ETV Bharat / bharat

Man Urinating: ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

author img

By

Published : Jul 4, 2023, 7:51 PM IST

Man Urinating on Tribal Man's face:ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ವ್ಯಕ್ತಿಯೊಬ್ಬ ವಿಕೃತಿ ಮೆರೆದಿದ್ದಾನೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Shocking video shows man urinating on tribal mans face in Madhya Pradesh
ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

ಭೋಪಾಲ್ (ಮಧ್ಯಪ್ರದೇಶ): ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗೂ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿದೆ. ಆರೋಪಿಯು ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಹಾಗೂ ಆಮ್​ ಆದ್ಮಿ ಪಕ್ಷಗಳು ಆರೋಪ ಮಾಡಿವೆ.

  • मेरे संज्ञान में सीधी जिले का एक वायरल वीडियो आया है...

    मैंने प्रशासन को निर्देश दिए हैं कि अपराधी को गिरफ्तार कर कड़ी से कड़ी कार्रवाई कर एनएसए भी लगाया जाए।

    — Shivraj Singh Chouhan (@ChouhanShivraj) July 4, 2023 " class="align-text-top noRightClick twitterSection" data=" ">

ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ’’ಆದಿವಾಸಿಗಳ ಹಿತಾಸಕ್ತಿಗಳ ಬಗ್ಗೆ ಪೊಳ್ಳು ಮಾತನಾಡುವ ಬಿಜೆಪಿ ನಾಯಕನೊಬ್ಬ ಬುಡಕಟ್ಟು ಬಡವರ ಮೇಲೆ ಈ ರೀತಿ ವರ್ತಿಸಿದ್ದಾನೆ. ಇದು ಅತ್ಯಂತ ಖಂಡನೀಯ ಕೃತ್ಯ ಎಂದು ಕಿಡಿಕಾರಿದ್ದಾರೆ‘‘. ಅಲ್ಲದೇ, ತಮ್ಮ ಟ್ವೀಟ್ ​ಅನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಟ್ಯಾಗ್ ಮಾಡಿ, ’’ಇದು ನಿಮ್ಮ ಬುಡಕಟ್ಟು ಪ್ರೀತಿಯೇ?. ಇದನ್ನೇ ಜಂಗಲ್ ರಾಜ್ ಎಂದು ಕರೆಯುವುದು. ಬಿಜೆಪಿ ನಾಯಕನನ್ನು ಏಕೆ ಬಂಧಿಸಲಿಲ್ಲ‘‘ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ವಿಮಾನಯಾನದಲ್ಲಿ ಮತ್ತೊಂದು ದುರ್ವರ್ತನೆ!

ಪ್ರಾಥಮಿಕ ಮಾಹಿತಿ ಪ್ರಕಾರ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೂತ್ರ ವಿಸರ್ಜನೆ ಮಾಡಿ ವಿಕೃತಿಯ ಮೆರೆದ ಆರೋಪಿಯ ಹೆಸರನ್ನು ಪ್ರವೇಶ್ ಶುಕ್ಲಾ ಎಂದು ಹೇಳಲಾಗುತ್ತಿದೆ. ಈತ ಸಿಧಿ ಜಿಲ್ಲೆಯ ಶಾಸಕ ಕೇದಾರ್ ನಾಥ್ ಶುಕ್ಲಾ ಅವರೊಂದಿಗೆ ಗುರುತಿಸಿಕೊಳ್ಳುತ್ತಾನೆ. ಜೊತೆಗೆ ಇತರ ಬಿಜೆಪಿಯ ಹಿರಿಯ ನಾಯಕರೊಂದಿಗೆ ಆರೋಪಿ ಕಾಣಿಸಿಕೊಂಡಿರುವ ಫೋಟೋಗಳ ಸಹ ಬಹಿರಂಗವಾಗಿವೆ ಎಂದು ವರದಿಯಾಗಿವೆ.

ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಅವರೇ ತಮ್ಮ ಮತ್ತೊಂದು ಟ್ವೀಟ್‌ನಲ್ಲಿ ಆರೋಪಿ ಪ್ರವೇಶ್ ಶುಕ್ಲಾ ಕೆಲವು ಪ್ರಮುಖ ಬಿಜೆಪಿ ನಾಯಕರೊಂದಿಗೆ ಇರುವ ಅನೇಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಬಿಜೆಪಿ ನಾಯಕನು ಬಿಜೆಪಿಯ ಹಿರಿಯ ನಾಯಕರೊಂದಿಗಿನ ಚಿತ್ರಗಳಲ್ಲಿದ್ದಾರೆ ಎಂದು ಹಫೀಜ್ ಬರೆದುಕೊಂಡಿದ್ದಾರೆ.

ದೆಹಲಿಯ ಆಮ್​ ಆದ್ಮಿ ಪಕ್ಷದ ಶಾಸಕ ನರೇಶ್ ಬಲ್ಯಾನ್ ಕೂಡ ಟ್ವಿಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಮಧ್ಯಪ್ರದೇಶದ್ದು ಎನ್ನಲಾಗಿದ್ದು, ಈ ವ್ಯಕ್ತಿ ಬಿಜೆಪಿ ಶಾಸಕರ ನೇರ ಪ್ರತಿನಿಧಿ ಎಂಬ ಮಾಹಿತಿ ಬರುತ್ತಿದೆ. ಗೌರವಾನ್ವಿತ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರೇ ’’ಈ ರಾಕ್ಷಸ ಆ ಬಡವನ ಮುಖದ ಮೇಲೆ ಈ ರೀತಿ ಮಾಡುತ್ತಿಲ್ಲ. ಇಡೀ ನಿಮ್ಮ ವ್ಯವಸ್ಥೆಯ ಮೇಲೆಯೇ ಮಾಡಿದ್ದಾನೆ. ಆ ಬಡವನಿಗೆ ಯಾರೂ ತೊಂದರೆ ಕೊಡದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ‘‘ ಎಂದು ಬಾಲ್ಯಾನ್ ಟ್ವೀಟ್ ಮಾಡಿದ್ದಾರೆ.

ಬಂಧನಕ್ಕೆ ಸಿಎಂ ಸೂಚನೆ: ಮತ್ತೊಂದೆಡೆ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್​ ಮಾಡಿ, ಸಿಧಿ ಜಿಲ್ಲೆಯ ವೈರಲ್ ವಿಡಿಯೋ ನನ್ನ ಗಮನಕ್ಕೆ ಬಂದಿದೆ.. ತಪ್ಪಿತಸ್ಥನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಎನ್‌ಎಸ್‌ಎ (ರಾಷ್ಟ್ರೀಯ ಭದ್ರತಾ ಕಾಯ್ದೆ) ವಿಧಿಸುವಂತೆ ಆಡಳಿತಕ್ಕೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದ ಪ್ರಯಾಣಿಕರ ಮಧ್ಯೆಯೇ ಮಲ, ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯ ಬಂಧನ

ಭೋಪಾಲ್ (ಮಧ್ಯಪ್ರದೇಶ): ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗೂ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿದೆ. ಆರೋಪಿಯು ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಹಾಗೂ ಆಮ್​ ಆದ್ಮಿ ಪಕ್ಷಗಳು ಆರೋಪ ಮಾಡಿವೆ.

  • मेरे संज्ञान में सीधी जिले का एक वायरल वीडियो आया है...

    मैंने प्रशासन को निर्देश दिए हैं कि अपराधी को गिरफ्तार कर कड़ी से कड़ी कार्रवाई कर एनएसए भी लगाया जाए।

    — Shivraj Singh Chouhan (@ChouhanShivraj) July 4, 2023 " class="align-text-top noRightClick twitterSection" data=" ">

ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ’’ಆದಿವಾಸಿಗಳ ಹಿತಾಸಕ್ತಿಗಳ ಬಗ್ಗೆ ಪೊಳ್ಳು ಮಾತನಾಡುವ ಬಿಜೆಪಿ ನಾಯಕನೊಬ್ಬ ಬುಡಕಟ್ಟು ಬಡವರ ಮೇಲೆ ಈ ರೀತಿ ವರ್ತಿಸಿದ್ದಾನೆ. ಇದು ಅತ್ಯಂತ ಖಂಡನೀಯ ಕೃತ್ಯ ಎಂದು ಕಿಡಿಕಾರಿದ್ದಾರೆ‘‘. ಅಲ್ಲದೇ, ತಮ್ಮ ಟ್ವೀಟ್ ​ಅನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಟ್ಯಾಗ್ ಮಾಡಿ, ’’ಇದು ನಿಮ್ಮ ಬುಡಕಟ್ಟು ಪ್ರೀತಿಯೇ?. ಇದನ್ನೇ ಜಂಗಲ್ ರಾಜ್ ಎಂದು ಕರೆಯುವುದು. ಬಿಜೆಪಿ ನಾಯಕನನ್ನು ಏಕೆ ಬಂಧಿಸಲಿಲ್ಲ‘‘ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ವಿಮಾನಯಾನದಲ್ಲಿ ಮತ್ತೊಂದು ದುರ್ವರ್ತನೆ!

ಪ್ರಾಥಮಿಕ ಮಾಹಿತಿ ಪ್ರಕಾರ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೂತ್ರ ವಿಸರ್ಜನೆ ಮಾಡಿ ವಿಕೃತಿಯ ಮೆರೆದ ಆರೋಪಿಯ ಹೆಸರನ್ನು ಪ್ರವೇಶ್ ಶುಕ್ಲಾ ಎಂದು ಹೇಳಲಾಗುತ್ತಿದೆ. ಈತ ಸಿಧಿ ಜಿಲ್ಲೆಯ ಶಾಸಕ ಕೇದಾರ್ ನಾಥ್ ಶುಕ್ಲಾ ಅವರೊಂದಿಗೆ ಗುರುತಿಸಿಕೊಳ್ಳುತ್ತಾನೆ. ಜೊತೆಗೆ ಇತರ ಬಿಜೆಪಿಯ ಹಿರಿಯ ನಾಯಕರೊಂದಿಗೆ ಆರೋಪಿ ಕಾಣಿಸಿಕೊಂಡಿರುವ ಫೋಟೋಗಳ ಸಹ ಬಹಿರಂಗವಾಗಿವೆ ಎಂದು ವರದಿಯಾಗಿವೆ.

ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಅವರೇ ತಮ್ಮ ಮತ್ತೊಂದು ಟ್ವೀಟ್‌ನಲ್ಲಿ ಆರೋಪಿ ಪ್ರವೇಶ್ ಶುಕ್ಲಾ ಕೆಲವು ಪ್ರಮುಖ ಬಿಜೆಪಿ ನಾಯಕರೊಂದಿಗೆ ಇರುವ ಅನೇಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಬಿಜೆಪಿ ನಾಯಕನು ಬಿಜೆಪಿಯ ಹಿರಿಯ ನಾಯಕರೊಂದಿಗಿನ ಚಿತ್ರಗಳಲ್ಲಿದ್ದಾರೆ ಎಂದು ಹಫೀಜ್ ಬರೆದುಕೊಂಡಿದ್ದಾರೆ.

ದೆಹಲಿಯ ಆಮ್​ ಆದ್ಮಿ ಪಕ್ಷದ ಶಾಸಕ ನರೇಶ್ ಬಲ್ಯಾನ್ ಕೂಡ ಟ್ವಿಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಮಧ್ಯಪ್ರದೇಶದ್ದು ಎನ್ನಲಾಗಿದ್ದು, ಈ ವ್ಯಕ್ತಿ ಬಿಜೆಪಿ ಶಾಸಕರ ನೇರ ಪ್ರತಿನಿಧಿ ಎಂಬ ಮಾಹಿತಿ ಬರುತ್ತಿದೆ. ಗೌರವಾನ್ವಿತ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರೇ ’’ಈ ರಾಕ್ಷಸ ಆ ಬಡವನ ಮುಖದ ಮೇಲೆ ಈ ರೀತಿ ಮಾಡುತ್ತಿಲ್ಲ. ಇಡೀ ನಿಮ್ಮ ವ್ಯವಸ್ಥೆಯ ಮೇಲೆಯೇ ಮಾಡಿದ್ದಾನೆ. ಆ ಬಡವನಿಗೆ ಯಾರೂ ತೊಂದರೆ ಕೊಡದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ‘‘ ಎಂದು ಬಾಲ್ಯಾನ್ ಟ್ವೀಟ್ ಮಾಡಿದ್ದಾರೆ.

ಬಂಧನಕ್ಕೆ ಸಿಎಂ ಸೂಚನೆ: ಮತ್ತೊಂದೆಡೆ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್​ ಮಾಡಿ, ಸಿಧಿ ಜಿಲ್ಲೆಯ ವೈರಲ್ ವಿಡಿಯೋ ನನ್ನ ಗಮನಕ್ಕೆ ಬಂದಿದೆ.. ತಪ್ಪಿತಸ್ಥನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಎನ್‌ಎಸ್‌ಎ (ರಾಷ್ಟ್ರೀಯ ಭದ್ರತಾ ಕಾಯ್ದೆ) ವಿಧಿಸುವಂತೆ ಆಡಳಿತಕ್ಕೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದ ಪ್ರಯಾಣಿಕರ ಮಧ್ಯೆಯೇ ಮಲ, ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.