ETV Bharat / bharat

ಜೈಲಿನಲ್ಲಿ ಸತ್ಯೇಂದ್ರ ಜೈನ್​​ ವಿಡಿಯೋ: ಎಎಪಿ ವಿರುದ್ಧ ಬಿಕ್ರಮ್ ಸಿಂಗ್ ಮಜಿಥಿಯಾ ಆಕ್ರೋಶ

author img

By

Published : Nov 19, 2022, 8:54 PM IST

ಸತ್ಯೇಂದ್ರ ಜೈನ್ ಕುರಿತು ತಿಹಾರ್ ಜೈಲಿನಿಂದ ಹೊರಬರುತ್ತಿರುವ ವಿಡಿಯೋಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಇಂದು ದೆಹಲಿಯ ಮಾದರಿಯನ್ನು ನೋಡಲಾಯಿತು. ದೊಡ್ಡ ದರೋಡೆಕೋರರು ಮತ್ತು ಸುಕೇಶ್ ಅವರಂತಹವರು ತಿಹಾರ್ ಗೆ ಏಕೆ ಹೋಗುತ್ತಾರೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

SAD Leader Bikram Singh Majithia
ಬಿಕ್ರಮ್ ಸಿಂಗ್ ಮಜಿಥಿಯಾ

ಚಂಡೀಗಢ :​ ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ರಾಜಾತಿಥ್ಯ ದೊರೆಯುತ್ತಿರುವ ವಿಡಿಯೋ ವೈರಲ್​ ಆಗಿದ್ದು, ಭಾರಿ ಸದ್ದು ಮಾಡುತ್ತಿದೆ. ಈ ವಿಡಿಯೋ ವೈರಲ್​ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ, ಇಂದು ದೆಹಲಿಯ ಮಾದರಿಯನ್ನು ಕಣ್ತುಂಬಿಕೊಳ್ಳಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು. ದೊಡ್ಡ ದರೋಡೆಕೋರರು ಮತ್ತು ಸುಕೇಶ್ ಅಂತಹ ವಂಚಕರು ತಿಹಾರ್​ಗೆ ಏಕೆ ಹೋಗುತ್ತಾರೆ ಎಂಬುದು ಇಂದು ವೈರಲ್​ ಆದ ವಿಡಿಯೋದಿಂದ ತಿಳಿಯಿತು ಎಂದು ವ್ಯಂಗ್ಯವಾಡಿದರು.

ದೆಹಲಿ ಜೈಲುಗಳು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿ ಮಾರ್ಪಟ್ಟಿವೆ. ಜೈಲಿನೊಳಗೆ ವಿವಿಐಪಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ ಕೇಜ್ರಿವಾಲ್ ಸತ್ಯೇಂದ್ರ ಜೈನ್ ಅವರನ್ನು ತೆಗೆದುಹಾಕದಿರಲು ಕಾರಣವೇನು, ಈ ಪ್ರಕರಣದ ನಂತರವೂ, ಕೇಜ್ರಿವಾಲ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.

ಜೈಲಿನಲ್ಲಿ ವಿಐಪಿ ಸೌಲಭ್ಯ: ಮುಂದುವರಿದು ಮಾತನಾಡಿದ ಅವರು, ಮೂಸೆವಾಲಾ ಹತ್ಯೆಯನ್ನು ತಿಹಾರ್ ಜೈಲಿನಲ್ಲಿಯೇ ಯೋಜಿಸಲಾಗಿತ್ತು ಎಂದು ಆರೋಪಿಸಿದರು. ತಿಹಾರ್​ನಲ್ಲಿ ನಕಲಿ ಪಾಸ್‌ಪೋರ್ಟ್‌ ಮಾಡಲು ಸಂಚು ರೂಪಿಸಲಾಗುತ್ತಿದೆ. ಇದೇ ಮಾದರಿಯನ್ನು ಈಗ ಪಂಜಾಬ್‌ನಲ್ಲಿ ಜಾರಿಗೆ ತರಲಾಗಿದ್ದು, ಲಾರೆನ್ಸ್ ಬಿಷ್ಣೋಯ್‌ಗೆ ಜೈಲಿನಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂದು ಮಥಿಜಿಯಾ ಗಂಭೀರ ಆರೋಪ ಮಾಡಿದ್ದಾರೆ.

ಈ ಸರ್ಕಾರ ಬಂದ ನಂತರ ಜೈಲುಗಳಲ್ಲಿ ಫೋನ್, ಡ್ರಗ್ಸ್ ಪೂರೈಕೆ ಹೆಚ್ಚಾಗಿದೆ. ಮಾರ್ಚ್ ನಿಂದ ನವೆಂಬರ್ ವರೆಗೆ ಪಂಜಾಬ್ ಜೈಲಿನಿಂದ 2500 ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತ ಸರ್ಕಾರ ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕು ಅಥವಾ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ನೋಟಿಸ್ ನೀಡಿ ಕ್ರಮಕ್ಕೆ ಮುಂದಾಗ ಬೇಕು ಎಂದು ಅಕಾಲಿದಳದ ನಾಯಕರು ಒತ್ತಾಯಿಸಿದ್ದಾರೆ.

ಪಂಜಾಬ್‌ನಲ್ಲಿ ಸರ್ಕಾರ ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು ವಿತರಿಸುತ್ತಿದೆ. ಅಲ್ಲಿ ಈಗ ಪ್ರಯಾಣಿಕರು ತಮ್ಮ ಲಗೇಜ್‌ಗೆ ಜವಾಬ್ದಾರರಾಗಿರುತ್ತಾರೆ ಎಂದು ಮಥಿಜಿಯಾ ವ್ಯಂಗ್ಯವಾಡಿದರು.

ಇದನ್ನೂ ಓದಿ:20 ಮಿಲಿಯನ್ ಡಾಲರ್ ರೂಪಾಯಿಗೆ ಪರಿವರ್ತನೆ : ಸತ್ಯೇಂದ್ರ ಜೈನ್​ ವಿರುದ್ಧ ಗಂಭೀರ ಆರೋಪ ಮಾಡಿದ ಸುಕೇಶ್ ಚಂದ್ರಶೇಖರ್

ಚಂಡೀಗಢ :​ ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ರಾಜಾತಿಥ್ಯ ದೊರೆಯುತ್ತಿರುವ ವಿಡಿಯೋ ವೈರಲ್​ ಆಗಿದ್ದು, ಭಾರಿ ಸದ್ದು ಮಾಡುತ್ತಿದೆ. ಈ ವಿಡಿಯೋ ವೈರಲ್​ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ, ಇಂದು ದೆಹಲಿಯ ಮಾದರಿಯನ್ನು ಕಣ್ತುಂಬಿಕೊಳ್ಳಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು. ದೊಡ್ಡ ದರೋಡೆಕೋರರು ಮತ್ತು ಸುಕೇಶ್ ಅಂತಹ ವಂಚಕರು ತಿಹಾರ್​ಗೆ ಏಕೆ ಹೋಗುತ್ತಾರೆ ಎಂಬುದು ಇಂದು ವೈರಲ್​ ಆದ ವಿಡಿಯೋದಿಂದ ತಿಳಿಯಿತು ಎಂದು ವ್ಯಂಗ್ಯವಾಡಿದರು.

ದೆಹಲಿ ಜೈಲುಗಳು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿ ಮಾರ್ಪಟ್ಟಿವೆ. ಜೈಲಿನೊಳಗೆ ವಿವಿಐಪಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ ಕೇಜ್ರಿವಾಲ್ ಸತ್ಯೇಂದ್ರ ಜೈನ್ ಅವರನ್ನು ತೆಗೆದುಹಾಕದಿರಲು ಕಾರಣವೇನು, ಈ ಪ್ರಕರಣದ ನಂತರವೂ, ಕೇಜ್ರಿವಾಲ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.

ಜೈಲಿನಲ್ಲಿ ವಿಐಪಿ ಸೌಲಭ್ಯ: ಮುಂದುವರಿದು ಮಾತನಾಡಿದ ಅವರು, ಮೂಸೆವಾಲಾ ಹತ್ಯೆಯನ್ನು ತಿಹಾರ್ ಜೈಲಿನಲ್ಲಿಯೇ ಯೋಜಿಸಲಾಗಿತ್ತು ಎಂದು ಆರೋಪಿಸಿದರು. ತಿಹಾರ್​ನಲ್ಲಿ ನಕಲಿ ಪಾಸ್‌ಪೋರ್ಟ್‌ ಮಾಡಲು ಸಂಚು ರೂಪಿಸಲಾಗುತ್ತಿದೆ. ಇದೇ ಮಾದರಿಯನ್ನು ಈಗ ಪಂಜಾಬ್‌ನಲ್ಲಿ ಜಾರಿಗೆ ತರಲಾಗಿದ್ದು, ಲಾರೆನ್ಸ್ ಬಿಷ್ಣೋಯ್‌ಗೆ ಜೈಲಿನಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂದು ಮಥಿಜಿಯಾ ಗಂಭೀರ ಆರೋಪ ಮಾಡಿದ್ದಾರೆ.

ಈ ಸರ್ಕಾರ ಬಂದ ನಂತರ ಜೈಲುಗಳಲ್ಲಿ ಫೋನ್, ಡ್ರಗ್ಸ್ ಪೂರೈಕೆ ಹೆಚ್ಚಾಗಿದೆ. ಮಾರ್ಚ್ ನಿಂದ ನವೆಂಬರ್ ವರೆಗೆ ಪಂಜಾಬ್ ಜೈಲಿನಿಂದ 2500 ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತ ಸರ್ಕಾರ ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕು ಅಥವಾ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ನೋಟಿಸ್ ನೀಡಿ ಕ್ರಮಕ್ಕೆ ಮುಂದಾಗ ಬೇಕು ಎಂದು ಅಕಾಲಿದಳದ ನಾಯಕರು ಒತ್ತಾಯಿಸಿದ್ದಾರೆ.

ಪಂಜಾಬ್‌ನಲ್ಲಿ ಸರ್ಕಾರ ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು ವಿತರಿಸುತ್ತಿದೆ. ಅಲ್ಲಿ ಈಗ ಪ್ರಯಾಣಿಕರು ತಮ್ಮ ಲಗೇಜ್‌ಗೆ ಜವಾಬ್ದಾರರಾಗಿರುತ್ತಾರೆ ಎಂದು ಮಥಿಜಿಯಾ ವ್ಯಂಗ್ಯವಾಡಿದರು.

ಇದನ್ನೂ ಓದಿ:20 ಮಿಲಿಯನ್ ಡಾಲರ್ ರೂಪಾಯಿಗೆ ಪರಿವರ್ತನೆ : ಸತ್ಯೇಂದ್ರ ಜೈನ್​ ವಿರುದ್ಧ ಗಂಭೀರ ಆರೋಪ ಮಾಡಿದ ಸುಕೇಶ್ ಚಂದ್ರಶೇಖರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.