ETV Bharat / bharat

ರಿಲಯನ್ಸ್ ಕ್ಯಾಪಿಟಲ್​ನ ಆಡಳಿತ ಮಂಡಳಿ ರದ್ದು ಮಾಡಿದ ಆರ್​ಬಿಐ: ಆಡಳಿತಾಧಿಕಾರಿ ನೇಮಕ

author img

By

Published : Nov 30, 2021, 7:47 AM IST

ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ (RCL) ಕಂಪನಿಯ ಆಡಳಿತ ಮಂಡಳಿಯನ್ನು ರದ್ದುಪಡಿಸಿರುವ ಆರ್​ಬಿಐ ನಾಗೇಶ್ವರ ರಾವ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

RBI supersedes board of Reliance Capital; appoints administrator
ರಿಲಯನ್ಸ್ ಕ್ಯಾಪಿಟಲ್​ನ ಆಡಳಿತ ಮಂಡಳಿ ರದ್ದು ಮಾಡಿದ ಆರ್​ಬಿಐ: ಆಡಳಿತಾಧಿಕಾರಿ ನೇಮಕ

ಮುಂಬೈ: ಆಡಳಿತಾತ್ಮಕವಾಗಿ ಹಾಗೂ ಸಾಲವನ್ನು ಮರುಪಾವತಿ ಮಾಡಲು ವಿಫಲವಾಗಿರುವ ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ (RCL) ಕಂಪನಿಯ ಆಡಳಿತ ಮಂಡಳಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ರದ್ದುಗೊಳಿಸಿದೆ.

ಅನಿಲ್ ಅಂಬಾನಿಯ ರಿಲಯನ್ಸ್ ಗ್ರೂಪ್​ನ ಅಡಿ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ ಬರಲಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ, ಈಗ ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ, ಆಡಳಿತಾತ್ಮಕವಾಗಿಯೂ ವಿಫಲವಾಗಿರುವ ಕಾರಣದಿಂದ ಆರ್​ಬಿಐ ಕಂಪನಿಯ ಆಡಳಿತ ಮಂಡಳಿಯನ್ನು ರದ್ದು ಮಾಡಿದೆ.

ಈಗ ಭಾರತೀಯ ರಿಸರ್ವ್ ಬ್ಯಾಂಕ್ ನಾಗೇಶ್ವರ ರಾವ್ ಅವರನ್ನು ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್​ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ನಾಗೇಶ್ವರ ರಾವ್ ಅವರು ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಕಾರ್ಯಕಾರಿ ನಿರ್ದೇಶಕರಾಗಿದ್ದಾರೆ.

ಕಂಪನಿಯನ್ನು ದಿವಾಳಿಯಾಗಿದೆ ಎಂದು ಘೋಷಿಸುವ ಪ್ರಕ್ರಿಯೆ ನಡೆಯುತ್ತಿದ್ದು, 2019ರ ದಿವಾಳಿತನ ನಿಯಮಗಳ ಅನ್ವಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರ್​ಬಿಐ ಹೇಳಿದ್ದು, ಮುಂಬೈನಲ್ಲಿರುವ ರಾಷ್ಟ್ರೀಯ ಕಂಪನಿಗಳ ಕಾನೂನು ನ್ಯಾಯಮಂಡಳಿಗೂ ಅರ್ಜಿ ಸಲ್ಲಿಕೆ ಮಾಡಿದ್ದು, ದಿವಾಳಿತನ ಪ್ರಕ್ರಿಯೆಯೂ ಅಧಿಕಾರಿಯನ್ನು ನೇಮಕ ಮಾಡುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಟ್ವಿಟರ್‌ ಸಿಇಒ ಸ್ಥಾನಕ್ಕೆ ಜಾಕ್​ ಡಾರ್ಸಿ ರಾಜೀನಾಮೆ: ಭಾರತೀಯ ಪರಾಗ್‌ ಅಗರ್ವಾಲ್‌ಗೆ ಮಹತ್ವದ ಹುದ್ದೆ

ಮುಂಬೈ: ಆಡಳಿತಾತ್ಮಕವಾಗಿ ಹಾಗೂ ಸಾಲವನ್ನು ಮರುಪಾವತಿ ಮಾಡಲು ವಿಫಲವಾಗಿರುವ ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ (RCL) ಕಂಪನಿಯ ಆಡಳಿತ ಮಂಡಳಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ರದ್ದುಗೊಳಿಸಿದೆ.

ಅನಿಲ್ ಅಂಬಾನಿಯ ರಿಲಯನ್ಸ್ ಗ್ರೂಪ್​ನ ಅಡಿ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ ಬರಲಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ, ಈಗ ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ, ಆಡಳಿತಾತ್ಮಕವಾಗಿಯೂ ವಿಫಲವಾಗಿರುವ ಕಾರಣದಿಂದ ಆರ್​ಬಿಐ ಕಂಪನಿಯ ಆಡಳಿತ ಮಂಡಳಿಯನ್ನು ರದ್ದು ಮಾಡಿದೆ.

ಈಗ ಭಾರತೀಯ ರಿಸರ್ವ್ ಬ್ಯಾಂಕ್ ನಾಗೇಶ್ವರ ರಾವ್ ಅವರನ್ನು ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್​ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ನಾಗೇಶ್ವರ ರಾವ್ ಅವರು ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಕಾರ್ಯಕಾರಿ ನಿರ್ದೇಶಕರಾಗಿದ್ದಾರೆ.

ಕಂಪನಿಯನ್ನು ದಿವಾಳಿಯಾಗಿದೆ ಎಂದು ಘೋಷಿಸುವ ಪ್ರಕ್ರಿಯೆ ನಡೆಯುತ್ತಿದ್ದು, 2019ರ ದಿವಾಳಿತನ ನಿಯಮಗಳ ಅನ್ವಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರ್​ಬಿಐ ಹೇಳಿದ್ದು, ಮುಂಬೈನಲ್ಲಿರುವ ರಾಷ್ಟ್ರೀಯ ಕಂಪನಿಗಳ ಕಾನೂನು ನ್ಯಾಯಮಂಡಳಿಗೂ ಅರ್ಜಿ ಸಲ್ಲಿಕೆ ಮಾಡಿದ್ದು, ದಿವಾಳಿತನ ಪ್ರಕ್ರಿಯೆಯೂ ಅಧಿಕಾರಿಯನ್ನು ನೇಮಕ ಮಾಡುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಟ್ವಿಟರ್‌ ಸಿಇಒ ಸ್ಥಾನಕ್ಕೆ ಜಾಕ್​ ಡಾರ್ಸಿ ರಾಜೀನಾಮೆ: ಭಾರತೀಯ ಪರಾಗ್‌ ಅಗರ್ವಾಲ್‌ಗೆ ಮಹತ್ವದ ಹುದ್ದೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.