ETV Bharat / bharat

ಜಮ್ಮು- ಕಾಶ್ಮೀರದ ಗಂದೇರ್‌ಬಾಲ್​ನಲ್ಲಿ ಹಠಾತ್ ಪ್ರವಾಹ : ಶ್ರೀನಗರ-ಲೇಹ್ ಹೆದ್ದಾರಿ ಸಂಚಾರ ಬಂದ್

author img

By

Published : Jul 5, 2022, 9:11 PM IST

ಜಮ್ಮು- ಕಾಶ್ಮೀರದ ಗಂದೇರ್‌ಬಾಲ್ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಉಂಟಾದ ಹಠಾತ್ ಪ್ರವಾಹದಿಂದಾಗಿ ಶ್ರೀನಗರ - ಲೇಹ್ ಹೆದ್ದಾರಿ ಸಂಚಾರ ಬಂದ್ ಆಗಿದೆ. ಸದ್ಯ ಹೆದ್ದಾರಿ ಸಂಚಾರ ಮುಕ್ತಗೊಳಿಸುವ ಕಾರ್ಯ ಸಾಗುತ್ತಿದೆ.

srinagar-leh-highway-blocked-after-flash-floods-hit-jammu-kashmir-ganderbal
ಜಮ್ಮು- ಕಾಶ್ಮೀರದ ಗಂದೇರ್‌ಬಾಲ್​ನಲ್ಲಿ ಹಠಾತ್ ಪ್ರವಾಹ : ಶ್ರೀನಗರ-ಲೇಹ್ ಹೆದ್ದಾರಿ ಸಂಚಾರ ಬಂದ್

ಗಂದೇರ್‌ಬಾಲ್: ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೇಘಸ್ಫೋಟ ಉಂಟಾಗಿದ್ದು, ಮಧ್ಯ ಕಾಶ್ಮೀರದ ಗಂದೇರ್‌ಬಾಲ್ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಶ್ರೀನಗರ - ಲೇಹ್ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಭಾನುವಾರದಂದು ಗಂದರ್‌ಬಾಲ್ ಜಿಲ್ಲೆಯ ಕಂಗಾನ್‌ ನ ಶಾ ಮೊಹಲ್ಲಾ ಕುಲ್ಲನ್ ಪ್ರದೇಶದಲ್ಲಿ ದಿಢೀರ್ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಗಳು ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ.

srinagar-leh-highway-blocked-after-flash-floods-hit-jammu-kashmir-ganderbal
ಜಮ್ಮು- ಕಾಶ್ಮೀರದ ಗಂದೇರ್‌ಬಾಲ್​ನಲ್ಲಿ ಹಠಾತ್ ಪ್ರವಾಹ : ಶ್ರೀನಗರ-ಲೇಹ್ ಹೆದ್ದಾರಿ ಸಂಚಾರ ಬಂದ್

ಪ್ರವಾಹದಿಂದಾಗಿ ಸಂಚಾರ ಸ್ಥಗಿತಗೊಂಡಿದ್ದ ಶ್ರೀನಗರ-ಲೇಹ್ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸುವ ಕಾರ್ಯ ನಡೆಯುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಜೂನ್ 29 ರಂದು ಜಮ್ಮುವಿನಿಂದ ಅಮರನಾಥ ಯಾತ್ರೆ ಪ್ರಾರಂಭವಾಗಿದ್ದು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಬಿಗಿ ಭದ್ರತೆಯೊಂದಿಗೆ ಅಮರನಾಥ ಯಾತ್ರೆ ಸಾಗುತ್ತಿದೆ. ಹಿಮಾಲಯದ ಮೇಲ್ಭಾಗದಲ್ಲಿರುವ ಸುಮಾರು 3,880 ಮೀಟರ್ ಎತ್ತರದಲ್ಲಿರುವ ಗುಹಾ ದೇವಾಲಯಕ್ಕೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಅವಳಿ ಮಾರ್ಗಗಳಿಂದ ಯಾತ್ರೆ ಸಾಗುತ್ತದೆ.

ಓದಿ : ನ್ಯೂಸ್​ ಚಾನೆಲ್​​ನ ಆ್ಯಂಕರ್​ ರೋಹಿತ್ ರಂಜನ್ ಅರೆಸ್ಟ್​

ಗಂದೇರ್‌ಬಾಲ್: ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೇಘಸ್ಫೋಟ ಉಂಟಾಗಿದ್ದು, ಮಧ್ಯ ಕಾಶ್ಮೀರದ ಗಂದೇರ್‌ಬಾಲ್ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಶ್ರೀನಗರ - ಲೇಹ್ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಭಾನುವಾರದಂದು ಗಂದರ್‌ಬಾಲ್ ಜಿಲ್ಲೆಯ ಕಂಗಾನ್‌ ನ ಶಾ ಮೊಹಲ್ಲಾ ಕುಲ್ಲನ್ ಪ್ರದೇಶದಲ್ಲಿ ದಿಢೀರ್ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಗಳು ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ.

srinagar-leh-highway-blocked-after-flash-floods-hit-jammu-kashmir-ganderbal
ಜಮ್ಮು- ಕಾಶ್ಮೀರದ ಗಂದೇರ್‌ಬಾಲ್​ನಲ್ಲಿ ಹಠಾತ್ ಪ್ರವಾಹ : ಶ್ರೀನಗರ-ಲೇಹ್ ಹೆದ್ದಾರಿ ಸಂಚಾರ ಬಂದ್

ಪ್ರವಾಹದಿಂದಾಗಿ ಸಂಚಾರ ಸ್ಥಗಿತಗೊಂಡಿದ್ದ ಶ್ರೀನಗರ-ಲೇಹ್ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸುವ ಕಾರ್ಯ ನಡೆಯುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಜೂನ್ 29 ರಂದು ಜಮ್ಮುವಿನಿಂದ ಅಮರನಾಥ ಯಾತ್ರೆ ಪ್ರಾರಂಭವಾಗಿದ್ದು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಬಿಗಿ ಭದ್ರತೆಯೊಂದಿಗೆ ಅಮರನಾಥ ಯಾತ್ರೆ ಸಾಗುತ್ತಿದೆ. ಹಿಮಾಲಯದ ಮೇಲ್ಭಾಗದಲ್ಲಿರುವ ಸುಮಾರು 3,880 ಮೀಟರ್ ಎತ್ತರದಲ್ಲಿರುವ ಗುಹಾ ದೇವಾಲಯಕ್ಕೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಅವಳಿ ಮಾರ್ಗಗಳಿಂದ ಯಾತ್ರೆ ಸಾಗುತ್ತದೆ.

ಓದಿ : ನ್ಯೂಸ್​ ಚಾನೆಲ್​​ನ ಆ್ಯಂಕರ್​ ರೋಹಿತ್ ರಂಜನ್ ಅರೆಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.