ETV Bharat / bharat

ಮಹಾಕಾಳಿ ದೇವಿ ಮೂರ್ತಿಯ ಪಾದದಡಿ ವ್ಯಕ್ತಿಯ ರುಂಡ ಪತ್ತೆ.. ಬೆಚ್ಚಿಬಿದ್ದ ಜನ! - Severed head found in temple

ತೆಲಂಗಾಣದ ಮಹಾಕಾಳಿ ದೇವಸ್ಥಾನದಲ್ಲಿರುವ ಮಹಾಕಾಳಿ ದೇವಿ ಮೂರ್ತಿಯ ಪಾದದಲ್ಲಿ ವ್ಯಕ್ತಿಯೊಬ್ಬನ ರುಂಡ ಪತ್ತೆಯಾಗಿದೆ.

Severed head found at Goddess Mahankali temple in Telangana
ಮಹಾಕಾಳಿ ದೇವಿ ಮೂರ್ತಿಯ ಪಾದದಲ್ಲಿ ವ್ಯಕ್ತಿಯ ರುಂಡ ಪತ್ತೆ
author img

By

Published : Jan 11, 2022, 1:38 PM IST

ಹೈದರಾಬಾದ್(ತೆಲಂಗಾಣ): ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಗೊಲ್ಲಪಲ್ಲಿ ಗ್ರಾಮದಲ್ಲಿರುವ ಮಹಾಕಾಳಿ ದೇವಸ್ಥಾನದಲ್ಲಿರುವ ಮಹಾಕಾಳಿ ದೇವಿ ಮೂರ್ತಿಯ ಪಾದದಲ್ಲಿ ವ್ಯಕ್ತಿಯೊಬ್ಬನ ರುಂಡ ಪತ್ತೆಯಾಗಿದೆ.

ಪೊಲೀಸರ ಪ್ರಕಾರ, ಮೃತರಿಗೆ ಸುಮಾರು 35 ವರ್ಷ ವಯಸ್ಸಾಗಿರಬಹುದು. ನಿಧಿಗಾಗಿ ನಡೆಸುವ ನರ ಬಲಿ ಪ್ರಕರಣವಾಗಿರಬಹುದು ಎಂಬ ವದಂತಿಗಳು ಹರಡುತ್ತಿವೆ. ಆತನನ್ನು ಬೇರೆ ಸ್ಥಳದಲ್ಲಿ ಕೊಲೆಮಾಡಿರಬಹುದು, ಆದರೆ ಪೊಲೀಸರ ದಾರಿ ತಪ್ಪಿಸುವ ಸಲುವಾಗಿ ತಲೆಯನ್ನು ದೇವಿಯ ಪಾದದ ಬಳಿ ಇಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಲಾಗುತ್ತಿದೆ.

Severed head found at Goddess Mahankali temple in Telangana
ಮಹಾಕಾಳಿ ದೇವಿ ಮೂರ್ತಿಯ ಪಾದದಲ್ಲಿ ವ್ಯಕ್ತಿಯ ರುಂಡ ಪತ್ತೆ

ಘಟನಾ ಸ್ಥಳಕ್ಕೆ ಡಿಎಸ್ಪಿ ಆನಂದ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನನ್ನು ಗುರುತಿಸುವ ಸಲುವಾಗಿ ತಲೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಮೂಲಗಳ ಪ್ರಕಾರ ಮೃತರನ್ನು ಸೂರ್ಯಪೇಟ್ ಜಿಲ್ಲೆಯ ಸುನ್ಯಾಪಹಾಡ್ ಗ್ರಾಮದ ಜಹೇಂದರ್ ನಾಯಕ್ (30) ಎಂದು ಗುರುತಿಸಲಾಗಿದೆ.

ಮೃತ ಜಹೇಂದರ್ ನಾಯಕ್ ಮಾನಸಿಕ ಅಸ್ವಸ್ಥನಾಗಿದ್ದು, ಕಳೆದ ಐದೂವರೆ ವರ್ಷಗಳಿಂದ ಅಲೆದಾಡುತ್ತಿದ್ದ. ಕೆಲವು ವರ್ಷಗಳಿಂದ ರಂಗಾರೆಡ್ಡಿ ಜಿಲ್ಲೆಯ ಇಬ್ರಾಹಿಂಪಟ್ಟಣ ಬಳಿಯ ತುರ್ಕಯಾಂಜಲ್ ಎಂಬಲ್ಲಿನ ದೇವಸ್ಥಾನದಲ್ಲಿ ತಂಗಿದ್ದರು ಎಂದು ತಿಳಿದು ಬಂದಿದೆ. ಕೊಲೆ ರಹಸ್ಯ ಬೇಧಿಸಲು ತಂಡ ರಚಿಸಲಾಗಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಅಷ್ಟೇ ಅಲ್ಲ, ಈ ರೈತರು ಕ್ರಿಕೆಟ್ ಕೂಡ ಆಡುತ್ತಾರೆ: Watch Video

ತಲೆಯನ್ನು ದೇವರಕೊಂಡ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕೂದಲು ಮತ್ತು ಚರ್ಮವನ್ನು ಡಿಎನ್‌ಎ ಪರೀಕ್ಷೆಗಾಗಿ ಹೈದರಾಬಾದ್‌ಗೆ ಕಳುಹಿಸಲಾಗಿದೆ.

ಹೈದರಾಬಾದ್(ತೆಲಂಗಾಣ): ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಗೊಲ್ಲಪಲ್ಲಿ ಗ್ರಾಮದಲ್ಲಿರುವ ಮಹಾಕಾಳಿ ದೇವಸ್ಥಾನದಲ್ಲಿರುವ ಮಹಾಕಾಳಿ ದೇವಿ ಮೂರ್ತಿಯ ಪಾದದಲ್ಲಿ ವ್ಯಕ್ತಿಯೊಬ್ಬನ ರುಂಡ ಪತ್ತೆಯಾಗಿದೆ.

ಪೊಲೀಸರ ಪ್ರಕಾರ, ಮೃತರಿಗೆ ಸುಮಾರು 35 ವರ್ಷ ವಯಸ್ಸಾಗಿರಬಹುದು. ನಿಧಿಗಾಗಿ ನಡೆಸುವ ನರ ಬಲಿ ಪ್ರಕರಣವಾಗಿರಬಹುದು ಎಂಬ ವದಂತಿಗಳು ಹರಡುತ್ತಿವೆ. ಆತನನ್ನು ಬೇರೆ ಸ್ಥಳದಲ್ಲಿ ಕೊಲೆಮಾಡಿರಬಹುದು, ಆದರೆ ಪೊಲೀಸರ ದಾರಿ ತಪ್ಪಿಸುವ ಸಲುವಾಗಿ ತಲೆಯನ್ನು ದೇವಿಯ ಪಾದದ ಬಳಿ ಇಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಲಾಗುತ್ತಿದೆ.

Severed head found at Goddess Mahankali temple in Telangana
ಮಹಾಕಾಳಿ ದೇವಿ ಮೂರ್ತಿಯ ಪಾದದಲ್ಲಿ ವ್ಯಕ್ತಿಯ ರುಂಡ ಪತ್ತೆ

ಘಟನಾ ಸ್ಥಳಕ್ಕೆ ಡಿಎಸ್ಪಿ ಆನಂದ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನನ್ನು ಗುರುತಿಸುವ ಸಲುವಾಗಿ ತಲೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಮೂಲಗಳ ಪ್ರಕಾರ ಮೃತರನ್ನು ಸೂರ್ಯಪೇಟ್ ಜಿಲ್ಲೆಯ ಸುನ್ಯಾಪಹಾಡ್ ಗ್ರಾಮದ ಜಹೇಂದರ್ ನಾಯಕ್ (30) ಎಂದು ಗುರುತಿಸಲಾಗಿದೆ.

ಮೃತ ಜಹೇಂದರ್ ನಾಯಕ್ ಮಾನಸಿಕ ಅಸ್ವಸ್ಥನಾಗಿದ್ದು, ಕಳೆದ ಐದೂವರೆ ವರ್ಷಗಳಿಂದ ಅಲೆದಾಡುತ್ತಿದ್ದ. ಕೆಲವು ವರ್ಷಗಳಿಂದ ರಂಗಾರೆಡ್ಡಿ ಜಿಲ್ಲೆಯ ಇಬ್ರಾಹಿಂಪಟ್ಟಣ ಬಳಿಯ ತುರ್ಕಯಾಂಜಲ್ ಎಂಬಲ್ಲಿನ ದೇವಸ್ಥಾನದಲ್ಲಿ ತಂಗಿದ್ದರು ಎಂದು ತಿಳಿದು ಬಂದಿದೆ. ಕೊಲೆ ರಹಸ್ಯ ಬೇಧಿಸಲು ತಂಡ ರಚಿಸಲಾಗಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಅಷ್ಟೇ ಅಲ್ಲ, ಈ ರೈತರು ಕ್ರಿಕೆಟ್ ಕೂಡ ಆಡುತ್ತಾರೆ: Watch Video

ತಲೆಯನ್ನು ದೇವರಕೊಂಡ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕೂದಲು ಮತ್ತು ಚರ್ಮವನ್ನು ಡಿಎನ್‌ಎ ಪರೀಕ್ಷೆಗಾಗಿ ಹೈದರಾಬಾದ್‌ಗೆ ಕಳುಹಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.