ETV Bharat / bharat

ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ

ಇದೇ ಸೆಪ್ಟೆಂಬರ್ 18 ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಎಂದು ಸರ್ಕಾರ ಘೋಷಿಸಿದೆ.

author img

By ETV Bharat Karnataka Team

Published : Aug 31, 2023, 4:44 PM IST

Special session of the Parliament from September 18 22 Centre
Special session of the Parliament from September 18 22 Centre

ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಅಧಿವೇಶನದಲ್ಲಿ 5 ಕಲಾಪಗಳು ನಡೆಯಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಕ್ಸ್‌ನಲ್ಲಿ (ಹಿಂದೆ ಟ್ವಿಟರ್) ಪೋಸ್ಟ್ ಮಾಡಿದ್ದಾರೆ. "ಅಮೃತ್ ಕಾಲ್ ನಡುವೆ, ಸಂಸತ್ತಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಲು ಎದುರು ನೋಡುತ್ತಿದ್ದೇನೆ" ಎಂದು ಜೋಶಿ ಪೋಸ್ಟ್​ ಮಾಡಿದ್ದಾರೆ.

ಸಂಭಾವ್ಯ ಕಾರ್ಯಸೂಚಿಗಳ ಬಗ್ಗೆ ಸರ್ಕಾರ ಈವರೆಗೂ ಯಾವುದೇ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಅಲ್ಲದೆ ಈ ವಿಶೇಷ ಅಧಿವೇಶನವು ಹೊಸ ಸಂಸತ್ ಕಟ್ಟಡದಲ್ಲಿ ನಡೆಯುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಅಧಿವೇಶನ ಹಳೆಯ ಕಟ್ಟಡದಲ್ಲಿಯೇ ನಡೆಯಬಹುದು ಎಂದು ಮೂಲಗಳು ಹೇಳಿವೆ. ಅಲ್ಲದೆ, ಇದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಆಗಿರುವ ಸಾಧ್ಯತೆಗಳೂ ಇಲ್ಲ. ಅಧಿವೇಶನದಲ್ಲಿ ಯಾವುದಾದರೂ ಮುಖ್ಯವಾದ ಮಸೂದೆ ಪಾಸ್​ ಮಾಡಲಾಗುವುದೇ ಎಂಬ ಬಗ್ಗೆಯೂ ಮಾಹಿತಿ ಇಲ್ಲ.

ವಿಶೇಷ ಅಧಿವೇಶನ ನಡೆಸುವ ನಿರ್ಣಯ ಪ್ರಕಟಿಸಿದ ಸಮಯ ಮಾತ್ರ ಸಾಕಷ್ಟು ಕುತೂಹಲಕರವಾಗಿದೆ. ಮುಂಬೈನಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಮಾಡಿಕೊಂಡ ಐಎನ್​ಡಿಎಐ ಬಣದ ಸಭೆ ನಡೆಯುತ್ತಿರುವಾಗಲೇ ವಿಶೇಷ ಅಧಿವೇಶನದ ಬಗ್ಗೆ ಮಾಹಿತಿ ನೀಡಲಾಗಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ಪುನಃ ಸ್ಥಾಪಿಸುವ ಬಗ್ಗೆ ಇಂದು ಸುಪ್ರೀಂ ಕೋರ್ಟ್​​ನಲ್ಲಿ ಕೇಂದ್ರ ಸರ್ಕಾರ ಹೇಳಿಕೆ ನೀಡಿತ್ತು.

ಈ ಹಿಂದೆ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ಮತ್ತು ಆಗಸ್ಟ್ 11 ರ ನಡುವೆ ನಡೆದಿತ್ತು. ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರದ ವಿಷಯದ ಬಗ್ಗೆ ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್​​ಡಿಎ) ಮತ್ತು ಪ್ರತಿಪಕ್ಷ ಐಎನ್​ಡಿಎಐ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್) ಬಣದ ನಡುವೆ ತೀವ್ರ ವಾಗ್ವಾದ ನಡೆದಿತ್ತು.

ಐ.ಎನ್.ಡಿ.ಐ.ಎ. ಬಣ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿತ್ತು. ಆದರೆ ಕೊನೆಯ ದಿನದಂದು ಈ ಗೊತ್ತುವಳಿಗೆ ಸೋಲಾಯಿತು. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಸಮಯದಲ್ಲಿ ಪ್ರತಿಪಕ್ಷಗಳು ಕಲಾಪ ಬಹಿಷ್ಕರಿಸಿ ಲೋಕಸಭೆಯಿಂದ ಹೊರನಡೆದಿದ್ದವು.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸರ್ಕಾರ ಕರೆದಿರುವ ಐದು ದಿನಗಳ ಸಂಸತ್ತಿನ ವಿಶೇಷ ಅಧಿವೇಶನದ ಸಮಯವನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ. ಈ ಬಗ್ಗೆ ಮಾತನಾಡಿದ ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ, ಗಣೇಶ ಚತುರ್ಥಿಯ ಮಧ್ಯೆ ಸಂಸತ್ತಿನ ವಿಶೇಷ ಅಧಿವೇಶನ ಕರೆದಿರುವ ಸರ್ಕಾರದ ನಿರ್ಧಾರ ಆಶ್ಚರ್ಯ ತಂದಿದೆ ಎಂದು ಹೇಳಿದರು. ಸಂಸತ್ತಿನ ವಿಶೇಷ ಅಧಿವೇಶನದ ದಿನಾಂಕಗಳನ್ನು ಮರುಪರಿಶೀಲಿಸುವಂತೆ ಎನ್​ಸಿಪಿ ಸಂಸದೆ ಸುಪ್ರಿಯಾ ಸುಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕೋರಿದ್ದಾರೆ.

ಇದನ್ನೂ ಓದಿ : ಜೈಲು ಕೈದಿಗಳ ಅಸ್ವಾಭಾವಿಕ ಸಾವಿಗೆ ಆತ್ಮಹತ್ಯೆಯೇ ಪ್ರಮುಖ ಕಾರಣ: ಕಾರಾಗೃಹ ಸುಧಾರಣಾ ಸಮಿತಿ ವರದಿ

ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಅಧಿವೇಶನದಲ್ಲಿ 5 ಕಲಾಪಗಳು ನಡೆಯಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಕ್ಸ್‌ನಲ್ಲಿ (ಹಿಂದೆ ಟ್ವಿಟರ್) ಪೋಸ್ಟ್ ಮಾಡಿದ್ದಾರೆ. "ಅಮೃತ್ ಕಾಲ್ ನಡುವೆ, ಸಂಸತ್ತಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಲು ಎದುರು ನೋಡುತ್ತಿದ್ದೇನೆ" ಎಂದು ಜೋಶಿ ಪೋಸ್ಟ್​ ಮಾಡಿದ್ದಾರೆ.

ಸಂಭಾವ್ಯ ಕಾರ್ಯಸೂಚಿಗಳ ಬಗ್ಗೆ ಸರ್ಕಾರ ಈವರೆಗೂ ಯಾವುದೇ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಅಲ್ಲದೆ ಈ ವಿಶೇಷ ಅಧಿವೇಶನವು ಹೊಸ ಸಂಸತ್ ಕಟ್ಟಡದಲ್ಲಿ ನಡೆಯುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಅಧಿವೇಶನ ಹಳೆಯ ಕಟ್ಟಡದಲ್ಲಿಯೇ ನಡೆಯಬಹುದು ಎಂದು ಮೂಲಗಳು ಹೇಳಿವೆ. ಅಲ್ಲದೆ, ಇದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಆಗಿರುವ ಸಾಧ್ಯತೆಗಳೂ ಇಲ್ಲ. ಅಧಿವೇಶನದಲ್ಲಿ ಯಾವುದಾದರೂ ಮುಖ್ಯವಾದ ಮಸೂದೆ ಪಾಸ್​ ಮಾಡಲಾಗುವುದೇ ಎಂಬ ಬಗ್ಗೆಯೂ ಮಾಹಿತಿ ಇಲ್ಲ.

ವಿಶೇಷ ಅಧಿವೇಶನ ನಡೆಸುವ ನಿರ್ಣಯ ಪ್ರಕಟಿಸಿದ ಸಮಯ ಮಾತ್ರ ಸಾಕಷ್ಟು ಕುತೂಹಲಕರವಾಗಿದೆ. ಮುಂಬೈನಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಮಾಡಿಕೊಂಡ ಐಎನ್​ಡಿಎಐ ಬಣದ ಸಭೆ ನಡೆಯುತ್ತಿರುವಾಗಲೇ ವಿಶೇಷ ಅಧಿವೇಶನದ ಬಗ್ಗೆ ಮಾಹಿತಿ ನೀಡಲಾಗಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ಪುನಃ ಸ್ಥಾಪಿಸುವ ಬಗ್ಗೆ ಇಂದು ಸುಪ್ರೀಂ ಕೋರ್ಟ್​​ನಲ್ಲಿ ಕೇಂದ್ರ ಸರ್ಕಾರ ಹೇಳಿಕೆ ನೀಡಿತ್ತು.

ಈ ಹಿಂದೆ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ಮತ್ತು ಆಗಸ್ಟ್ 11 ರ ನಡುವೆ ನಡೆದಿತ್ತು. ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರದ ವಿಷಯದ ಬಗ್ಗೆ ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್​​ಡಿಎ) ಮತ್ತು ಪ್ರತಿಪಕ್ಷ ಐಎನ್​ಡಿಎಐ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್) ಬಣದ ನಡುವೆ ತೀವ್ರ ವಾಗ್ವಾದ ನಡೆದಿತ್ತು.

ಐ.ಎನ್.ಡಿ.ಐ.ಎ. ಬಣ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿತ್ತು. ಆದರೆ ಕೊನೆಯ ದಿನದಂದು ಈ ಗೊತ್ತುವಳಿಗೆ ಸೋಲಾಯಿತು. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಸಮಯದಲ್ಲಿ ಪ್ರತಿಪಕ್ಷಗಳು ಕಲಾಪ ಬಹಿಷ್ಕರಿಸಿ ಲೋಕಸಭೆಯಿಂದ ಹೊರನಡೆದಿದ್ದವು.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸರ್ಕಾರ ಕರೆದಿರುವ ಐದು ದಿನಗಳ ಸಂಸತ್ತಿನ ವಿಶೇಷ ಅಧಿವೇಶನದ ಸಮಯವನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ. ಈ ಬಗ್ಗೆ ಮಾತನಾಡಿದ ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ, ಗಣೇಶ ಚತುರ್ಥಿಯ ಮಧ್ಯೆ ಸಂಸತ್ತಿನ ವಿಶೇಷ ಅಧಿವೇಶನ ಕರೆದಿರುವ ಸರ್ಕಾರದ ನಿರ್ಧಾರ ಆಶ್ಚರ್ಯ ತಂದಿದೆ ಎಂದು ಹೇಳಿದರು. ಸಂಸತ್ತಿನ ವಿಶೇಷ ಅಧಿವೇಶನದ ದಿನಾಂಕಗಳನ್ನು ಮರುಪರಿಶೀಲಿಸುವಂತೆ ಎನ್​ಸಿಪಿ ಸಂಸದೆ ಸುಪ್ರಿಯಾ ಸುಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕೋರಿದ್ದಾರೆ.

ಇದನ್ನೂ ಓದಿ : ಜೈಲು ಕೈದಿಗಳ ಅಸ್ವಾಭಾವಿಕ ಸಾವಿಗೆ ಆತ್ಮಹತ್ಯೆಯೇ ಪ್ರಮುಖ ಕಾರಣ: ಕಾರಾಗೃಹ ಸುಧಾರಣಾ ಸಮಿತಿ ವರದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.