ETV Bharat / bharat

ಮೀಡಿಯಾ ಒನ್​​ ಪ್ರಸಾರ ತಡೆ ಕೇಸ್​.. ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್​​ - ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ತನ್ನ ಅಭಿಪ್ರಾಯ

ಮಲಯಾಳಂ ಚಾನೆಲ್‌ನ ಭದ್ರತಾ ಕ್ಲಿಯರೆನ್ಸ್ ರದ್ದುಪಡಿಸಲು ಕಾರಣಗಳನ್ನು ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್​ಗೆ ಕಾರಣಗಳ ಬಗ್ಗೆ ವಿವರಣೆ ನೀಡಿತ್ತು. ಈ ಕಾರಣಗಳನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್​ ಮೀಡಿಯಾ ಒನ್ ಪ್ರಕರಣದಲ್ಲಿ ಗುರುವಾರ ತನ್ನ ಆದೇಶ ಕಾಯ್ದಿರಿಸಿದೆ.

SC reserves judgement in Media One case,
ಮೀಡಿಯಾ ಒನ್​​ ಪ್ರಸಾರ ತಡೆ ಕೇಸ್​.. ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್​​
author img

By

Published : Nov 3, 2022, 5:24 PM IST

ನವದೆಹಲಿ: ಮೀಡಿಯಾ ಒನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಕಾಯ್ದಿರಿಸಿದೆ. ರಾಷ್ಟ್ರೀಯ ಭದ್ರತೆಯ ಕಾರಣಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ಎಲ್ಲ ಪ್ರಕರಣಗಳಲ್ಲಿ 'ಸ್ಟ್ರೇಟ್​ ಜಾಕೆಟ್‘ ಸೂತ್ರವನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಇದೇ ವೇಳೆ ಅಭಿಪ್ರಾಯಪಟ್ಟಿದೆ.

ಪ್ರಕರಣದ ಸಂಬಂಧ ಕೇಂದ್ರ ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ತನ್ನ ಅಭಿಪ್ರಾಯ ನೀಡಿತ್ತು. ಕೇಂದ್ರ ಸರ್ಕಾರವು ದೇಶದ ಭದ್ರತೆ ಕಾರಣ ಒಡ್ಡಿ ಮೀಡಿಯಾ ಒನ್​ ಪ್ರಸಾರವನ್ನು ಸ್ಥಗಿತಗೊಳಿಸಿತ್ತು. ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಪ್ರಶ್ನಿಸಿ, ಕೇರಳ ಹೈಕೋರ್ಟ್​ ಮೆಟ್ಟಿಲೇರಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್ ಮಲಯಾಳಂ ಸುದ್ದಿ ವಾಹಿನಿಯ ಪ್ರಸಾರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರ ವನ್ನು ಎತ್ತಿಹಿಡಿದಿತ್ತು. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮೀಡಿಯಾ ಒನ್ ಅನ್ನು ನಿರ್ವಹಿಸುವ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್‌ನ ಮನವಿಯನ್ನು ವಜಾಗೊಳಿಸಿತ್ತು.

ಇದನ್ನು ಓದಿ: ರಸ್ತೆ ಬದಿಗಳಲ್ಲಿ ಕೆಲಸ ಮಾಡುವ ಮಕ್ಕಳ ಕಲ್ಯಾಣಕ್ಕಾಗಿ ಮತ್ತೊಮ್ಮೆ ಸಭೆ ಮಾಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನವದೆಹಲಿ: ಮೀಡಿಯಾ ಒನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಕಾಯ್ದಿರಿಸಿದೆ. ರಾಷ್ಟ್ರೀಯ ಭದ್ರತೆಯ ಕಾರಣಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ಎಲ್ಲ ಪ್ರಕರಣಗಳಲ್ಲಿ 'ಸ್ಟ್ರೇಟ್​ ಜಾಕೆಟ್‘ ಸೂತ್ರವನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಇದೇ ವೇಳೆ ಅಭಿಪ್ರಾಯಪಟ್ಟಿದೆ.

ಪ್ರಕರಣದ ಸಂಬಂಧ ಕೇಂದ್ರ ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ತನ್ನ ಅಭಿಪ್ರಾಯ ನೀಡಿತ್ತು. ಕೇಂದ್ರ ಸರ್ಕಾರವು ದೇಶದ ಭದ್ರತೆ ಕಾರಣ ಒಡ್ಡಿ ಮೀಡಿಯಾ ಒನ್​ ಪ್ರಸಾರವನ್ನು ಸ್ಥಗಿತಗೊಳಿಸಿತ್ತು. ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಪ್ರಶ್ನಿಸಿ, ಕೇರಳ ಹೈಕೋರ್ಟ್​ ಮೆಟ್ಟಿಲೇರಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್ ಮಲಯಾಳಂ ಸುದ್ದಿ ವಾಹಿನಿಯ ಪ್ರಸಾರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರ ವನ್ನು ಎತ್ತಿಹಿಡಿದಿತ್ತು. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮೀಡಿಯಾ ಒನ್ ಅನ್ನು ನಿರ್ವಹಿಸುವ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್‌ನ ಮನವಿಯನ್ನು ವಜಾಗೊಳಿಸಿತ್ತು.

ಇದನ್ನು ಓದಿ: ರಸ್ತೆ ಬದಿಗಳಲ್ಲಿ ಕೆಲಸ ಮಾಡುವ ಮಕ್ಕಳ ಕಲ್ಯಾಣಕ್ಕಾಗಿ ಮತ್ತೊಮ್ಮೆ ಸಭೆ ಮಾಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.