ಬೆಂಗಳೂರು: ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
![Group Captain Varun Singh](https://etvbharatimages.akamaized.net/etvbharat/prod-images/13912419_iaf.jpg)
ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ವರುಣ್ ಸಿಂಗ್ ಗಡಿ ನಿಯಂತ್ರಣ ರೇಖೆ ಬಳಿ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದ್ದರು. ಅವರ ಈ ಅಸಾಧಾರಣ ಸಾಹಸವನ್ನು ಗುರುತಿಸಿದ್ದ ಕೇಂದ್ರ ಸರ್ಕಾರ ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಿತ್ತು.
![Shaurya Chakra](https://etvbharatimages.akamaized.net/etvbharat/prod-images/13912419_chaurya.jpg)
ಕಳೆದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ವರುಣ್ ಸಿಂಗ್ ಅವರಿಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದ್ದರು.
![varun singh family](https://etvbharatimages.akamaized.net/etvbharat/prod-images/13912419_chaurydda.jpg)
ಇದನ್ನೂ ಓದಿ: ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಿಂಗ್ ಹುತಾತ್ಮ: ಪ್ರಧಾನಿ ಮೋದಿ ಸಂತಾಪ