ETV Bharat / bharat

ಕೊರೊನಾದಿಂದ ಚೇತರಿಸಿಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ನಿಧನ

ಕೊರೊನಾ ಬಳಿಕವೂ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಮಾಚಲ ಪ್ರದೇಶದ ಬಿಜೆಪಿ ಹಿರಿಯ ಮುಖಂಡ ನರಿಂದರ್ ಬ್ರಾಗ್ತಾ ನಿಧನರಾಗಿದ್ದಾರೆ.

author img

By

Published : Jun 5, 2021, 11:54 AM IST

ಶಿಮ್ಲಾ (ಹಿಮಾಚಲ ಪ್ರದೇಶ): ಕೋವಿಡ್​ ಸೋಂಕಿನಿಂದ ಚೇತರಿಸಿಕೊಂಡಿದ್ದ ಹಿಮಾಚಲ ಪ್ರದೇಶದ ಮಾಜಿ ಸಚಿವ, ಹಾಲಿ ಶಾಸಕರಾಗಿರುವ ಬಿಜೆಪಿ ಹಿರಿಯ ಮುಖಂಡ ನರಿಂದರ್ ಬ್ರಾಗ್ತಾ (69) ಇಂದು ಕೊನೆಯುಸಿರೆಳೆದಿದ್ದಾರೆ.

ಏಪ್ರಿಲ್ 13ರಂದು ವೈರಸ್​ ಅಂಟಿರುವುದು ದೃಢಪಟ್ಟಿದ್ದ ನರಿಂದರ್ ಬ್ರಾಗ್ತಾ 15 ದಿನಗಳಿಂದ ಚಂಡೀಗಢದ ಪಿಜಿಐ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕೋವಿಡ್​ ವರದಿ ನೆಗೆಟಿವ್​ ಬಂದ ಬಳಿಕವೂ ಆರೋಗ್ಯದಲ್ಲಿ ಏರುಪೇರಾದ ಕಾರಣ ಚಿಕಿತ್ಸೆ ಮುಂದುವರೆಸಲಾಗಿತ್ತು. ನಿನ್ನೆಯಷ್ಟೇ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.

ಇದನ್ನೂ ಓದಿ: ಕೋವಿಡ್​ನಿಂದ ಗುಣಮುಖರಾದ ಮೇಲೆ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ದೆಹಲಿ ಜನತೆ!

ನರಿಂದರ್ ಬ್ರಾಗ್ತಾ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಿಜೆಪಿ ಶಾಸಕರೂ ಹಾಗೂ ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ವಿಪ್ ಆಗಿದ್ದರು. ಇವರ ನಿಧನಕ್ಕೆ ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.

ಶಿಮ್ಲಾ (ಹಿಮಾಚಲ ಪ್ರದೇಶ): ಕೋವಿಡ್​ ಸೋಂಕಿನಿಂದ ಚೇತರಿಸಿಕೊಂಡಿದ್ದ ಹಿಮಾಚಲ ಪ್ರದೇಶದ ಮಾಜಿ ಸಚಿವ, ಹಾಲಿ ಶಾಸಕರಾಗಿರುವ ಬಿಜೆಪಿ ಹಿರಿಯ ಮುಖಂಡ ನರಿಂದರ್ ಬ್ರಾಗ್ತಾ (69) ಇಂದು ಕೊನೆಯುಸಿರೆಳೆದಿದ್ದಾರೆ.

ಏಪ್ರಿಲ್ 13ರಂದು ವೈರಸ್​ ಅಂಟಿರುವುದು ದೃಢಪಟ್ಟಿದ್ದ ನರಿಂದರ್ ಬ್ರಾಗ್ತಾ 15 ದಿನಗಳಿಂದ ಚಂಡೀಗಢದ ಪಿಜಿಐ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕೋವಿಡ್​ ವರದಿ ನೆಗೆಟಿವ್​ ಬಂದ ಬಳಿಕವೂ ಆರೋಗ್ಯದಲ್ಲಿ ಏರುಪೇರಾದ ಕಾರಣ ಚಿಕಿತ್ಸೆ ಮುಂದುವರೆಸಲಾಗಿತ್ತು. ನಿನ್ನೆಯಷ್ಟೇ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು.

ಇದನ್ನೂ ಓದಿ: ಕೋವಿಡ್​ನಿಂದ ಗುಣಮುಖರಾದ ಮೇಲೆ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ದೆಹಲಿ ಜನತೆ!

ನರಿಂದರ್ ಬ್ರಾಗ್ತಾ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಿಜೆಪಿ ಶಾಸಕರೂ ಹಾಗೂ ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ವಿಪ್ ಆಗಿದ್ದರು. ಇವರ ನಿಧನಕ್ಕೆ ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.