ETV Bharat / bharat

ಬೈಕ್​ ಸವಾರನ ಪ್ರಾಣ ಉಳಿಸಲು ಹೋಗಿ ಕಾರು ಅಪಘಾತ : ಆರು ಮಂದಿ ದುರ್ಮರಣ

author img

By

Published : Jun 25, 2021, 7:07 PM IST

ಮೃತರನ್ನ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ಸಹ ದಾಖಲು ಮಾಡಿಕೊಂಡಿದ್ದಾರೆ..

road accident balrampur
road accident balrampur

ಬಲರಾಂಪುರ್​(ಉತ್ತರ ಪ್ರದೇಶ): ದೇವರ ದರ್ಶನಕ್ಕೆಂದು ತೆರಳುತ್ತಿದ್ದ ಕುಟುಂಬವೊಂದು ಅಪಘಾತಕ್ಕೀಡಾಗಿರುವ ಪರಿಣಾಮ ಸ್ಥಳದಲ್ಲೇ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಉತ್ತರಪ್ರದೇಶದ ಬಲರಾಂಪುರ್​​ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಬಲರಾಂಪುರ್​ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730ರ ತುಳಸಿಪುರ ರಸ್ತೆ ಬಳಿ ಈ ದುರ್ಘಟನೆ ನಡೆದಿದ್ದು, ಇವರೆಲ್ಲರೂ ದೇವಸ್ಥಾನವೊಂದಕ್ಕೆ ಭೇಟಿ ನೀಡಲು ತೆರಳುತ್ತಿದ್ದರು. ಬೈಕ್​ ಸವಾರ ಪ್ರಾಣ ಉಳಿಸುವ ಉದ್ದೇಶದಿಂದ ಕಾರಿನಲ್ಲಿದ್ದ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸತ್ತವರಲ್ಲಿ ಮೂವರು ಮಕ್ಕಳು, ಇಬ್ಬರು ಯುವಕರು ಹಾಗೂ ಓರ್ವ ಮಹಿಳೆ ಸೇರಿದ್ದಾರೆ.

ದೇವಸ್ಥಾನಕ್ಕೆ ತೆರಳುತ್ತಿದ್ದ ಆರು ಮಂದಿ ಸಾವು

ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಬೈಕ್​ ಸವಾರನೋರ್ವ ಡಿಕ್ಕಿ ಹೊಡೆಯಲು ಮುಂದಾಗಿದ್ದ ವೇಳೆ ಅದನ್ನ ತಪ್ಪಿಸುವ ಉದ್ದೇಶದಿಂದ ಕಾರ್​ ಡ್ರೈವರ್​​ ಬ್ರೇಕ್​ ಹಾಕಿದ್ದಾನೆ. ತಕ್ಷಣವೇ ಕಾರು ಪಕ್ಕದ ಕೆರೆಗೆ ಬಿದ್ದಿರುವ ಕಾರಣ ಎಲ್ಲರೂ ಸಾವನ್ನಪ್ಪಿದ್ದಾರೆ. ಉಳಿದಂತೆ ಬೈಕ್​ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದಿದ್ದಾರೆ.

ಇದನ್ನೂ ಓದಿರಿ: ನಂದೂರ್​ಬಾರ್​ನಲ್ಲಿ ಮೇಕೆ ಕೊಂದ ಹೆಬ್ಬಾವು: Video Viral

ಮೃತರನ್ನ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ಸಹ ದಾಖಲು ಮಾಡಿಕೊಂಡಿದ್ದಾರೆ.

ಬಲರಾಂಪುರ್​(ಉತ್ತರ ಪ್ರದೇಶ): ದೇವರ ದರ್ಶನಕ್ಕೆಂದು ತೆರಳುತ್ತಿದ್ದ ಕುಟುಂಬವೊಂದು ಅಪಘಾತಕ್ಕೀಡಾಗಿರುವ ಪರಿಣಾಮ ಸ್ಥಳದಲ್ಲೇ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಉತ್ತರಪ್ರದೇಶದ ಬಲರಾಂಪುರ್​​ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಬಲರಾಂಪುರ್​ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730ರ ತುಳಸಿಪುರ ರಸ್ತೆ ಬಳಿ ಈ ದುರ್ಘಟನೆ ನಡೆದಿದ್ದು, ಇವರೆಲ್ಲರೂ ದೇವಸ್ಥಾನವೊಂದಕ್ಕೆ ಭೇಟಿ ನೀಡಲು ತೆರಳುತ್ತಿದ್ದರು. ಬೈಕ್​ ಸವಾರ ಪ್ರಾಣ ಉಳಿಸುವ ಉದ್ದೇಶದಿಂದ ಕಾರಿನಲ್ಲಿದ್ದ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸತ್ತವರಲ್ಲಿ ಮೂವರು ಮಕ್ಕಳು, ಇಬ್ಬರು ಯುವಕರು ಹಾಗೂ ಓರ್ವ ಮಹಿಳೆ ಸೇರಿದ್ದಾರೆ.

ದೇವಸ್ಥಾನಕ್ಕೆ ತೆರಳುತ್ತಿದ್ದ ಆರು ಮಂದಿ ಸಾವು

ಇಂದು ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಬೈಕ್​ ಸವಾರನೋರ್ವ ಡಿಕ್ಕಿ ಹೊಡೆಯಲು ಮುಂದಾಗಿದ್ದ ವೇಳೆ ಅದನ್ನ ತಪ್ಪಿಸುವ ಉದ್ದೇಶದಿಂದ ಕಾರ್​ ಡ್ರೈವರ್​​ ಬ್ರೇಕ್​ ಹಾಕಿದ್ದಾನೆ. ತಕ್ಷಣವೇ ಕಾರು ಪಕ್ಕದ ಕೆರೆಗೆ ಬಿದ್ದಿರುವ ಕಾರಣ ಎಲ್ಲರೂ ಸಾವನ್ನಪ್ಪಿದ್ದಾರೆ. ಉಳಿದಂತೆ ಬೈಕ್​ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದಿದ್ದಾರೆ.

ಇದನ್ನೂ ಓದಿರಿ: ನಂದೂರ್​ಬಾರ್​ನಲ್ಲಿ ಮೇಕೆ ಕೊಂದ ಹೆಬ್ಬಾವು: Video Viral

ಮೃತರನ್ನ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ಸಹ ದಾಖಲು ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.