ETV Bharat / bharat

ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸಾವು... ಮದುವೆಗೆ ತೆರಳುತ್ತಿದ್ದ ಜನ ಮಸಣಕ್ಕೆ!

author img

By

Published : Nov 26, 2020, 11:06 AM IST

Updated : Nov 26, 2020, 11:59 AM IST

Seven killed in a tragic road accident, Seven killed in a tragic road accident at Lepetkata, Lepetkata road accident, Lepetkata road accident news, ಭೀಕರ ರಸ್ತೆ ದುರಂತದಲ್ಲಿ ಏಳು ಜನ ಸಾವು, ಲೆಪೆಟ್ಕಾಟ್​ನಲ್ಲಿ ಭೀಕರ ರಸ್ತೆ ದುರಂತದಲ್ಲಿ ಏಳು ಜನ ಸಾವು, ಲೆಪೆಟ್ಕಾಟ್​ ರಸ್ತೆ ಅಪಘಾತ, ಲೆಪೆಟ್ಕಾಟ್​ ರಸ್ತೆ ಅಪಘಾತ ಸುದ್ದಿ,
ನಿಂತ ಲಾರಿಗೆ ಗುದ್ದಿದ ಮದುವೆಗೆ ತೆರಳುತ್ತಿದ್ದ ಕಾರು

10:52 November 26

ಮದುವೆಗೆ ತೆರಳುತ್ತಿದ್ದ ಬೊಲೆರೊ ಕಾರು ನಿಂತ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಅಸ್ಸೋಂನ ದಿಬ್ರುಗಢ್​ ಜಿಲ್ಲೆಯಲ್ಲಿ ನಡೆದಿದೆ.

ನಿಂತ ಲಾರಿಗೆ ಗುದ್ದಿದ ಮದುವೆಗೆ ತೆರಳುತ್ತಿದ್ದ ಕಾರು

ದಿಬ್ರುಗಢ್​​: ಮದುವೆಗೆ ತೆರಳುತ್ತಿದ್ದ ಕಾರೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಲೆಪೆಟ್ಕಾಟ್​ನ ರಾಷ್ಟ್ರೀಯ ಎನ್​ಎಚ್​ 37ರಲ್ಲಿ ನಡೆದಿದೆ.  

ಮದುವೆಗೆ ಎಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿದ್ದು, ಕೆಲವರಿಗೆ ಗಾಯಗಳಾಗಿವೆ.  

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ

ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಆಸ್ಪತ್ರೆಯಲ್ಲಿ ಮೃತ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿತು.  

ಇದನ್ನೂ ಓದಿ: ಬೈಕ್​ಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವು

ಈ ಘಟನೆ ಕುರಿತು ಹೆದ್ದಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.  

10:52 November 26

ಮದುವೆಗೆ ತೆರಳುತ್ತಿದ್ದ ಬೊಲೆರೊ ಕಾರು ನಿಂತ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಅಸ್ಸೋಂನ ದಿಬ್ರುಗಢ್​ ಜಿಲ್ಲೆಯಲ್ಲಿ ನಡೆದಿದೆ.

ನಿಂತ ಲಾರಿಗೆ ಗುದ್ದಿದ ಮದುವೆಗೆ ತೆರಳುತ್ತಿದ್ದ ಕಾರು

ದಿಬ್ರುಗಢ್​​: ಮದುವೆಗೆ ತೆರಳುತ್ತಿದ್ದ ಕಾರೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಲೆಪೆಟ್ಕಾಟ್​ನ ರಾಷ್ಟ್ರೀಯ ಎನ್​ಎಚ್​ 37ರಲ್ಲಿ ನಡೆದಿದೆ.  

ಮದುವೆಗೆ ಎಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿದ್ದು, ಕೆಲವರಿಗೆ ಗಾಯಗಳಾಗಿವೆ.  

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ

ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಆಸ್ಪತ್ರೆಯಲ್ಲಿ ಮೃತ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿತು.  

ಇದನ್ನೂ ಓದಿ: ಬೈಕ್​ಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವು

ಈ ಘಟನೆ ಕುರಿತು ಹೆದ್ದಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.  

Last Updated : Nov 26, 2020, 11:59 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.