ETV Bharat / bharat

ಸುಪ್ರೀಂ ತೀರ್ಪಿಗೆ ಸ್ವಾಗತ.. ಹೋರಾಟ ಮುಂದುವರಿಯುತ್ತೆ ಎಂದ ರಾಕೇಶ್​ ಟಿಕೈಟ್

author img

By

Published : Jan 12, 2021, 4:45 PM IST

ಮೂರು ಕೃಷಿ ಕಾನೂನುಗಳಿಗೆ ತಡೆಯಾಜ್ಞೆ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ರೈತರು ಸ್ವಾಗತಿಸಿದ್ದಾರೆ. ನಮ್ಮ ಪ್ರತಿಭಟನೆ ಮುಂದುವರಿಯಲಿದ್ದು, ಸರ್ಕಾರವು ಮೂರು ಕಾನೂನುಗಳನ್ನು ರದ್ದುಪಡಿಸುವವರೆಗೂ ಹೋರಾಟ ನಡೆಯಲಿದೆ ಎಂದು ರೈತ ಮುಖಂಡ ರಾಕೇಶ್​ ಟಿಕೈಟ್ ಹೇಳಿದ್ದಾರೆ.

continue
ರಾಕೇಶ್​ ಟಿಕೈಟ್

ನವದೆಹಲಿ: ಮೂರು ಕೃಷಿ ಕಾನೂನುಗಳಿಗೆ ತಡೆಯಾಜ್ಞೆ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ರೈತರು ಸ್ವಾಗತಿಸಿದ್ದಾರೆ. ಆದರೆ, ಈ ಮೂರು ಕಾನೂನುಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಲ್ಲ ಎಂದೂ ಹೇಳಿದ್ದಾರೆ.

ಸುಪ್ರೀಂ ತೀರ್ಪಿನ ಬಳಿಕ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್​​ನ ಮುಖಂಡ ರಾಕೇಶ್​ ಟಿಕೈಟ್, ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ. ಸರ್ಕಾರವು ಮೂರು ಕಾನೂನುಗಳನ್ನು ರದ್ದುಪಡಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಖಾತರಿ ಪಡಿಸುವ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ತೀರ್ಪಿಗೆ ಸ್ವಾಗತ.. ಹೋರಾಟ ಮುಂದುವರಿಯುತ್ತೆ ಎಂದ ರಾಕೇಶ್​ ಟಿಕೈಟ್

ಸುಪ್ರೀಂ ಕೋರ್ಟ್ ರಚಿಸುವ ಸಮಿತಿಯಲ್ಲಿ ಇರಬೇಕೋ, ಬೇಡ್ವೋ ಎಂಬುದರ ಕುರಿತಾಗಿ ನಾವು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಜತೆಗೆ ಜನವರಿ 15 ರಂದು ಕೇಂದ್ರ ಸರ್ಕಾರದೊಂದಿಗೆ ನಿಗದಿಯಾಗಿರುವ ಸಭೆಗೆ ಹೋಗುತ್ತೇವೆ ಎಂದರು.

ಜನವರಿ 26 ರ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆಯುತ್ತದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ರೈತ ಮುಖಂಡ ಜಸ್ಪ್ರೀತ್ ಸಿಂಗ್ ಮಾತನಾಡಿ, ಈ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಕಳೆದ ಎರಡು ತಿಂಗಳಿನಿಂದ ನಾವು ಪ್ರತಿಭಟನೆ ನಡೆಸುತ್ತಿದ್ದು, ಈವರೆಗೆ ಕನಿಷ್ಠ 70 ರೈತರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ನವದೆಹಲಿ: ಮೂರು ಕೃಷಿ ಕಾನೂನುಗಳಿಗೆ ತಡೆಯಾಜ್ಞೆ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ರೈತರು ಸ್ವಾಗತಿಸಿದ್ದಾರೆ. ಆದರೆ, ಈ ಮೂರು ಕಾನೂನುಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಲ್ಲ ಎಂದೂ ಹೇಳಿದ್ದಾರೆ.

ಸುಪ್ರೀಂ ತೀರ್ಪಿನ ಬಳಿಕ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್​​ನ ಮುಖಂಡ ರಾಕೇಶ್​ ಟಿಕೈಟ್, ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ. ಸರ್ಕಾರವು ಮೂರು ಕಾನೂನುಗಳನ್ನು ರದ್ದುಪಡಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಖಾತರಿ ಪಡಿಸುವ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ತೀರ್ಪಿಗೆ ಸ್ವಾಗತ.. ಹೋರಾಟ ಮುಂದುವರಿಯುತ್ತೆ ಎಂದ ರಾಕೇಶ್​ ಟಿಕೈಟ್

ಸುಪ್ರೀಂ ಕೋರ್ಟ್ ರಚಿಸುವ ಸಮಿತಿಯಲ್ಲಿ ಇರಬೇಕೋ, ಬೇಡ್ವೋ ಎಂಬುದರ ಕುರಿತಾಗಿ ನಾವು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಜತೆಗೆ ಜನವರಿ 15 ರಂದು ಕೇಂದ್ರ ಸರ್ಕಾರದೊಂದಿಗೆ ನಿಗದಿಯಾಗಿರುವ ಸಭೆಗೆ ಹೋಗುತ್ತೇವೆ ಎಂದರು.

ಜನವರಿ 26 ರ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆಯುತ್ತದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ರೈತ ಮುಖಂಡ ಜಸ್ಪ್ರೀತ್ ಸಿಂಗ್ ಮಾತನಾಡಿ, ಈ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಕಳೆದ ಎರಡು ತಿಂಗಳಿನಿಂದ ನಾವು ಪ್ರತಿಭಟನೆ ನಡೆಸುತ್ತಿದ್ದು, ಈವರೆಗೆ ಕನಿಷ್ಠ 70 ರೈತರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.