ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಆರ್ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ಗೆ ಜಾರ್ಖಂಡ್ ಹೈಕೋರ್ಟ್ ಇಂದು ಜಾಮೀನು ನೀಡಿದೆ. ಬಹು ಕೋಟಿ ಮೇವು ಹಗರಣದ ಇತರ ಮೂರು ಪ್ರಕರಣಗಳಲ್ಲಿ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.
-
Jharkhand High Court grants bail to RJD leader Lalu Prasad Yadav in Fodder scam case related to fraudulent withdrawal from Dumka Treasury
— ANI (@ANI) April 17, 2021 " class="align-text-top noRightClick twitterSection" data="
(file photo) pic.twitter.com/K82jvBYR1m
">Jharkhand High Court grants bail to RJD leader Lalu Prasad Yadav in Fodder scam case related to fraudulent withdrawal from Dumka Treasury
— ANI (@ANI) April 17, 2021
(file photo) pic.twitter.com/K82jvBYR1mJharkhand High Court grants bail to RJD leader Lalu Prasad Yadav in Fodder scam case related to fraudulent withdrawal from Dumka Treasury
— ANI (@ANI) April 17, 2021
(file photo) pic.twitter.com/K82jvBYR1m
ಪದೇ ಪದೆ ಕಾಡುತ್ತಿದ್ದ ಅನಾರೋಗ್ಯದ ಹಿನ್ನೆಲೆಯಲ್ಲಿ ತಮಗೆ ಜಾಮೀನು ನೀಡುವಂತೆ ಹಲವು ಬಾರಿ ಲಾಲೂ ಪ್ರಸಾದ್ ಯಾದವ್ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಇವರ ಮನವಿಯನ್ನು ತಿರಸ್ಕರಿಸಿತ್ತು. ಈಗ ಅವರ ಮನವಿ ಆಲಿಸಿದ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿ ಆದೇಶ ನೀಡಿದೆ.
900 ಕೋಟಿ ರೂ.ಗಳ ಮೇವು ಹಗರಣದ ಮೂರು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಯಾದವ್ ಜಾಮೀನು ಪಡೆದಿದ್ದರು. ಆದರೆ, ದುಮ್ಕಾ ಖಜಾನೆ ಪ್ರಕರಣದಲ್ಲಿ ಜಾಮೀನು ಸಿಕ್ಕಿರಲಿಲ್ಲ. ಜಾರ್ಖಂಡ್ ಹೈಕೋರ್ಟ್ ಇಂದು ಜಾಮೀನು ನೀಡಿ ಆದೇಶ ಹೊರಡಿಸಿದೆ. ಇದರಿಂದ ಯಾದವ್ ಕುಟುಂಬ ನಿಟ್ಟುಸಿರು ಬಿಟ್ಟಿದೆ.