ETV Bharat / bharat

9 ವಿದೇಶಿ ತಬ್ಲಿಘಿಗಳ 10 ವರ್ಷ ನಿರ್ಬಂಧ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್

author img

By

Published : Nov 20, 2020, 9:44 AM IST

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಇಬ್ಬರು ವಿದೇಶಿ ತಬ್ಲಿಘಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್​​​​ ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರ ಪೀಠವು, ಭವಿಷ್ಯದಲ್ಲಿ ಅವರು ಭಾರತಕ್ಕೆ ಭೇಟಿ ನೀಡಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಿದರೆ, ಹೈಕೋರ್ಟ್ ತೀರ್ಪು ಪರಿಗಣಿಸದೇ, ಅವರ ಅರ್ಹತೆಯ ಮೇಲೆ ವೀಸಾ ಪರಿಗಣಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.

sc-does-away-with-10-year-travel-restriction-on-9-foreigner-tablighi-jamaat-members
9 ವಿದೇಶಿ ತಬ್ಲಿಘಿಗಳ 10 ವರ್ಷ ನಿರ್ಬಂಧ ಆದೇಶ ರದ್ಧುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಕೋವಿಡ್ ಸಂದರ್ಭದಲ್ಲಿ ನಿಜಾಮುದ್ದೀನ್ ಮರ್ಕಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 9 ವಿದೇಶಿ ತಬ್ಲಿಘಿ ಜಮಾತ್​​ ಸದಸ್ಯರಿಗೆ ಭಾರತಕ್ಕೆ ಭೇಟಿ ನೀಡದಂತೆ 10 ವರ್ಷಗಳ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಇಬ್ಬರು ವಿದೇಶಿ ತಬ್ಲಿಘಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್​​​​ ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರ ಪೀಠವು, ಭವಿಷ್ಯದಲ್ಲಿ ಅವರು ಭಾರತಕ್ಕೆ ಭೇಟಿ ನೀಡಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಿದರೆ, ಹೈಕೋರ್ಟ್ ತೀರ್ಪು ಪರಿಗಣಿಸದೇ, ಅವರ ಅರ್ಹತೆಯ ಮೇಲೆ ವೀಸಾ ಪರಿಗಣಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಭಾರತಕ್ಕೆ ಭೇಟಿ ನೀಡಲು ಮೇಲ್ಮನವಿ ಸಲ್ಲಿಸಿರುವ ಇಬ್ಬರು ಹಾಗೂ ಉಳಿದ 8 ಮಂದಿ ಇಚ್ಛಿಸಿ ವೀಸಾಗೆ ಅರ್ಜಿ ಸಲ್ಲಿಸಿದರೆ, ಅಕ್ಟೋಬರ್ 13ರ ಹೈಕೋರ್ಟ್ ತೀರ್ಪನ್ನು ಗಣನೆಗೆ ತೆಗದುಕೊಳ್ಳದೇ, ಕೇವಲ ಅರ್ಹತೆ ಆಧಾರದ ಮೇಲೆ ಅವರನ್ನು ಪರಿಗಣಿಸಬೇಕು ಎಂದು ನಾವು ಸ್ಪಷ್ಟಪಡಿಸುತ್ತೇವೆ ಎಂದಿದ್ದಾರೆ.

ಈ ಮೊದಲು ಭಾರತಕ್ಕೆ ಭೇಟಿ ನೀಡದಂತೆ 9 ತಬ್ಲಿಘಿಗಳಿಗೆ 10 ವರ್ಷಗಳ ನಿರ್ಬಂಧ ಹೇರಿ ಹೈಕೋರ್ಟ್ ಆದೇಶಿಸಿತ್ತು.

ಇದಲ್ಲದೆ ಇನ್ನೊಂದು ಪ್ರಕರಣದಲ್ಲಿ ವೀಸಾ ಉಲ್ಲಂಘಿಸಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ ತಬ್ಲಿಘಿಗಳನ್ನು ದೋಷಮುಕ್ತ ಎಂದು ತೀರ್ಪು ನೀಡಿದ್ದ ದೆಹಲಿಯ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ವೀಸಾ ಕಾನೂನು ಉಲ್ಲಂಘಿಸಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ ತಬ್ಲಿಘಿಗಳನ್ನು ಬಿಡುಗಡೆ ಮಾಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ದೆಹಲಿ ಪೊಲೀಸರು 44 ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿಗಳ ವಜಾಗೊಳಿಸಿದ್ದು, ಮ್ಯಾಜಿಸ್ಟ್ರೇಟ್ ಆದೇಶವನ್ನು ಎತ್ತಿಹಿಡಿದಿದೆ.

ಇನ್ನು 6 ದೇಶಗಳ 8 ತಬ್ಲಿಘಿಗಳ ವಿರುದ್ಧ ಸಲ್ಲಿಸಲಾಗಿದ್ದ ಜಾರ್ಜ್ ಶೀಟ್​​ನ ಎಲ್ಲ ಆರೋಪಗಳಿಂದ ಮುಕ್ತಗೊಳಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್​ನ ಆದೇಶ ಪ್ರಶ್ನಿಸಿ ದೆಹಲಿ ಪೊಲೀಸರು ಮರು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣ ಕುರಿತಂತೆ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವು ಸಮಂಜಸವಾಗಿದೆ. ಈ ರೀತಿಯ ಪ್ರಕರಣಗಳಲ್ಲಿ ಅದು ಹಸ್ತಕ್ಷೇಪಕ್ಕೆ ಅನುವು ಮಾಡಿಕೊಟ್ಟಿಲ್ಲ ಎಂದು ತಿಳಿಸಿದೆ.

ನವದೆಹಲಿ: ಕೋವಿಡ್ ಸಂದರ್ಭದಲ್ಲಿ ನಿಜಾಮುದ್ದೀನ್ ಮರ್ಕಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 9 ವಿದೇಶಿ ತಬ್ಲಿಘಿ ಜಮಾತ್​​ ಸದಸ್ಯರಿಗೆ ಭಾರತಕ್ಕೆ ಭೇಟಿ ನೀಡದಂತೆ 10 ವರ್ಷಗಳ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಇಬ್ಬರು ವಿದೇಶಿ ತಬ್ಲಿಘಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್​​​​ ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರ ಪೀಠವು, ಭವಿಷ್ಯದಲ್ಲಿ ಅವರು ಭಾರತಕ್ಕೆ ಭೇಟಿ ನೀಡಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಿದರೆ, ಹೈಕೋರ್ಟ್ ತೀರ್ಪು ಪರಿಗಣಿಸದೇ, ಅವರ ಅರ್ಹತೆಯ ಮೇಲೆ ವೀಸಾ ಪರಿಗಣಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಭಾರತಕ್ಕೆ ಭೇಟಿ ನೀಡಲು ಮೇಲ್ಮನವಿ ಸಲ್ಲಿಸಿರುವ ಇಬ್ಬರು ಹಾಗೂ ಉಳಿದ 8 ಮಂದಿ ಇಚ್ಛಿಸಿ ವೀಸಾಗೆ ಅರ್ಜಿ ಸಲ್ಲಿಸಿದರೆ, ಅಕ್ಟೋಬರ್ 13ರ ಹೈಕೋರ್ಟ್ ತೀರ್ಪನ್ನು ಗಣನೆಗೆ ತೆಗದುಕೊಳ್ಳದೇ, ಕೇವಲ ಅರ್ಹತೆ ಆಧಾರದ ಮೇಲೆ ಅವರನ್ನು ಪರಿಗಣಿಸಬೇಕು ಎಂದು ನಾವು ಸ್ಪಷ್ಟಪಡಿಸುತ್ತೇವೆ ಎಂದಿದ್ದಾರೆ.

ಈ ಮೊದಲು ಭಾರತಕ್ಕೆ ಭೇಟಿ ನೀಡದಂತೆ 9 ತಬ್ಲಿಘಿಗಳಿಗೆ 10 ವರ್ಷಗಳ ನಿರ್ಬಂಧ ಹೇರಿ ಹೈಕೋರ್ಟ್ ಆದೇಶಿಸಿತ್ತು.

ಇದಲ್ಲದೆ ಇನ್ನೊಂದು ಪ್ರಕರಣದಲ್ಲಿ ವೀಸಾ ಉಲ್ಲಂಘಿಸಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ ತಬ್ಲಿಘಿಗಳನ್ನು ದೋಷಮುಕ್ತ ಎಂದು ತೀರ್ಪು ನೀಡಿದ್ದ ದೆಹಲಿಯ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ವೀಸಾ ಕಾನೂನು ಉಲ್ಲಂಘಿಸಿ ಜಮಾತ್​​ನಲ್ಲಿ ಪಾಲ್ಗೊಂಡಿದ್ದ ತಬ್ಲಿಘಿಗಳನ್ನು ಬಿಡುಗಡೆ ಮಾಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ದೆಹಲಿ ಪೊಲೀಸರು 44 ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿಗಳ ವಜಾಗೊಳಿಸಿದ್ದು, ಮ್ಯಾಜಿಸ್ಟ್ರೇಟ್ ಆದೇಶವನ್ನು ಎತ್ತಿಹಿಡಿದಿದೆ.

ಇನ್ನು 6 ದೇಶಗಳ 8 ತಬ್ಲಿಘಿಗಳ ವಿರುದ್ಧ ಸಲ್ಲಿಸಲಾಗಿದ್ದ ಜಾರ್ಜ್ ಶೀಟ್​​ನ ಎಲ್ಲ ಆರೋಪಗಳಿಂದ ಮುಕ್ತಗೊಳಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್​ನ ಆದೇಶ ಪ್ರಶ್ನಿಸಿ ದೆಹಲಿ ಪೊಲೀಸರು ಮರು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣ ಕುರಿತಂತೆ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವು ಸಮಂಜಸವಾಗಿದೆ. ಈ ರೀತಿಯ ಪ್ರಕರಣಗಳಲ್ಲಿ ಅದು ಹಸ್ತಕ್ಷೇಪಕ್ಕೆ ಅನುವು ಮಾಡಿಕೊಟ್ಟಿಲ್ಲ ಎಂದು ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.