಊಟಕ್ಕೂ ಮೊದಲು ಪ್ರಾರ್ಥನೆ.. ನಾಯಿ ಮರಿಗಳಿಗೆ ಪಾಠ ಹೇಳುವ ಮಹಿಳೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.