ETV Bharat / bharat

ರಸಗೊಬ್ಬರ ದರ ಇಳಿಕೆಗೆ ಒತ್ತಾಯಿಸಿ ಡಿವಿಎಸ್​ಗೆ ಪತ್ರ ಬರೆದ ಶರದ್​ ಪವಾರ್​

author img

By

Published : May 18, 2021, 5:18 PM IST

ಹೆಚ್ಚುತ್ತಿರುವ ಗೊಬ್ಬರದ ವೆಚ್ಚದಿಂದ ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚಿದ ರಸಗೊಬ್ಬರ ದರವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಶರದ್ ಪವಾರ್ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಪತ್ರ ಬರೆದಿದ್ದಾರೆ.

sharad pawar
sharad pawar

ಮುಂಬೈ: ಹೆಚ್ಚಿದ ರಸಗೊಬ್ಬರ ದರವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಪತ್ರ ಬರೆದಿದ್ದಾರೆ.

ಮಾನ್ಸೂನ್ ಆರಂಭದಿಂದಾಗಿ ರೈತರು ಭೂಮಿಯಲ್ಲಿ ಕೃಷಿ ಮಾಡಲು ಪ್ರಾರಂಭಿಸಿದ್ದಾರೆ. ಆದ್ದರಿಂದ, ಮಳೆ ಬಂದ ಕೂಡಲೇ ಬಿತ್ತನೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಹೆಚ್ಚುತ್ತಿರುವ ಗೊಬ್ಬರದ ವೆಚ್ಚದಿಂದ ಕೊರೊನಾದಿಂದ ಬಳಲುತ್ತಿರುವ ರೈತರಿಗೆ ತೊಂದರೆಯಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆ ರಸಗೊಬ್ಬರಗಳ ಬೆಲೆ ಶೇ. 15 ರಿಂದ 17 ರಷ್ಟು ಏರಿಕೆಯಾಗಿದೆ. ಇದು ರೈತರಿಗೆ ನೇರ ಹೊಡೆತ. ಆದ್ದರಿಂದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದ ಗೌಡ ಅವರು ಈ ವಿಷಯದ ಬಗ್ಗೆ ಗಂಭೀರ ಗಮನ ಹರಿಸಬೇಕು ಮತ್ತು ರಸಗೊಬ್ಬರಗಳ ಬೆಲೆಯನ್ನು ಕಡಿಮೆ ಮಾಡಲು ಪರಿಗಣಿಸಬೇಕು ಎಂದು ಶರದ್ ಪವಾರ್ ಒತ್ತಾಯಿಸಿದ್ದಾರೆ.

ಮುಂಬೈ: ಹೆಚ್ಚಿದ ರಸಗೊಬ್ಬರ ದರವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಪತ್ರ ಬರೆದಿದ್ದಾರೆ.

ಮಾನ್ಸೂನ್ ಆರಂಭದಿಂದಾಗಿ ರೈತರು ಭೂಮಿಯಲ್ಲಿ ಕೃಷಿ ಮಾಡಲು ಪ್ರಾರಂಭಿಸಿದ್ದಾರೆ. ಆದ್ದರಿಂದ, ಮಳೆ ಬಂದ ಕೂಡಲೇ ಬಿತ್ತನೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಹೆಚ್ಚುತ್ತಿರುವ ಗೊಬ್ಬರದ ವೆಚ್ಚದಿಂದ ಕೊರೊನಾದಿಂದ ಬಳಲುತ್ತಿರುವ ರೈತರಿಗೆ ತೊಂದರೆಯಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆ ರಸಗೊಬ್ಬರಗಳ ಬೆಲೆ ಶೇ. 15 ರಿಂದ 17 ರಷ್ಟು ಏರಿಕೆಯಾಗಿದೆ. ಇದು ರೈತರಿಗೆ ನೇರ ಹೊಡೆತ. ಆದ್ದರಿಂದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದ ಗೌಡ ಅವರು ಈ ವಿಷಯದ ಬಗ್ಗೆ ಗಂಭೀರ ಗಮನ ಹರಿಸಬೇಕು ಮತ್ತು ರಸಗೊಬ್ಬರಗಳ ಬೆಲೆಯನ್ನು ಕಡಿಮೆ ಮಾಡಲು ಪರಿಗಣಿಸಬೇಕು ಎಂದು ಶರದ್ ಪವಾರ್ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.