ETV Bharat / bharat

ಕೇರಳದಲ್ಲಿ ಕೋವಿಡ್‌ ಉಲ್ಬಣ: ಇಂದಿನಿಂದ ಕಠಿಣ ನಿರ್ಬಂಧ ಜಾರಿ

author img

By

Published : May 4, 2021, 10:34 AM IST

ಕೊರೊನಾ ವೈರಸ್​ ಹರಡುವಿಕೆ ತಡೆಗೆ ಕೇರಳದಲ್ಲಿ ಮೇ 4 ರಿಂದ ಅಂದರೆ ಇಂದಿನಿಂದ ಕಠಿಣ ನಿರ್ಬಂಧಗಳನ್ನು ವಿಧಿಸಲಿದ್ದೇವೆ ಎಂದು ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದರು.

Restrictions in Kerala
ಕೇರಳದಲ್ಲಿ ಉಲ್ಬಣಿಸುತ್ತಿರುವ ಕೊರೊನಾ

ತಿರುವನಂತಪುರಂ (ಕೇರಳ): ಕೇರಳದಲ್ಲಿ ನಿರಂತರವಾಗಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಪರಿಣಾಮ, ಇಂದಿನಿಂದ ಸೋಂಕಿತ​ ಪ್ರಕರಣಗಳು ಜಾಸ್ತಿ ಇರುವ ಜಿಲ್ಲೆಗಳಲ್ಲಿ ಸರ್ಕಾರ ಸಂಪೂರ್ಣ ಲಾಕ್‌ಡೌನ್ ಮಾಡುವ ಸಾಧ್ಯತೆಯಿದೆ.

"ಕೋವಿಡ್ ಪ್ರಕರಣಗಳ ಉಲ್ಬಣದಿಂದ ರಾಜ್ಯದ ಪರಿಸ್ಥಿತಿ ಹದಗೆಡುತ್ತಿದೆ. ಈ ಹಿಂದೆ ಘೋಷಿಸಿದ ನಿರ್ಬಂಧಗಳ ಹೊರತಾಗಿ, ಕೊರೊನಾ ಪಾಸಿಟಿವ್‌ ದರವು ಶೇಕಡಾ 50 ಕ್ಕಿಂತ ಹೆಚ್ಚಿರುವ ಕೆಲವು ಜಿಲ್ಲೆಗಳಲ್ಲಿ ಪೂರ್ಣ ಲಾಕ್‌ಡೌನ್ ವಿಧಿಸಬೇಕಾಗಬಹುದು. ಈ ನಿಟ್ಟಿನಲ್ಲಿ ಮೇ 4 ರಿಂದ ನಾವು ಕಠಿಣ ನಿರ್ಬಂಧಗಳನ್ನು ವಿಧಿಸಲಿದ್ದೇವೆ" ಎಂದು ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ.

"ಭಾಗಶಃ ಲಾಕ್​ಡೌನ್ ಸಮಯದಲ್ಲಿ ಅಗತ್ಯ ಸೇವೆಗಳನ್ನು ಮಾತ್ರ ಅನುಮತಿಸಲಾಗುವುದು. ಬ್ಯಾಂಕ್​ಗಳು ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸುತ್ತವೆ (ಸಾರ್ವಜನಿಕರಿಗೆ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ). ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತವೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ತೆರೆದಿರುತ್ತವೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಂದ ಟೇಕ್‌ಅವೇ ಮತ್ತು ಹೋಂ ಡೆಲಿವರಿ ಮಾತ್ರ ಇರಲಿದೆ. ಆದಾಗ್ಯೂ, ಸರಕು ಸಾಗಣೆಗೆ ಮತ್ತು ವಿಮಾನ ಅಥವಾ ರೈಲು ಮೂಲಕ ಪ್ರಯಾಣಿಸುವವರಿಗೆ ಯಾವುದೇ ನಿರ್ಬಂಧಗಳಿಲ್ಲ. ಧಾರ್ಮಿಕ ಸ್ಥಳಗಳಲ್ಲಿ ಕೇವಲ 50 ಜನರಿಗೆ ಮಾತ್ರ ಅನುಮತಿಸಲಾಗುವುದು. ಪಡಿತರ ಅಂಗಡಿಗಳು ಮತ್ತು ನಾಗರಿಕ ಸರಬರಾಜು ಮಳಿಗೆಗಳು ತೆರೆದಿರುತ್ತವೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘಿಸಿ ರಸ್ತೆಗಿಳಿದವರಿಗೆ ಬಸ್ಕಿ ಶಿಕ್ಷೆ

ರಾಜ್ಯದ ಎಲ್ಲಾ ಕೋವಿಡ್ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹರಾ ಸೋಮವಾರ ಎಲ್ಲಾ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮತ್ತು ಸ್ಟೇಷನ್ ಹೌಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾರಾಂತ್ಯದ ಲಾಕ್‌ಡೌನ್‌ಗೆ ಹೋಲುವ ನಿರ್ಬಂಧಗಳು ನಾಳೆಯಿಂದ ಜಾರಿಯಲ್ಲಿರುತ್ತವೆ. ವಿನಾಯಿತಿ ಪಡೆದ ಸಂಸ್ಥೆಗಳ ನೌಕರರು ತಮ್ಮ ಗುರುತಿನ ಚೀಟಿಗಳ ಜತೆ ಪ್ರಯಾಣಿಸಬಹುದು. ಕೊರಿಯರ್ ಸೇವೆ ಮತ್ತು ಹೋಂ ಡೆಲಿವರಿ ವಿಭಾಗಕ್ಕೂ ವಿನಾಯಿತಿ ನೀಡಲಾಗಿದೆ. ಇ-ಕಾಮರ್ಸ್‌ಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಹ ರಿಯಾಯಿತಿ ನೀಡಲಾಗಿದೆ.

ಏಪ್ರಿಲ್ 30 ರಂದು ರಾಜ್ಯದಲ್ಲಿ 37,199 ಹೊಸ ಕೋವಿಡ್ ಪ್ರಕರಣಗಳು ಮತ್ತು 49 ಸಾವು ದಾಖಲಾಗಿವೆ. ಇದು ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ.

ತಿರುವನಂತಪುರಂ (ಕೇರಳ): ಕೇರಳದಲ್ಲಿ ನಿರಂತರವಾಗಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಪರಿಣಾಮ, ಇಂದಿನಿಂದ ಸೋಂಕಿತ​ ಪ್ರಕರಣಗಳು ಜಾಸ್ತಿ ಇರುವ ಜಿಲ್ಲೆಗಳಲ್ಲಿ ಸರ್ಕಾರ ಸಂಪೂರ್ಣ ಲಾಕ್‌ಡೌನ್ ಮಾಡುವ ಸಾಧ್ಯತೆಯಿದೆ.

"ಕೋವಿಡ್ ಪ್ರಕರಣಗಳ ಉಲ್ಬಣದಿಂದ ರಾಜ್ಯದ ಪರಿಸ್ಥಿತಿ ಹದಗೆಡುತ್ತಿದೆ. ಈ ಹಿಂದೆ ಘೋಷಿಸಿದ ನಿರ್ಬಂಧಗಳ ಹೊರತಾಗಿ, ಕೊರೊನಾ ಪಾಸಿಟಿವ್‌ ದರವು ಶೇಕಡಾ 50 ಕ್ಕಿಂತ ಹೆಚ್ಚಿರುವ ಕೆಲವು ಜಿಲ್ಲೆಗಳಲ್ಲಿ ಪೂರ್ಣ ಲಾಕ್‌ಡೌನ್ ವಿಧಿಸಬೇಕಾಗಬಹುದು. ಈ ನಿಟ್ಟಿನಲ್ಲಿ ಮೇ 4 ರಿಂದ ನಾವು ಕಠಿಣ ನಿರ್ಬಂಧಗಳನ್ನು ವಿಧಿಸಲಿದ್ದೇವೆ" ಎಂದು ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ.

"ಭಾಗಶಃ ಲಾಕ್​ಡೌನ್ ಸಮಯದಲ್ಲಿ ಅಗತ್ಯ ಸೇವೆಗಳನ್ನು ಮಾತ್ರ ಅನುಮತಿಸಲಾಗುವುದು. ಬ್ಯಾಂಕ್​ಗಳು ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸುತ್ತವೆ (ಸಾರ್ವಜನಿಕರಿಗೆ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ). ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತವೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ತೆರೆದಿರುತ್ತವೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಂದ ಟೇಕ್‌ಅವೇ ಮತ್ತು ಹೋಂ ಡೆಲಿವರಿ ಮಾತ್ರ ಇರಲಿದೆ. ಆದಾಗ್ಯೂ, ಸರಕು ಸಾಗಣೆಗೆ ಮತ್ತು ವಿಮಾನ ಅಥವಾ ರೈಲು ಮೂಲಕ ಪ್ರಯಾಣಿಸುವವರಿಗೆ ಯಾವುದೇ ನಿರ್ಬಂಧಗಳಿಲ್ಲ. ಧಾರ್ಮಿಕ ಸ್ಥಳಗಳಲ್ಲಿ ಕೇವಲ 50 ಜನರಿಗೆ ಮಾತ್ರ ಅನುಮತಿಸಲಾಗುವುದು. ಪಡಿತರ ಅಂಗಡಿಗಳು ಮತ್ತು ನಾಗರಿಕ ಸರಬರಾಜು ಮಳಿಗೆಗಳು ತೆರೆದಿರುತ್ತವೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ ನಿಯಮ ಉಲ್ಲಂಘಿಸಿ ರಸ್ತೆಗಿಳಿದವರಿಗೆ ಬಸ್ಕಿ ಶಿಕ್ಷೆ

ರಾಜ್ಯದ ಎಲ್ಲಾ ಕೋವಿಡ್ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹರಾ ಸೋಮವಾರ ಎಲ್ಲಾ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮತ್ತು ಸ್ಟೇಷನ್ ಹೌಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾರಾಂತ್ಯದ ಲಾಕ್‌ಡೌನ್‌ಗೆ ಹೋಲುವ ನಿರ್ಬಂಧಗಳು ನಾಳೆಯಿಂದ ಜಾರಿಯಲ್ಲಿರುತ್ತವೆ. ವಿನಾಯಿತಿ ಪಡೆದ ಸಂಸ್ಥೆಗಳ ನೌಕರರು ತಮ್ಮ ಗುರುತಿನ ಚೀಟಿಗಳ ಜತೆ ಪ್ರಯಾಣಿಸಬಹುದು. ಕೊರಿಯರ್ ಸೇವೆ ಮತ್ತು ಹೋಂ ಡೆಲಿವರಿ ವಿಭಾಗಕ್ಕೂ ವಿನಾಯಿತಿ ನೀಡಲಾಗಿದೆ. ಇ-ಕಾಮರ್ಸ್‌ಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಹ ರಿಯಾಯಿತಿ ನೀಡಲಾಗಿದೆ.

ಏಪ್ರಿಲ್ 30 ರಂದು ರಾಜ್ಯದಲ್ಲಿ 37,199 ಹೊಸ ಕೋವಿಡ್ ಪ್ರಕರಣಗಳು ಮತ್ತು 49 ಸಾವು ದಾಖಲಾಗಿವೆ. ಇದು ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.