ETV Bharat / bharat

ಬಸ್​ ಕಾಲುವೆಗೆ ಬಿದ್ದು ಪ್ರಯಾಣಿಕರ ಸಾವು ಪ್ರಕರಣ: ಒಂದೇ ಚಿತೆಯಲ್ಲಿ ಸತಿ-ಪತಿ ಅಂತ್ಯಕ್ರಿಯೆ!

author img

By

Published : Feb 18, 2021, 3:07 PM IST

ಬಸ್​ವೊಂದು ಕಾಲುವೆಗೆ ಮುಗುಚಿ ಬಿದ್ದು 51 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ಇದೀಗ ಘಟನೆಯಲ್ಲಿ ಸಾವನ್ನಪ್ಪಿರುವ ನವ ಜೋಡಿಯ ಅಂತ್ಯಕ್ರಿಯೆ ಒಟ್ಟಿಗೆ ನಡೆಸಲಾಗಿದೆ.

Sidhi bus accident
Sidhi bus accident

ಸಿಧಿ(ಮಧ್ಯಪ್ರದೇಶ): ಬಸ್​ವೊಂದು ಕಾಲುವೆಗೆ ಉರುಳಿ ಬಿದ್ದು 51 ಜನರು ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ಕಳೆದ ಮಂಗಳವಾರ ನಡೆದಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ದಂಪತಿಗಳಿಬ್ಬರ ಅಂತ್ಯಕ್ರಿಯನ್ನ ಒಂದೇ ಚಿತೆಯಲ್ಲಿ ಒಟ್ಟಿಗೆ ನಡೆಸಲಾಯಿತು.

ಒಂದೇ ಚಿತೆಯಲ್ಲಿ ಸತಿ-ಪತಿ ಅಂತ್ಯಕ್ರಿಯೆ

ಸಿಧಿ ಅಪಘಾತದಲ್ಲಿ ದೇವರಿ ಗ್ರಾಮದ ರಾಹುಲ್ ಹಾಗೂ ಆತನ ಪತ್ನಿ ತಪಸ್ವಿ ಸಾವನ್ನಪ್ಪಿದ್ದರು. ಇವರಿಬ್ಬರ ಅಂತ್ಯಕ್ರಿಯೆಯನ್ನ ಇಂದು ಗ್ರಾಮಸ್ಥರೆಲ್ಲರೂ ಸೇರಿ ಒಂದೇ ಚಿತೆಯಲ್ಲಿ ನಡೆಸಲಾಯಿತು. ಈ ವೇಳೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಓದಿ: ತಮ್ಮ ವಿರುದ್ಧದ ದೂರನ್ನು ತಪ್ಪಾಗಿ ಅನುವಾದಿಸಿದ ಪುದುಚೆರಿ ಸಿಎಂ!

ರಾಹುಲ್​ ತನ್ನ ಪತ್ನಿ ಜತೆ ಪರೀಕ್ಷೆ ಬರೆಯುವ ಉದ್ದೇಶದಿಂದ ಸತಾರಾಗೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದ ವೇಳೆ ಈ ದುರ್ಘಟನೆಯಲ್ಲಿ ಸಾವಿಗೀಡಾಗಿದ್ದರು. ಕಳೆದ ಎಂಟು ತಿಂಗಳ ಹಿಂದೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. 25 ವರ್ಷದ ರಾಹುಲ್ ಹಾಗೂ ಆತನ ಪತ್ನಿ ತಪಸ್ವಿ ಕಮಲಾ ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ​ ನಿನ್ನೆ ತಡರಾತ್ರಿ ಇಬ್ಬರ ಮೃತದೇಹ ಗ್ರಾಮಕ್ಕೆ ಬಂದಿದ್ದು, ಇಂದು ಅಂತ್ಯಕ್ರಿಯೆ ನಡೆಸಲಾಗಿದೆ.

ಸಿಧಿ(ಮಧ್ಯಪ್ರದೇಶ): ಬಸ್​ವೊಂದು ಕಾಲುವೆಗೆ ಉರುಳಿ ಬಿದ್ದು 51 ಜನರು ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ಕಳೆದ ಮಂಗಳವಾರ ನಡೆದಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ದಂಪತಿಗಳಿಬ್ಬರ ಅಂತ್ಯಕ್ರಿಯನ್ನ ಒಂದೇ ಚಿತೆಯಲ್ಲಿ ಒಟ್ಟಿಗೆ ನಡೆಸಲಾಯಿತು.

ಒಂದೇ ಚಿತೆಯಲ್ಲಿ ಸತಿ-ಪತಿ ಅಂತ್ಯಕ್ರಿಯೆ

ಸಿಧಿ ಅಪಘಾತದಲ್ಲಿ ದೇವರಿ ಗ್ರಾಮದ ರಾಹುಲ್ ಹಾಗೂ ಆತನ ಪತ್ನಿ ತಪಸ್ವಿ ಸಾವನ್ನಪ್ಪಿದ್ದರು. ಇವರಿಬ್ಬರ ಅಂತ್ಯಕ್ರಿಯೆಯನ್ನ ಇಂದು ಗ್ರಾಮಸ್ಥರೆಲ್ಲರೂ ಸೇರಿ ಒಂದೇ ಚಿತೆಯಲ್ಲಿ ನಡೆಸಲಾಯಿತು. ಈ ವೇಳೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಓದಿ: ತಮ್ಮ ವಿರುದ್ಧದ ದೂರನ್ನು ತಪ್ಪಾಗಿ ಅನುವಾದಿಸಿದ ಪುದುಚೆರಿ ಸಿಎಂ!

ರಾಹುಲ್​ ತನ್ನ ಪತ್ನಿ ಜತೆ ಪರೀಕ್ಷೆ ಬರೆಯುವ ಉದ್ದೇಶದಿಂದ ಸತಾರಾಗೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದ ವೇಳೆ ಈ ದುರ್ಘಟನೆಯಲ್ಲಿ ಸಾವಿಗೀಡಾಗಿದ್ದರು. ಕಳೆದ ಎಂಟು ತಿಂಗಳ ಹಿಂದೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. 25 ವರ್ಷದ ರಾಹುಲ್ ಹಾಗೂ ಆತನ ಪತ್ನಿ ತಪಸ್ವಿ ಕಮಲಾ ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ​ ನಿನ್ನೆ ತಡರಾತ್ರಿ ಇಬ್ಬರ ಮೃತದೇಹ ಗ್ರಾಮಕ್ಕೆ ಬಂದಿದ್ದು, ಇಂದು ಅಂತ್ಯಕ್ರಿಯೆ ನಡೆಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.