ETV Bharat / bharat

ರಾಷ್ಟ್ರಪತಿ ಮತಪೆಟ್ಟಿಗೆಗಳಿಗೆ ವಿಮಾನದಲ್ಲಿ ಪ್ರತ್ಯೇಕ ಆಸನ! ದೇಶದ ವಿವಿಧೆಡೆಯಿಂದ ದೆಹಲಿಗೆ ರವಾನೆ

author img

By

Published : Jul 19, 2022, 10:23 AM IST

ರಾಷ್ಟ್ರಪತಿ ಚುನಾವಣೆಯ ಮತಪೆಟ್ಟಿಗೆಗಳು ವಿವಿಧ ರಾಜ್ಯಗಳಿಂದ ದೆಹಲಿಗೆ ರವಾನೆಯಾಗುತ್ತಿವೆ. ಅವುಗಳಿಗೆ ವಿಮಾನದಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿರುವುದು ವಿಶೇಷ.

ವಿಮಾನದ ಪ್ರತ್ಯೇಕ ಆಸನದಲ್ಲಿ ದೆಹಲಿಗೆ ಬರುತ್ತಿರುವ ರಾಷ್ಟ್ರಪತಿ ಮತಪೆಟ್ಟಿಗೆಗಳು!
ವಿಮಾನದ ಪ್ರತ್ಯೇಕ ಆಸನದಲ್ಲಿ ದೆಹಲಿಗೆ ಬರುತ್ತಿರುವ ರಾಷ್ಟ್ರಪತಿ ಮತಪೆಟ್ಟಿಗೆಗಳು!

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಸಂಸತ್‌ ಭವನ ಹಾಗು ವಿವಿಧ ರಾಜ್ಯಗಳ ವಿಧಾನಸಭೆಗಳಲ್ಲಿ ಮತದಾನ ನಡೆದಿದ್ದು, ಮತಪೆಟ್ಟಿಗೆಗಳನ್ನು ವಿಮಾನದ ಮೂಲಕ ದೆಹಲಿಗೆ ಒಯ್ಯಲಾಗುತ್ತಿದೆ. ವಿಶೇಷ ಅಂದರೆ, ಮನುಷ್ಯನಂತೆಯೇ ಈ ಮತಪೆಟ್ಟಿಗೆಗಳಿಗೂ ಪ್ರತ್ಯೇಕ ಸೀಟು ಕಾಯ್ದಿರಿಸಿ ಅವುಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ಮತ ಪೆಟ್ಟಿಗೆ ಹೊತ್ತ ಅಧಿಕಾರಿಗೆ ಒಂದು ಸೀಟಾದರೆ, ಬ್ಯಾಲೆಟ್​ ಬಾಕ್ಸ್​ಗೇ ಪ್ರತ್ಯೇಕ ಸೀಟನ್ನು 'ಮಿಸ್ಟರ್​ ಬ್ಯಾಲೆಟ್​ ಬಾಕ್ಸ್​' ಹೆಸರಲ್ಲಿ ಕಾಯ್ದಿರಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮತಪೆಟ್ಟಿಗೆಗಳನ್ನು ತೆಗೆದುಕೊಂಡು ಬರಲು ಈ ಟಿಕೆಟ್​ಗಳನ್ನು ಕಾಯ್ದಿರಿಸಿತ್ತು.

ಈ ಹಿಂದೆ ಮತ ಪೆಟ್ಟಿಗೆಗಳನ್ನು ಚುನಾವಣಾ ಅಧಿಕಾರಿಗಳು ಅದನ್ನು ಕೈಯಲ್ಲಿ ಹ್ಯಾಂಡ್ ಬ್ಯಾಗ್​ನಂತೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಈ ವರ್ಷ ಆಯೋಗವು ಮತಪೆಟ್ಟಿಗೆಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳಿಂದ ಯಶವಂತ್ ಸಿನ್ಹಾರ ಭವಿಷ್ಯ ನಿರ್ಧಾರವಾಗಲಿದೆ.

ಮತಪೆಟ್ಟಿಗೆಗೆ ಪ್ರತ್ಯೇಕ ವಿಮಾನ ಟಿಕೆಟ್‌ ಏಕೆ?: ಈ ಬಗ್ಗೆ ಚುನಾವಣಾ ಆಯೋಗ ಹೇಳಿಕೆ ನೀಡಿದ್ದು, "ಅಧ್ಯಕ್ಷೀಯ ಚುನಾವಣೆಯ ಪ್ರಕ್ರಿಯೆಯಲ್ಲಿ ಮತಪೆಟ್ಟಿಗೆ ಪ್ರಮುಖ ಪಾತ್ರವನ್ನು ಹೊಂದಿದೆ. ಇದು ಸಾಮಾನ್ಯ ಚುನಾವಣೆಯಾಗಿರದೇ, ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಅಧ್ಯಕ್ಷರ ಭವಿಷ್ಯ ಈ ಪೆಟ್ಟಿಗೆಗಳಲ್ಲಿ ಅಡಗಿರುತ್ತದೆ. ಹೀಗಾಗಿ, ಪೆಟ್ಟಿಗೆಗಳ ಸಾಗಣೆ, ಸಂಗ್ರಹಣೆ ಮತ್ತು ಬಳಕೆಯ ಸಮಯದಲ್ಲಿ ವಿಶೇಷ ಎಚ್ಚರಿಕೆಯನ್ನು ವಹಿಸಬೇಕಾಗಿದ್ದು, ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ನೀಟ್‌ ಪರೀಕ್ಷೆಗಾಗಿ ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದವರ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಸಂಸತ್‌ ಭವನ ಹಾಗು ವಿವಿಧ ರಾಜ್ಯಗಳ ವಿಧಾನಸಭೆಗಳಲ್ಲಿ ಮತದಾನ ನಡೆದಿದ್ದು, ಮತಪೆಟ್ಟಿಗೆಗಳನ್ನು ವಿಮಾನದ ಮೂಲಕ ದೆಹಲಿಗೆ ಒಯ್ಯಲಾಗುತ್ತಿದೆ. ವಿಶೇಷ ಅಂದರೆ, ಮನುಷ್ಯನಂತೆಯೇ ಈ ಮತಪೆಟ್ಟಿಗೆಗಳಿಗೂ ಪ್ರತ್ಯೇಕ ಸೀಟು ಕಾಯ್ದಿರಿಸಿ ಅವುಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ಮತ ಪೆಟ್ಟಿಗೆ ಹೊತ್ತ ಅಧಿಕಾರಿಗೆ ಒಂದು ಸೀಟಾದರೆ, ಬ್ಯಾಲೆಟ್​ ಬಾಕ್ಸ್​ಗೇ ಪ್ರತ್ಯೇಕ ಸೀಟನ್ನು 'ಮಿಸ್ಟರ್​ ಬ್ಯಾಲೆಟ್​ ಬಾಕ್ಸ್​' ಹೆಸರಲ್ಲಿ ಕಾಯ್ದಿರಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮತಪೆಟ್ಟಿಗೆಗಳನ್ನು ತೆಗೆದುಕೊಂಡು ಬರಲು ಈ ಟಿಕೆಟ್​ಗಳನ್ನು ಕಾಯ್ದಿರಿಸಿತ್ತು.

ಈ ಹಿಂದೆ ಮತ ಪೆಟ್ಟಿಗೆಗಳನ್ನು ಚುನಾವಣಾ ಅಧಿಕಾರಿಗಳು ಅದನ್ನು ಕೈಯಲ್ಲಿ ಹ್ಯಾಂಡ್ ಬ್ಯಾಗ್​ನಂತೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಈ ವರ್ಷ ಆಯೋಗವು ಮತಪೆಟ್ಟಿಗೆಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳಿಂದ ಯಶವಂತ್ ಸಿನ್ಹಾರ ಭವಿಷ್ಯ ನಿರ್ಧಾರವಾಗಲಿದೆ.

ಮತಪೆಟ್ಟಿಗೆಗೆ ಪ್ರತ್ಯೇಕ ವಿಮಾನ ಟಿಕೆಟ್‌ ಏಕೆ?: ಈ ಬಗ್ಗೆ ಚುನಾವಣಾ ಆಯೋಗ ಹೇಳಿಕೆ ನೀಡಿದ್ದು, "ಅಧ್ಯಕ್ಷೀಯ ಚುನಾವಣೆಯ ಪ್ರಕ್ರಿಯೆಯಲ್ಲಿ ಮತಪೆಟ್ಟಿಗೆ ಪ್ರಮುಖ ಪಾತ್ರವನ್ನು ಹೊಂದಿದೆ. ಇದು ಸಾಮಾನ್ಯ ಚುನಾವಣೆಯಾಗಿರದೇ, ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಅಧ್ಯಕ್ಷರ ಭವಿಷ್ಯ ಈ ಪೆಟ್ಟಿಗೆಗಳಲ್ಲಿ ಅಡಗಿರುತ್ತದೆ. ಹೀಗಾಗಿ, ಪೆಟ್ಟಿಗೆಗಳ ಸಾಗಣೆ, ಸಂಗ್ರಹಣೆ ಮತ್ತು ಬಳಕೆಯ ಸಮಯದಲ್ಲಿ ವಿಶೇಷ ಎಚ್ಚರಿಕೆಯನ್ನು ವಹಿಸಬೇಕಾಗಿದ್ದು, ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ನೀಟ್‌ ಪರೀಕ್ಷೆಗಾಗಿ ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದವರ ವಿರುದ್ಧ ಪ್ರಕರಣ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.