ETV Bharat / bharat

ತಮಿಳುನಾಡು ನಕಲಿ ಮದ್ಯ ಕೇಸ್​: ಸಾವಿನ ಸಂಖ್ಯೆ 22 ಕ್ಕೇರಿಕೆ; ಸರ್ಕಾರಕ್ಕೆ NHRC ನೋಟಿಸ್

ತಮಿಳುನಾಡಿನ ವಿಲ್ಲುಪುರಂ, ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಪ್ರಕರಣದ ತನಿಖೆಯನ್ನು ಸಿಎಂ ಸ್ಟಾಲಿನ್‌ ಸಿಬಿ-ಸಿಐಡಿಗೆ ವಹಿಸಿದ್ದಾರೆ. ಜನರ ಸಾವಿಗೆ ಮೆಥನಲ್ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

author img

By

Published : May 16, 2023, 2:00 PM IST

Updated : May 17, 2023, 6:39 AM IST

ತಮಿಳುನಾಡು ನಕಲಿ ಮದ್ಯ ಕೇಸ್​
ತಮಿಳುನಾಡು ನಕಲಿ ಮದ್ಯ ಕೇಸ್​

ವಿಲ್ಲುಪುರಂ (ತಮಿಳುನಾಡು): ತಮಿಳುನಾಡಿನ ವಿಲ್ಲುಪುರಂ ಜಿಲ್ಲೆ ಸೇರಿದಂತೆ ವಿವಿಧೆಡೆ ನಕಲಿ ಮದ್ಯ ಸೇವಿಸಿ ಸಾವನ್ನಪ್ಪುತ್ತಿರುವವರ ಸಂಖ್ಯೆ ನಿಲ್ಲುತ್ತಿಲ್ಲ. ಮಂಗಳವಾರ ಮತ್ತಿಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ವಿಲ್ಲುಪುರಂ ಒಂದರಲ್ಲೇ ಮೂವರು ಮಹಿಳೆಯರು ಸೇರಿ 13 ಮಂದಿ ವಿಷಪೂರಿತ ಮದ್ಯಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಜಿಲ್ಲೆಯ ಮರಕ್ಕನಂನ ಎಕ್ಕಿಯಾರ್ಕುಪ್ಪಂ ಮೀನುಗಾರಿಕಾ ಪ್ರದೇಶದಲ್ಲಿ ಶನಿವಾರ ಸಂಜೆ ಜನರ ಗುಂಪೊಂದು ಮದ್ಯ ಸೇವಿಸಿತ್ತು. ಕೆಲ ಗಂಟೆಗಳ ಬಳಿಕ ಒಟ್ಟು ಮಂದಿ ಸಾವನ್ನಪ್ಪಿದ್ದರು. ಮೃತರನ್ನು ಶಂಕರ್, ಸುರೇಶ್, ಧರಣಿವೇಲ್, ರಾಜಮೂರ್ತಿ, ವಿಜಯನ್, ಮನ್ನಕಟ್ಟಿ, ಮಲರ್ವಿಜ್ಲಿ, ಅಭಿರಾಗಂ, ಕೇಶವ ವೇಲು, ಶಂಕರ್, ವಿಜಯನ್, ರಾಜವೇಲು ಮತ್ತು ಶರತ್ ಕುಮಾರ್ ಎಂದು ಗುರುತಿಸಲಾಗಿದೆ.

ಮತ್ತೊಂದು ಘಟನೆ ಭಾನುವಾರ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಗಮ್‌ನಿಂದ ವರದಿಯಾಗಿದ್ದು, ಅಕ್ರಮ ಮದ್ಯ ಸೇವನೆಯಿಂದ ಐವರು ಸಾವನ್ನಪ್ಪಿದ್ದರು. ಇದರಲ್ಲಿ ಚಿತ್ತಮೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ ಪ್ರಕರಣ ವರದಿಯಾಗಿತ್ತು. ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರಂಭದಲ್ಲಿ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಸುದ್ದಿಯಾಗಿತ್ತು. ಬಳಿಕ ರೋಗಲಕ್ಷಣವನ್ನು ತಪಾಸಣೆ ಮಾಡಿದಾಗ ನಕಲಿ ಮದ್ಯ ಸೇವನೆ ಮಾಡಿರುವುದು ಖಚಿತವಾಗಿತ್ತು. ಇದಲ್ಲದೇ, ಮದ್ಯ ಸೇವನೆ ಮಾಡಿದ ಮತ್ತಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಮೃತಪಟ್ಟವರ ಶವಪರೀಕ್ಷೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ತಮಿಳುನಾಡಿನಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು ಹಲವರು ಆಸ್ಪತ್ರೆಗೆ ದಾಖಲು

ಪೊಲೀಸರ ಪ್ರಕಾರ, ತಮಿಳುನಾಡಿನ ಉತ್ತರ ವಲಯದಲ್ಲಿ ವರದಿಯಾಗಿರುವ ನಕಲಿ ಮದ್ಯದ ಎರಡು ಪ್ರತ್ಯೇಕ ಘಟನೆಗಳ ನಡುವಿನ ಸಂಬಂಧದ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲವಾಗಿದೆ.

ಆರೋಪಿಯ ಬಂಧನ: ಮದ್ಯ ಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರನ್ ಎಂಬಾತನನ್ನು ಬಂಧಿಸಲಾಗಿದೆ. ಆತನ ಬಳಿಯಿದ್ದ ನಕಲಿ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ಮೆಥನಾಲ್ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕಾರದಿಂದ ಪರಿಹಾರ ಘೋಷಣೆ: ಮುಖ್ಯಮಂತ್ರಿ ಸ್ಟಾಲಿನ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50,000 ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ವಿಶೇಷ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದ್ದಾರೆ. ಅಕ್ರಮ ಮದ್ಯ ಮತ್ತು ಮಾದಕ ದ್ರವ್ಯಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.

ಅಧಿಕಾರಿಗಳ ಅಮಾನತು: ಕೇಸ್​​ಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ವಿಲ್ಲುಪುರಂ ಮರಕ್ಕನಂನಲ್ಲಿ ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಸಬ್‌ ಇನ್ಸ್​​​ಪೆಕ್ಟರ್​ಗಳನ್ನು ಅಮಾನತುಗೊಳಿಸಲಾಗಿದೆ. ಅಂತೆಯೇ, ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಓರ್ವ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ನಕಲಿ ಮದ್ಯ ಸೇವಿಸಿ ಮೂವರು ಮಹಿಳೆಯರು ಸೇರಿ 10 ಮಂದಿ ಸಾವು 7 ಠಾಣಾಧಿಕಾರಿಗಳ ಅಮಾನತು

ವಿಲ್ಲುಪುರಂ (ತಮಿಳುನಾಡು): ತಮಿಳುನಾಡಿನ ವಿಲ್ಲುಪುರಂ ಜಿಲ್ಲೆ ಸೇರಿದಂತೆ ವಿವಿಧೆಡೆ ನಕಲಿ ಮದ್ಯ ಸೇವಿಸಿ ಸಾವನ್ನಪ್ಪುತ್ತಿರುವವರ ಸಂಖ್ಯೆ ನಿಲ್ಲುತ್ತಿಲ್ಲ. ಮಂಗಳವಾರ ಮತ್ತಿಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ವಿಲ್ಲುಪುರಂ ಒಂದರಲ್ಲೇ ಮೂವರು ಮಹಿಳೆಯರು ಸೇರಿ 13 ಮಂದಿ ವಿಷಪೂರಿತ ಮದ್ಯಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಜಿಲ್ಲೆಯ ಮರಕ್ಕನಂನ ಎಕ್ಕಿಯಾರ್ಕುಪ್ಪಂ ಮೀನುಗಾರಿಕಾ ಪ್ರದೇಶದಲ್ಲಿ ಶನಿವಾರ ಸಂಜೆ ಜನರ ಗುಂಪೊಂದು ಮದ್ಯ ಸೇವಿಸಿತ್ತು. ಕೆಲ ಗಂಟೆಗಳ ಬಳಿಕ ಒಟ್ಟು ಮಂದಿ ಸಾವನ್ನಪ್ಪಿದ್ದರು. ಮೃತರನ್ನು ಶಂಕರ್, ಸುರೇಶ್, ಧರಣಿವೇಲ್, ರಾಜಮೂರ್ತಿ, ವಿಜಯನ್, ಮನ್ನಕಟ್ಟಿ, ಮಲರ್ವಿಜ್ಲಿ, ಅಭಿರಾಗಂ, ಕೇಶವ ವೇಲು, ಶಂಕರ್, ವಿಜಯನ್, ರಾಜವೇಲು ಮತ್ತು ಶರತ್ ಕುಮಾರ್ ಎಂದು ಗುರುತಿಸಲಾಗಿದೆ.

ಮತ್ತೊಂದು ಘಟನೆ ಭಾನುವಾರ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಗಮ್‌ನಿಂದ ವರದಿಯಾಗಿದ್ದು, ಅಕ್ರಮ ಮದ್ಯ ಸೇವನೆಯಿಂದ ಐವರು ಸಾವನ್ನಪ್ಪಿದ್ದರು. ಇದರಲ್ಲಿ ಚಿತ್ತಮೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ ಪ್ರಕರಣ ವರದಿಯಾಗಿತ್ತು. ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರಂಭದಲ್ಲಿ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಸುದ್ದಿಯಾಗಿತ್ತು. ಬಳಿಕ ರೋಗಲಕ್ಷಣವನ್ನು ತಪಾಸಣೆ ಮಾಡಿದಾಗ ನಕಲಿ ಮದ್ಯ ಸೇವನೆ ಮಾಡಿರುವುದು ಖಚಿತವಾಗಿತ್ತು. ಇದಲ್ಲದೇ, ಮದ್ಯ ಸೇವನೆ ಮಾಡಿದ ಮತ್ತಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಮೃತಪಟ್ಟವರ ಶವಪರೀಕ್ಷೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ತಮಿಳುನಾಡಿನಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು ಹಲವರು ಆಸ್ಪತ್ರೆಗೆ ದಾಖಲು

ಪೊಲೀಸರ ಪ್ರಕಾರ, ತಮಿಳುನಾಡಿನ ಉತ್ತರ ವಲಯದಲ್ಲಿ ವರದಿಯಾಗಿರುವ ನಕಲಿ ಮದ್ಯದ ಎರಡು ಪ್ರತ್ಯೇಕ ಘಟನೆಗಳ ನಡುವಿನ ಸಂಬಂಧದ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲವಾಗಿದೆ.

ಆರೋಪಿಯ ಬಂಧನ: ಮದ್ಯ ಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರನ್ ಎಂಬಾತನನ್ನು ಬಂಧಿಸಲಾಗಿದೆ. ಆತನ ಬಳಿಯಿದ್ದ ನಕಲಿ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ಮೆಥನಾಲ್ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕಾರದಿಂದ ಪರಿಹಾರ ಘೋಷಣೆ: ಮುಖ್ಯಮಂತ್ರಿ ಸ್ಟಾಲಿನ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50,000 ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ವಿಶೇಷ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದ್ದಾರೆ. ಅಕ್ರಮ ಮದ್ಯ ಮತ್ತು ಮಾದಕ ದ್ರವ್ಯಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.

ಅಧಿಕಾರಿಗಳ ಅಮಾನತು: ಕೇಸ್​​ಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ವಿಲ್ಲುಪುರಂ ಮರಕ್ಕನಂನಲ್ಲಿ ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಸಬ್‌ ಇನ್ಸ್​​​ಪೆಕ್ಟರ್​ಗಳನ್ನು ಅಮಾನತುಗೊಳಿಸಲಾಗಿದೆ. ಅಂತೆಯೇ, ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಓರ್ವ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ನಕಲಿ ಮದ್ಯ ಸೇವಿಸಿ ಮೂವರು ಮಹಿಳೆಯರು ಸೇರಿ 10 ಮಂದಿ ಸಾವು 7 ಠಾಣಾಧಿಕಾರಿಗಳ ಅಮಾನತು

Last Updated : May 17, 2023, 6:39 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.