ETV Bharat / bharat

ಮುಂಬೈ ಡ್ರಗ್ಸ್ ಕೇಸ್: ಸಮೀರ್ ವಾಂಖೆಡೆ ಬದಲು ದೆಹಲಿ ಎನ್​ಸಿಬಿಯಿಂದ ವಿಚಾರಣೆ

author img

By

Published : Nov 5, 2021, 8:45 PM IST

ಆರ್ಯನ್ ಖಾನ್ ಪ್ರಕರಣ ಮತ್ತು ಇತರ 5 ಪ್ರಕರಣಗಳು ಸೇರಿದಂತೆ ನಮ್ಮ ವಲಯದ ಒಟ್ಟು 6 ಪ್ರಕರಣದ ತನಿಖೆಯನ್ನು ದೆಹಲಿಯ ಎನ್​ಸಿಬಿ ತಂಡ ಕೈಗೆತ್ತಿಕೊಳ್ಳಲಿದೆ. ಇದು ಆಡಳಿತಾತ್ಮಕ ನಿರ್ಧಾರ ಎಂದು ಎನ್‌ಸಿಬಿಯ ನೈರುತ್ಯ ವಲಯದ ಡೆಪ್ಯುಟಿ ಡಿಜಿ ಮುತಾ ಅಶೋಕ್ ಜೈನ್ ಸ್ಪಷ್ಟನೆ ನೀಡಿದ್ದಾರೆ.

Sameer Wankhade expelled from Aryan Khan case
ಮುಂಬೈ ಡ್ರಗ್ಸ್ ಕೇಸ್: ತನಿಖೆಯಿಂದ ಸಮೀರ್ ವಾಂಖೆಡೆ ಹೊರಗೆ

ಮುಂಬೈ(ಮಹಾರಾಷ್ಟ್ರ): ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಡ್ರಗ್ಸ್ ಕೇಸ್​ನ ತನಿಖೆಯ ನೇತೃತ್ವ ವಹಿಸಿದ್ದ ಮುಂಬೈ ವಲಯ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಭಾರಿ ಹಿನ್ನಡೆಯಾಗಿದೆ. ಸದ್ಯಕ್ಕೆ ಪ್ರಕರಣದ ತನಿಖೆಯನ್ನು ದೆಹಲಿ ಎನ್‌ಸಿಬಿ ತಂಡಕ್ಕೆ ಹಸ್ತಾಂತರಿಸಲಾಗಿದೆ.

ಆರ್ಯನ್ ಖಾನ್ ಪ್ರಕರಣ ಮತ್ತು ಇತರ 5 ಪ್ರಕರಣಗಳು ಸೇರಿದಂತೆ ನಮ್ಮ ವಲಯದ ಒಟ್ಟು 6 ಪ್ರಕರಣದ ತನಿಖೆಯನ್ನು ದೆಹಲಿಯ ಎನ್​ಸಿಬಿ ತಂಡ ಕೈಗೆತ್ತಿಕೊಳ್ಳಲಿದೆ. ಇದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದು ಎನ್‌ಸಿಬಿಯ ನೈರುತ್ಯ ವಲಯದ ಡೆಪ್ಯುಟಿ ಡಿಜಿ ಮುತಾ ಅಶೋಕ್ ಜೈನ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣಗಳ ತನಿಖೆಯನ್ನು ವಹಿಸಿಕೊಳ್ಳಲು ದೆಹಲಿ ಎನ್‌ಸಿಬಿಯ ತಂಡ ಶನಿವಾರ ಮುಂಬೈಗೆ ಆಗಮಿಸಲಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್​ಸಿಬಿ, ಯಾವುದೇ ಅಧಿಕಾರಿಯನ್ನೂ ತನಿಖಾ ತಂಡದಿಂದ ತೆಗೆದುಹಾಕಲಾಗಿಲ್ಲ. ಅವರು ತನಿಖೆಯಲ್ಲಿ ಸಹಕಾರ ನೀಡಲಿದ್ದಾರೆ. ಮುಂದಿನ ಆದೇಶದವರೆಗೆ ಅವರು ತಮ್ಮ ಸ್ಥಾನದಲ್ಲಿಯೇ ಮುಂದುವರೆಯಲಿದ್ದಾರೆ ಎಂದು ಎನ್​ಸಿಬಿಯನ್ನು ಉಲ್ಲೇಖಿಸಿ ಎಎನ್​ಐ ವರದಿ ಮಾಡಿದೆ.

ಸಮೀರ್ ವಾಂಖೆಡೆ ಹೇಳಿಕೆ:

ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಪ್ರತಿಕ್ರಿಯಿಸಿದ್ದು, ನನ್ನನ್ನು ತನಿಖೆಯಿಂದ ತೆಗೆದುಹಾಕಿಲ್ಲ. ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ನಾನು ಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದೆ. ಈ ಹಿನ್ನೆಲೆಯಲ್ಲಿ ಆರ್ಯನ್ ಖಾನ್ ಮತ್ತು ಸಮೀರ್ ಖಾನ್ ಪ್ರಕರಣವನ್ನು ದೆಹಲಿ ಎನ್​ಸಿಬಿಯ ಎಸ್​ಐಟಿಗೆ ವಹಿಸಲಾಗಿದೆ. ಇದು ದೆಹಲಿ ಮತ್ತು ಮುಂಬೈ ಎನ್​ಸಿಬಿ ನಡುವಿನ ಸಮನ್ವಯತೆ ಆಗಿದೆ ಎಂದು ಎಎನ್​ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ನಿಯನ್ನು ಮೇಕಪ್‌ರಹಿತವಾಗಿ ನೋಡಿ ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತಿ!

ಮುಂಬೈ(ಮಹಾರಾಷ್ಟ್ರ): ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಡ್ರಗ್ಸ್ ಕೇಸ್​ನ ತನಿಖೆಯ ನೇತೃತ್ವ ವಹಿಸಿದ್ದ ಮುಂಬೈ ವಲಯ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಭಾರಿ ಹಿನ್ನಡೆಯಾಗಿದೆ. ಸದ್ಯಕ್ಕೆ ಪ್ರಕರಣದ ತನಿಖೆಯನ್ನು ದೆಹಲಿ ಎನ್‌ಸಿಬಿ ತಂಡಕ್ಕೆ ಹಸ್ತಾಂತರಿಸಲಾಗಿದೆ.

ಆರ್ಯನ್ ಖಾನ್ ಪ್ರಕರಣ ಮತ್ತು ಇತರ 5 ಪ್ರಕರಣಗಳು ಸೇರಿದಂತೆ ನಮ್ಮ ವಲಯದ ಒಟ್ಟು 6 ಪ್ರಕರಣದ ತನಿಖೆಯನ್ನು ದೆಹಲಿಯ ಎನ್​ಸಿಬಿ ತಂಡ ಕೈಗೆತ್ತಿಕೊಳ್ಳಲಿದೆ. ಇದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದು ಎನ್‌ಸಿಬಿಯ ನೈರುತ್ಯ ವಲಯದ ಡೆಪ್ಯುಟಿ ಡಿಜಿ ಮುತಾ ಅಶೋಕ್ ಜೈನ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣಗಳ ತನಿಖೆಯನ್ನು ವಹಿಸಿಕೊಳ್ಳಲು ದೆಹಲಿ ಎನ್‌ಸಿಬಿಯ ತಂಡ ಶನಿವಾರ ಮುಂಬೈಗೆ ಆಗಮಿಸಲಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್​ಸಿಬಿ, ಯಾವುದೇ ಅಧಿಕಾರಿಯನ್ನೂ ತನಿಖಾ ತಂಡದಿಂದ ತೆಗೆದುಹಾಕಲಾಗಿಲ್ಲ. ಅವರು ತನಿಖೆಯಲ್ಲಿ ಸಹಕಾರ ನೀಡಲಿದ್ದಾರೆ. ಮುಂದಿನ ಆದೇಶದವರೆಗೆ ಅವರು ತಮ್ಮ ಸ್ಥಾನದಲ್ಲಿಯೇ ಮುಂದುವರೆಯಲಿದ್ದಾರೆ ಎಂದು ಎನ್​ಸಿಬಿಯನ್ನು ಉಲ್ಲೇಖಿಸಿ ಎಎನ್​ಐ ವರದಿ ಮಾಡಿದೆ.

ಸಮೀರ್ ವಾಂಖೆಡೆ ಹೇಳಿಕೆ:

ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಪ್ರತಿಕ್ರಿಯಿಸಿದ್ದು, ನನ್ನನ್ನು ತನಿಖೆಯಿಂದ ತೆಗೆದುಹಾಕಿಲ್ಲ. ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ನಾನು ಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದೆ. ಈ ಹಿನ್ನೆಲೆಯಲ್ಲಿ ಆರ್ಯನ್ ಖಾನ್ ಮತ್ತು ಸಮೀರ್ ಖಾನ್ ಪ್ರಕರಣವನ್ನು ದೆಹಲಿ ಎನ್​ಸಿಬಿಯ ಎಸ್​ಐಟಿಗೆ ವಹಿಸಲಾಗಿದೆ. ಇದು ದೆಹಲಿ ಮತ್ತು ಮುಂಬೈ ಎನ್​ಸಿಬಿ ನಡುವಿನ ಸಮನ್ವಯತೆ ಆಗಿದೆ ಎಂದು ಎಎನ್​ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ನಿಯನ್ನು ಮೇಕಪ್‌ರಹಿತವಾಗಿ ನೋಡಿ ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.