ETV Bharat / bharat

ಕಾಂಗ್ರೆಸ್ ಲೋಕಸಭಾ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

author img

By

Published : May 6, 2021, 4:14 PM IST

ಕೆಲವು ದಿನಗಳ ಹಿಂದೆ ಸೋನಿಯಾ ಗಾಂಧಿ, ರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರವಾದ ಕಳವಳ ವ್ಯಕ್ತಪಡಿದ್ದರು.

Sonia Gandhi to discuss Covid situation with Lok sabha MP's
ಕಾಂಗ್ರೆಸ್ ಪಕ್ಷದ ಲೋಕಸಭಾ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಏರಿಕೆ ಮತ್ತು ನಿಯಂತ್ರಣ ಕುರಿತಂತೆ ಚರ್ಚೆ ನಡೆಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ತಮ್ಮ ಪಕ್ಷದ ಲೋಕಸಭಾ ಸಂಸದರ ಸಭೆ ಕರೆದಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲಾಗುತ್ತದೆ. ಈ ಸಭೆ ವಿಡಿಯೋ ಕಾನ್ಫರೆನ್ಸ್​​ ಮೂಲಕ ನಡೆಯಲಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ಈಟಿವಿ ಭಾರತ್​ಗೆ ಮಾಹಿತಿ ನೀಡಿದ್ದಾರೆ.

ಕಳೆದ ಶನಿವಾರ ಸೋನಿಯಾ ಗಾಂಧಿ, ರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರವಾದ ಕಳವಳ ವ್ಯಕ್ತಪಡಿಸಿದ್ದರು. ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿ, ಈ ಸಾಂಕ್ರಾಮಿಕ ರೋಗವನ್ನು ತಡೆಯಲು ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಗು ಉಳಿಸಲು 72 ದಿನದಲ್ಲಿ 16 ಕೋಟಿ ಸಂಗ್ರಹಿಸಿದ ದಂಪತಿ.!

ಕೋವಿಡ್ ಲಾಕ್​​ಡೌನ್​ನಿಂದಾಗಿ ನಾಗರಿಕರಿಗೆ ತೊಂದರೆಗಳಾಗುತ್ತಿದ್ದು, ಲಸಿಕೆಗಳನ್ನು ನೀಡುವ ಜೊತೆಗೆ ಬಡವರ ಬ್ಯಾಂಕ್ ಖಾತೆಗಳಿಗೆ ತಲಾ ಆರು ಸಾವಿರ ರೂಪಾಯಿ ಜಮಾ ಮಾಡಬೇಕೆಂದು ಸೋನಿಯಾ ಈ ಮೊದಲಿನಿಂದಲೂ ಒತ್ತಾಯಿಸುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದು, ದೇಶಾದ್ಯಂತ ಲಾಕ್​ಡೌನ್ ಘೋಷಿಸಬೇಕೆಂದು, ಅದಕ್ಕೂ ಮೊದಲು ಆರ್ಥಿಕವಾಗಿ ದುರ್ಬಲರಿಗೆ ಕನಿಷ್ಠ ಆದಾಯ ಕಾರ್ಯಕ್ರಮ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು.

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಏರಿಕೆ ಮತ್ತು ನಿಯಂತ್ರಣ ಕುರಿತಂತೆ ಚರ್ಚೆ ನಡೆಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ತಮ್ಮ ಪಕ್ಷದ ಲೋಕಸಭಾ ಸಂಸದರ ಸಭೆ ಕರೆದಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲಾಗುತ್ತದೆ. ಈ ಸಭೆ ವಿಡಿಯೋ ಕಾನ್ಫರೆನ್ಸ್​​ ಮೂಲಕ ನಡೆಯಲಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ಈಟಿವಿ ಭಾರತ್​ಗೆ ಮಾಹಿತಿ ನೀಡಿದ್ದಾರೆ.

ಕಳೆದ ಶನಿವಾರ ಸೋನಿಯಾ ಗಾಂಧಿ, ರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರವಾದ ಕಳವಳ ವ್ಯಕ್ತಪಡಿಸಿದ್ದರು. ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿ, ಈ ಸಾಂಕ್ರಾಮಿಕ ರೋಗವನ್ನು ತಡೆಯಲು ರಾಷ್ಟ್ರೀಯ ನೀತಿಯನ್ನು ಸಿದ್ಧಪಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಗು ಉಳಿಸಲು 72 ದಿನದಲ್ಲಿ 16 ಕೋಟಿ ಸಂಗ್ರಹಿಸಿದ ದಂಪತಿ.!

ಕೋವಿಡ್ ಲಾಕ್​​ಡೌನ್​ನಿಂದಾಗಿ ನಾಗರಿಕರಿಗೆ ತೊಂದರೆಗಳಾಗುತ್ತಿದ್ದು, ಲಸಿಕೆಗಳನ್ನು ನೀಡುವ ಜೊತೆಗೆ ಬಡವರ ಬ್ಯಾಂಕ್ ಖಾತೆಗಳಿಗೆ ತಲಾ ಆರು ಸಾವಿರ ರೂಪಾಯಿ ಜಮಾ ಮಾಡಬೇಕೆಂದು ಸೋನಿಯಾ ಈ ಮೊದಲಿನಿಂದಲೂ ಒತ್ತಾಯಿಸುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದು, ದೇಶಾದ್ಯಂತ ಲಾಕ್​ಡೌನ್ ಘೋಷಿಸಬೇಕೆಂದು, ಅದಕ್ಕೂ ಮೊದಲು ಆರ್ಥಿಕವಾಗಿ ದುರ್ಬಲರಿಗೆ ಕನಿಷ್ಠ ಆದಾಯ ಕಾರ್ಯಕ್ರಮ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.