ETV Bharat / bharat

ಶತಮಾನ ಪೂರೈಸಿ ಇಹಲೋಕ ತ್ಯಜಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಭಾಟಿಯಾ

ಜುಲೈ 3ರಂದು 101ನೇ ವರ್ಷಕ್ಕೆ ಕಾಲಿಡಬೇಕಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಭಾಟಿಯಾ ಅವರು ಇಂದು ಅಮೃತಸರದ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

author img

By

Published : May 15, 2021, 12:07 PM IST

ಶತಮಾನ ಪೂರೈಸಿ ಇಹಲೋಕ ತ್ಯಜಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಭಾಟಿಯಾ

ಚಂಡೀಗಢ (ಪಂಜಾಬ್​): ಆರು ಬಾರಿ ಕಾಂಗ್ರೆಸ್ ಸಂಸದರಾಗಿ, ಕೇಂದ್ರ ಸಚಿವರಾಗಿ ಮತ್ತು ಎರಡು ಬಾರಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಆರ್.ಎಲ್.ಭಾಟಿಯಾ ಅವರು ತಮ್ಮ 100ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಜುಲೈ 3ರಂದು ಇವರು 101ನೇ ವರ್ಷಕ್ಕೆ ಕಾಲಿಡಲಿದ್ದರು.

ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಭಾಟಿಯಾ ಅವರನ್ನು ಪಂಜಾಬ್​ನ ಅಮೃತಸರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಭಾಟಿಯಾರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹೋದರ ಬಲಿ

ಭಾಟಿಯಾ ಅವರು 1972ರಿಂದ ಆರು ಬಾರಿ ಅಮೃತಸರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿ, ಕೇರಳ ಹಾಗೂ ಬಿಹಾರ ರಾಜ್ಯಗಳ ಗವರ್ನರ್​ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಸಾವಿಗೆ ಕಾಂಗ್ರೆಸ್​ ನಾಯಕರು ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಚಂಡೀಗಢ (ಪಂಜಾಬ್​): ಆರು ಬಾರಿ ಕಾಂಗ್ರೆಸ್ ಸಂಸದರಾಗಿ, ಕೇಂದ್ರ ಸಚಿವರಾಗಿ ಮತ್ತು ಎರಡು ಬಾರಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಆರ್.ಎಲ್.ಭಾಟಿಯಾ ಅವರು ತಮ್ಮ 100ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಜುಲೈ 3ರಂದು ಇವರು 101ನೇ ವರ್ಷಕ್ಕೆ ಕಾಲಿಡಲಿದ್ದರು.

ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಭಾಟಿಯಾ ಅವರನ್ನು ಪಂಜಾಬ್​ನ ಅಮೃತಸರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಭಾಟಿಯಾರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹೋದರ ಬಲಿ

ಭಾಟಿಯಾ ಅವರು 1972ರಿಂದ ಆರು ಬಾರಿ ಅಮೃತಸರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿ, ಕೇರಳ ಹಾಗೂ ಬಿಹಾರ ರಾಜ್ಯಗಳ ಗವರ್ನರ್​ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಸಾವಿಗೆ ಕಾಂಗ್ರೆಸ್​ ನಾಯಕರು ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.