ETV Bharat / bharat

ಸ್ಥಳೀಯ ದೇವಸ್ಥಾನದಲ್ಲಿ ಹನುಮಾನ್​ ಚಾಲೀಸಾ ಪಠಿಸಿದ ರಾಣಾ ದಂಪತಿ

author img

By

Published : May 28, 2022, 9:50 PM IST

ಹನುಮಾನ್​ ಚಾಲೀಸಾ ಪಠಿಸುವುದಾಗಿ ಘೋಷಣೆ ಮಾಡಿ, ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರಾಣಾ ದಂಪತಿ ಇಂದು ನಾಗ್ಪುರ್​ಗೆ ವಾಪಸ್ ಆಗಿದ್ದು, ಸ್ಥಳೀಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ.

Rana couple recites Hanuman Chalisa
Rana couple recites Hanuman Chalisa

ನಾಗ್ಪುರ್​(ಮಹಾರಾಷ್ಟ್ರ): ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಣೆ ಮಾಡಿ, ಬಂಧನಕ್ಕೊಳಗಾಗಿ ನಂತರ ಜಾಮೀನು ಮೇಲೆ ಹೊರಬಂದಿರುವ ರಾಣಾ ದಂಪತಿ ಇದೀಗ ಸ್ಥಳೀಯ ದೇವಸ್ಥಾನವೊಂದರಲ್ಲಿ ಹನುಮಾನ್​ ಚಾಲೀಸಾ ಪಠಣ ಮಾಡಿದ್ದಾರೆ. ನಾಗ್ಪುರದ ಸ್ಥಳೀಯ ದೇವಸ್ಥಾನವೊಂದರಲ್ಲಿ ರಾಣಾ ದಂಪತಿ ಹನುಮಾನ್​ ಚಾಲೀಸಾ ಪಠಣ ಮಾಡಿದ್ದಾರೆ. ಸಂಸದೆ ನವನೀತ್ ಕೌರ್ ಹಾಗೂ ಶಾಸಕ ರವಿ ರಾಣಾ ದೆಹಲಿಯಿಂದ ನಾಗ್ಪುರಕ್ಕೆ ಇಂದು ವಾಪಸ್​ ಆಗಿದ್ದರು.

Rana couple recites Hanuman Chalisa
ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ

ಮುಂಬೈನ ಬಾಂದ್ರಾದಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಖಾಸಗಿ ನಿವಾಸ 'ಮಾತೋಶ್ರೀ' ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ರಾಣಾ ದಂಪತಿ ಘೋಷಣೆ ಮಾಡಿದ್ದರು. ಹೀಗಾಗಿ, ಅವರನ್ನ ಏಪ್ರಿಲ್ 23 ರಂದು ಬಂಧಿಸಲಾಗಿತ್ತು. ಇದಾದ ಬಳಿಕ ಮೇ 4ರಂದು ದಂಪತಿ ಜಾಮೀನು ಪಡೆದು ಹೊರಬಂದಿದ್ದರು.

ಹನುಮಾನ್ ಚಾಲೀಸಾ ಪಠಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದೆ ನವನೀತ್ ರಾಣಾ, ಸ್ಥಳೀಯ ದೇವಸ್ಥಾನವೊಂದರಲ್ಲಿ ಹನುಮಾನ್ ಚಾಲೀಸಾ ಪಠಿಸಿ, ಆರತಿ ಮಾಡಲಾಗಿದೆ. ರಾಜ್ಯಕ್ಕೆ ಹತ್ತಿಕೊಂಡಿರುವ ಶಾಪ ತೊಲಗುವಂತೆ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

ಇದನ್ನೂ ಓದಿ: ಹನುಮಾನ್​ ಚಾಲೀಸಾ ವಿವಾದ : ರಾಣಾ ದಂಪತಿಗೆ ಮುಂಬೈ ಸೆಷನ್​ ಕೋರ್ಟ್​​ನಿಂದ ನೋಟಿಸ್​

ಮುಂಬೈ ಸೆಷನ್ಸ್ ಕೋರ್ಟ್​ನಿಂದ ಜಾಮೀನು ಪಡೆದುಕೊಂಡಿದ್ದ ರಾಣಾ ದಂಪತಿ ದೆಹಲಿಗೆ ಪ್ರಯಾಣ ಬೆಳೆಸಿ, ತಮ್ಮ ಮೇಲೆ ನಡೆದ ದೌರ್ಜನ್ಯದ ಬಗ್ಗೆ ದೂರು ನೀಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್​​ ಸೇರಿದಂತೆ ಅನೇಕ ನಾಯಕರನ್ನ ಭೇಟಿ ಮಾಡಿ ತಮಗೆ ಆಗಿರುವ ತೊಂದರೆ ಬಗ್ಗೆ ದೂರು ನೀಡಿದ್ದರು.

ಜೈಲಿನಲ್ಲಿದ್ದ ವೇಳೆ ಅಲ್ಲಿನ ಪೊಲೀಸ್ ಅಧಿಕಾರಿಗಳು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂಬುದರ ಕುರಿತು ಈಗಾಗಲೇ ನವನೀತ್ ಕೌರ್​, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಸಹ ಬರೆದಿದ್ದರು.

ನಾಗ್ಪುರ್​(ಮಹಾರಾಷ್ಟ್ರ): ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಣೆ ಮಾಡಿ, ಬಂಧನಕ್ಕೊಳಗಾಗಿ ನಂತರ ಜಾಮೀನು ಮೇಲೆ ಹೊರಬಂದಿರುವ ರಾಣಾ ದಂಪತಿ ಇದೀಗ ಸ್ಥಳೀಯ ದೇವಸ್ಥಾನವೊಂದರಲ್ಲಿ ಹನುಮಾನ್​ ಚಾಲೀಸಾ ಪಠಣ ಮಾಡಿದ್ದಾರೆ. ನಾಗ್ಪುರದ ಸ್ಥಳೀಯ ದೇವಸ್ಥಾನವೊಂದರಲ್ಲಿ ರಾಣಾ ದಂಪತಿ ಹನುಮಾನ್​ ಚಾಲೀಸಾ ಪಠಣ ಮಾಡಿದ್ದಾರೆ. ಸಂಸದೆ ನವನೀತ್ ಕೌರ್ ಹಾಗೂ ಶಾಸಕ ರವಿ ರಾಣಾ ದೆಹಲಿಯಿಂದ ನಾಗ್ಪುರಕ್ಕೆ ಇಂದು ವಾಪಸ್​ ಆಗಿದ್ದರು.

Rana couple recites Hanuman Chalisa
ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ

ಮುಂಬೈನ ಬಾಂದ್ರಾದಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಖಾಸಗಿ ನಿವಾಸ 'ಮಾತೋಶ್ರೀ' ಎದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ರಾಣಾ ದಂಪತಿ ಘೋಷಣೆ ಮಾಡಿದ್ದರು. ಹೀಗಾಗಿ, ಅವರನ್ನ ಏಪ್ರಿಲ್ 23 ರಂದು ಬಂಧಿಸಲಾಗಿತ್ತು. ಇದಾದ ಬಳಿಕ ಮೇ 4ರಂದು ದಂಪತಿ ಜಾಮೀನು ಪಡೆದು ಹೊರಬಂದಿದ್ದರು.

ಹನುಮಾನ್ ಚಾಲೀಸಾ ಪಠಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದೆ ನವನೀತ್ ರಾಣಾ, ಸ್ಥಳೀಯ ದೇವಸ್ಥಾನವೊಂದರಲ್ಲಿ ಹನುಮಾನ್ ಚಾಲೀಸಾ ಪಠಿಸಿ, ಆರತಿ ಮಾಡಲಾಗಿದೆ. ರಾಜ್ಯಕ್ಕೆ ಹತ್ತಿಕೊಂಡಿರುವ ಶಾಪ ತೊಲಗುವಂತೆ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

ಇದನ್ನೂ ಓದಿ: ಹನುಮಾನ್​ ಚಾಲೀಸಾ ವಿವಾದ : ರಾಣಾ ದಂಪತಿಗೆ ಮುಂಬೈ ಸೆಷನ್​ ಕೋರ್ಟ್​​ನಿಂದ ನೋಟಿಸ್​

ಮುಂಬೈ ಸೆಷನ್ಸ್ ಕೋರ್ಟ್​ನಿಂದ ಜಾಮೀನು ಪಡೆದುಕೊಂಡಿದ್ದ ರಾಣಾ ದಂಪತಿ ದೆಹಲಿಗೆ ಪ್ರಯಾಣ ಬೆಳೆಸಿ, ತಮ್ಮ ಮೇಲೆ ನಡೆದ ದೌರ್ಜನ್ಯದ ಬಗ್ಗೆ ದೂರು ನೀಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್​​ ಸೇರಿದಂತೆ ಅನೇಕ ನಾಯಕರನ್ನ ಭೇಟಿ ಮಾಡಿ ತಮಗೆ ಆಗಿರುವ ತೊಂದರೆ ಬಗ್ಗೆ ದೂರು ನೀಡಿದ್ದರು.

ಜೈಲಿನಲ್ಲಿದ್ದ ವೇಳೆ ಅಲ್ಲಿನ ಪೊಲೀಸ್ ಅಧಿಕಾರಿಗಳು ತಮ್ಮೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂಬುದರ ಕುರಿತು ಈಗಾಗಲೇ ನವನೀತ್ ಕೌರ್​, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಸಹ ಬರೆದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.