ನವದೆಹಲಿ: ಕರ್ನಾಟಕ ಹೈಕೋರ್ಟ್ಗೆ ಹೊಸದಾಗಿ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂಕೋರ್ಟ್ ಅನುಮೋದನೆ ನೀಡಿದೆ. ಜುಲೈ 19ರಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರ ನೇತೃತ್ವದಲ್ಲಿ ಈ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಅನಿಲ್ ಭೀಮಶೇನ್ ಕಟ್ಟಿ, ಗುರುಸಿದ್ಧಯ್ಯ ಬಸವರಾಜ, ಚಂದ್ರಶೇಖರ್ ಮೃತ್ಯಂಜಯ ಜೋಶಿ,ಉಮೇಶ್ ಮಂಜುನಾಥ್ಭಟ್ಟ ಅಡಿಗ ಹಾಗೂ ತಲ್ಕಾಡ ಗಿರಿಗೌಡ ಶಿವಶಂಕ್ರೆ ಗೌಡ ಅವರನ್ನು ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ.
ಈ ನಡುವೆ, ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರು ಜುಲೈ 2ರಂದು ನಿವೃತ್ತಿಯಾಗಿದ್ದು, ಸದ್ಯ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಕಾಯಂ ಸಿಜೆ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ:ಅಗತ್ಯ ವಸ್ತುಗಳ ಜಿಎಸ್ಟಿ ಏರಿಕೆ: ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ, ಸರ್ಕಾರದ ವಿರುದ್ಧ ಘೋಷಣೆ