ನವದೆಹಲಿ: ರಾಜಸಭೆ ಚುನಾವಣೆಯಲ್ಲಿ ಶಾಸಕರ ಕುದುರೆ ವ್ಯಾಪಾರದ ಭೀತಿ ಎದುರಾಗಿದ್ದು, ಹರಿಯಾಣದಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್ಗೆ ಕಳುಹಿಸಲು ಮುಂದಾಗಿದೆ. ಕಾಂಗ್ರೆಸ್ ಆಡಳಿತವಿರುವ ಛತ್ತೀಸ್ಗಢದಲ್ಲಿ ಈಗಾಗಲೇ ರೂಮ್ಗಳು ಸಹ ಬುಕ್ ಆಗಿವೆ ಎಂದು ವರದಿಯಾಗಿದೆ.
ಜೂ.10ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಹರಿಯಾಣದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ಸ್ಪರ್ಧಿಸಿದ್ದಾರೆ. ಆದರೆ, ಪಕ್ಷವು ರಾಜ್ಯದ ಹೊರಗಿನವರನ್ನು ಕಣಕ್ಕಿಳಿಸಿರುವ ಕಾರಣ ಅತೃಪ್ತಿ ಉಂಟಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಶಾಸಕರ ಕುದುರೆ ವ್ಯಾಪಾರದ ಆತಂಕವೂ ಕಾಂಗ್ರೆಸ್ಗೆ ಕಾಡುತ್ತಿದೆ.
ಆದ್ದರಿಂದ ನಾಳೆಯಿಂದ (ಗುರುವಾರ) ಛತ್ತೀಸ್ಗಢದ ರೆಸಾರ್ಟ್ವೊಂದರಲ್ಲಿ ರೂಮ್ ಬುಕ್ ಮಾಡಲಾಗಿದೆ ಎನ್ನಲಾಗ್ತಿದೆ. ಆದರೆ, ಯಾವಾಗ ಶಾಸಕರನ್ನು ರೆಸಾರ್ಟ್ಗೆ ಶಿಫ್ಟ್ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿಲ್ಲ.
-
BJP has appointed Narendra Singh Tomar as in charge of Rajya Sabha elections for Rajasthan, Gajendra Singh Shekhawat for Haryana, G Kishan Reddy for Karnataka, and Ashwini Vaishnaw for Maharashtra. pic.twitter.com/c00hbuWG1B
— ANI (@ANI) June 1, 2022 " class="align-text-top noRightClick twitterSection" data="
">BJP has appointed Narendra Singh Tomar as in charge of Rajya Sabha elections for Rajasthan, Gajendra Singh Shekhawat for Haryana, G Kishan Reddy for Karnataka, and Ashwini Vaishnaw for Maharashtra. pic.twitter.com/c00hbuWG1B
— ANI (@ANI) June 1, 2022BJP has appointed Narendra Singh Tomar as in charge of Rajya Sabha elections for Rajasthan, Gajendra Singh Shekhawat for Haryana, G Kishan Reddy for Karnataka, and Ashwini Vaishnaw for Maharashtra. pic.twitter.com/c00hbuWG1B
— ANI (@ANI) June 1, 2022
ಬಿಜೆಪಿಯಿಂದ ಉಸ್ತುವಾರಿಗಳ ನೇಮಕ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಯಾ ರಾಜ್ಯಗಳಿಗೆ ತನ್ನ ಉಸ್ತುವಾರಿಗಳನ್ನು ನೇಮಿಸಿದೆ. ಕರ್ನಾಟಕದ ಉಸ್ತುವಾರಿಯಾಗಿ ಕೇಂದ್ರ ಸಚಿವ ಕೆ.ಕಿಶನ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಇತ್ತ, ರಾಜಸ್ಥಾನ-ನರೇಂದ್ರ ಸಿಂಗ್ ತೋಮರ್, ಹರಿಯಾಣ-ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಮಹಾರಾಷ್ಟ್ರ ಉಸ್ತುವಾರಿಯಾಗಿ ಅಶ್ವಿನಿ ವೈಷ್ಣವ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ ಗಾಂಧಿ, ಪುತ್ರ ರಾಹುಲ್ಗೆ ಸಮನ್ಸ್