ETV Bharat / bharat

ಶತಮಾನ ಪೂರೈಸಿ ಇಹಲೋಕ ತ್ಯಜಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಭಾಟಿಯಾ - two-time Governor R.L. Bhatia

ಜುಲೈ 3ರಂದು 101ನೇ ವರ್ಷಕ್ಕೆ ಕಾಲಿಡಬೇಕಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಭಾಟಿಯಾ ಅವರು ಇಂದು ಅಮೃತಸರದ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶತಮಾನ ಪೂರೈಸಿ ಇಹಲೋಕ ತ್ಯಜಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಭಾಟಿಯಾ
author img

By

Published : May 15, 2021, 12:07 PM IST

ಚಂಡೀಗಢ (ಪಂಜಾಬ್​): ಆರು ಬಾರಿ ಕಾಂಗ್ರೆಸ್ ಸಂಸದರಾಗಿ, ಕೇಂದ್ರ ಸಚಿವರಾಗಿ ಮತ್ತು ಎರಡು ಬಾರಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಆರ್.ಎಲ್.ಭಾಟಿಯಾ ಅವರು ತಮ್ಮ 100ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಜುಲೈ 3ರಂದು ಇವರು 101ನೇ ವರ್ಷಕ್ಕೆ ಕಾಲಿಡಲಿದ್ದರು.

ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಭಾಟಿಯಾ ಅವರನ್ನು ಪಂಜಾಬ್​ನ ಅಮೃತಸರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಭಾಟಿಯಾರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹೋದರ ಬಲಿ

ಭಾಟಿಯಾ ಅವರು 1972ರಿಂದ ಆರು ಬಾರಿ ಅಮೃತಸರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿ, ಕೇರಳ ಹಾಗೂ ಬಿಹಾರ ರಾಜ್ಯಗಳ ಗವರ್ನರ್​ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಸಾವಿಗೆ ಕಾಂಗ್ರೆಸ್​ ನಾಯಕರು ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಚಂಡೀಗಢ (ಪಂಜಾಬ್​): ಆರು ಬಾರಿ ಕಾಂಗ್ರೆಸ್ ಸಂಸದರಾಗಿ, ಕೇಂದ್ರ ಸಚಿವರಾಗಿ ಮತ್ತು ಎರಡು ಬಾರಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಆರ್.ಎಲ್.ಭಾಟಿಯಾ ಅವರು ತಮ್ಮ 100ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಜುಲೈ 3ರಂದು ಇವರು 101ನೇ ವರ್ಷಕ್ಕೆ ಕಾಲಿಡಲಿದ್ದರು.

ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಭಾಟಿಯಾ ಅವರನ್ನು ಪಂಜಾಬ್​ನ ಅಮೃತಸರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಭಾಟಿಯಾರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹೋದರ ಬಲಿ

ಭಾಟಿಯಾ ಅವರು 1972ರಿಂದ ಆರು ಬಾರಿ ಅಮೃತಸರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿ, ಕೇರಳ ಹಾಗೂ ಬಿಹಾರ ರಾಜ್ಯಗಳ ಗವರ್ನರ್​ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಸಾವಿಗೆ ಕಾಂಗ್ರೆಸ್​ ನಾಯಕರು ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.