ETV Bharat / bharat

ಸಮಾನ ಮನಸ್ಕ ಪಕ್ಷಗಳ ನಾಯಕರ ಸಭೆ ಕರೆದ ಕೈ ನಾಯಕಿ ಸೋನಿಯಾ ಗಾಂಧಿ

author img

By

Published : Aug 13, 2021, 9:27 PM IST

ಕುತೂಹಲಕಾರಿ ಸಂಗತಿಯೆಂದರೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ವಿರೋಧ ಪಕ್ಷದ ನಾಯಕರನ್ನು ಔತಣಕೂಟಕ್ಕೆ ಕರೆದ ಕೆಲವು ದಿನಗಳ ನಂತರ ಈ ಸಭೆ ನಡೆಯುತ್ತಿದೆ. ಇದು ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ ಎನ್ನಲಾಗಿದೆ. 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಮಂತ್ರವನ್ನು ಪಠಿಸಲು, ತಂತ್ರ ರಚಿಸಲು ಕಾಂಗ್ರೆಸ್ ಉತ್ಸುಕವಾಗಿದೆ ಎಂಬುದಕ್ಕೆ ಈ ಸಭೆ ಸಂಕೇತವೆಂದರೆ ತಪ್ಪಾಗಲಾರದು..

ಕೈ ನಾಯಕಿ ಸೋನಿಯಾ ಗಾಂಧಿ
ಕೈ ನಾಯಕಿ ಸೋನಿಯಾ ಗಾಂಧಿ

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಸ್ಟ್ 20ರಂದು ಸಂಜೆ 4ಗಂಟೆಗೆ ಸಮಾನ ಮನಸ್ಕ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಇವುಗಳಲ್ಲಿ ಮಹಾರಾಷ್ಟ್ರದ ಉದ್ಧವ್ ಠಾಕ್ರೆ, ಜಾರ್ಖಂಡ್‌ನ ಹೇಮಂತ್ ಸೊರೆನ್, ಟಿಎಂಸಿಯ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡಿನ ಎಂ ಕೆ ಸ್ಟಾಲಿನ್ ಸೇರಿದಂತೆ ಪ್ರತಿಪಕ್ಷ ನೇತೃತ್ವದ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಸೇರಿದ್ದಾರೆ.

ಈ ಪಕ್ಷಕ್ಕೆ ಆಹ್ವಾನಿಸಲಾದ ಇತರ ವಿರೋಧ ಪಕ್ಷದ ನಾಯಕರಲ್ಲಿ ಎನ್‌ಸಿಪಿಯ ಶರದ್ ಪವಾರ್, ಸಿಪಿಐನ ಡಿ.ರಾಜಾ ಮತ್ತು ಸಿಪಿಐ (ಎಂ)ನ ಸೀತಾರಾಂ ಯೆಚೂರಿ ಸೇರಿದ್ದಾರೆ. ಈ ಬಗ್ಗೆ ಶಿವಸೇನೆ ಸಂಸದ ಸಂಜಯ್ ರಾವುತ್ ಈಟಿವಿ ಭಾರತ್​ಗೆ ದೃಢಪಡಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೋನಿಯಾ ಗಾಂಧಿಯವರಿಂದ ಆಹ್ವಾನ ಬಂದಿದ್ದು, ಅವರು ವಾಸ್ತವಿಕವಾಗಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟಾಗಿ ವಿವಿಧ ಸಮಸ್ಯೆಗಳನ್ನು ಎತ್ತುತ್ತಿರುವ ವಿರೋಧ ಪಕ್ಷಗಳ ವೇಗ ಉಳಿಸಿಕೊಳ್ಳಲು ಈ ಸಭೆ ಕರೆಯಲಾಗಿದೆ ಎಂದು ಕಾಂಗ್ರೆಸ್ ಆಂತರಿಕ ಮೂಲಗಳು ತಿಳಿಸಿವೆ. ಸಮಾಜವಾದಿ ಪಕ್ಷದಿಂದ ರಾಮ್ ಗೋಪಾಲ್ ಯಾದವ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಮರುಜನ್ಮದ ಭರವಸೆ ನೀಡಿ ಮಾಟ - ಮಂತ್ರ ಮಾಡಿ ವ್ಯಕ್ತಿ ಕೊಲೆ... ಮುಂದಾಗಿದ್ದೇನು?

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ವಿರೋಧ ಪಕ್ಷದ ನಾಯಕರನ್ನು ಔತಣಕೂಟಕ್ಕೆ ಕರೆದ ಕೆಲವು ದಿನಗಳ ನಂತರ ಈ ಸಭೆ ನಡೆಯುತ್ತಿದೆ. ಇದು ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ ಎನ್ನಲಾಗಿದೆ.

2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಮಂತ್ರವನ್ನು ಪಠಿಸಲು, ತಂತ್ರ ರಚಿಸಲು ಕಾಂಗ್ರೆಸ್ ಉತ್ಸುಕವಾಗಿದೆ ಎಂಬುದಕ್ಕೆ ಈ ಸಭೆ ಸಂಕೇತವೆಂದರೆ ತಪ್ಪಾಗಲಾರದು. ಮುಂಗಾರು ಅಧಿವೇಶನ ಮೊಟಕುಗೊಳಿಸುವಿಕೆ ಮತ್ತು ಪೆಗಾಸಸ್, ಕೃಷಿ ಕಾನೂನುಗಳು, ಹಣದುಬ್ಬರ ಮತ್ತು ಕೋವಿಡ್-19 ನಿರ್ವಹಣೆಯಂತಹ ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಪ್ರಮುಖ ವಿರೋಧ ಪಕ್ಷಗಳು ಗುರುವಾರ ಸಂಸತ್ತಿನಿಂದ ವಿಜಯ ಚೌಕಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ಕೈಗೊಂಡವು.

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಸ್ಟ್ 20ರಂದು ಸಂಜೆ 4ಗಂಟೆಗೆ ಸಮಾನ ಮನಸ್ಕ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಇವುಗಳಲ್ಲಿ ಮಹಾರಾಷ್ಟ್ರದ ಉದ್ಧವ್ ಠಾಕ್ರೆ, ಜಾರ್ಖಂಡ್‌ನ ಹೇಮಂತ್ ಸೊರೆನ್, ಟಿಎಂಸಿಯ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡಿನ ಎಂ ಕೆ ಸ್ಟಾಲಿನ್ ಸೇರಿದಂತೆ ಪ್ರತಿಪಕ್ಷ ನೇತೃತ್ವದ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಸೇರಿದ್ದಾರೆ.

ಈ ಪಕ್ಷಕ್ಕೆ ಆಹ್ವಾನಿಸಲಾದ ಇತರ ವಿರೋಧ ಪಕ್ಷದ ನಾಯಕರಲ್ಲಿ ಎನ್‌ಸಿಪಿಯ ಶರದ್ ಪವಾರ್, ಸಿಪಿಐನ ಡಿ.ರಾಜಾ ಮತ್ತು ಸಿಪಿಐ (ಎಂ)ನ ಸೀತಾರಾಂ ಯೆಚೂರಿ ಸೇರಿದ್ದಾರೆ. ಈ ಬಗ್ಗೆ ಶಿವಸೇನೆ ಸಂಸದ ಸಂಜಯ್ ರಾವುತ್ ಈಟಿವಿ ಭಾರತ್​ಗೆ ದೃಢಪಡಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೋನಿಯಾ ಗಾಂಧಿಯವರಿಂದ ಆಹ್ವಾನ ಬಂದಿದ್ದು, ಅವರು ವಾಸ್ತವಿಕವಾಗಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟಾಗಿ ವಿವಿಧ ಸಮಸ್ಯೆಗಳನ್ನು ಎತ್ತುತ್ತಿರುವ ವಿರೋಧ ಪಕ್ಷಗಳ ವೇಗ ಉಳಿಸಿಕೊಳ್ಳಲು ಈ ಸಭೆ ಕರೆಯಲಾಗಿದೆ ಎಂದು ಕಾಂಗ್ರೆಸ್ ಆಂತರಿಕ ಮೂಲಗಳು ತಿಳಿಸಿವೆ. ಸಮಾಜವಾದಿ ಪಕ್ಷದಿಂದ ರಾಮ್ ಗೋಪಾಲ್ ಯಾದವ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಮರುಜನ್ಮದ ಭರವಸೆ ನೀಡಿ ಮಾಟ - ಮಂತ್ರ ಮಾಡಿ ವ್ಯಕ್ತಿ ಕೊಲೆ... ಮುಂದಾಗಿದ್ದೇನು?

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ವಿರೋಧ ಪಕ್ಷದ ನಾಯಕರನ್ನು ಔತಣಕೂಟಕ್ಕೆ ಕರೆದ ಕೆಲವು ದಿನಗಳ ನಂತರ ಈ ಸಭೆ ನಡೆಯುತ್ತಿದೆ. ಇದು ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ ಎನ್ನಲಾಗಿದೆ.

2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಮಂತ್ರವನ್ನು ಪಠಿಸಲು, ತಂತ್ರ ರಚಿಸಲು ಕಾಂಗ್ರೆಸ್ ಉತ್ಸುಕವಾಗಿದೆ ಎಂಬುದಕ್ಕೆ ಈ ಸಭೆ ಸಂಕೇತವೆಂದರೆ ತಪ್ಪಾಗಲಾರದು. ಮುಂಗಾರು ಅಧಿವೇಶನ ಮೊಟಕುಗೊಳಿಸುವಿಕೆ ಮತ್ತು ಪೆಗಾಸಸ್, ಕೃಷಿ ಕಾನೂನುಗಳು, ಹಣದುಬ್ಬರ ಮತ್ತು ಕೋವಿಡ್-19 ನಿರ್ವಹಣೆಯಂತಹ ವಿಷಯಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಪ್ರಮುಖ ವಿರೋಧ ಪಕ್ಷಗಳು ಗುರುವಾರ ಸಂಸತ್ತಿನಿಂದ ವಿಜಯ ಚೌಕಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ಕೈಗೊಂಡವು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.