ETV Bharat / bharat

SSC Recruitment Scam: ಪಶ್ಚಿಮ ಬಂಗಾಳ ಸಚಿವ ಸಂಪುಟದಿಂದ ಪಾರ್ಥ ಚಟರ್ಜಿ ವಜಾ

author img

By

Published : Jul 28, 2022, 5:19 PM IST

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಇತ್ತೀಚೆಗೆ ಬಂಧಿತರಾದ ಪಶ್ಚಿಮ ಬಂಗಾಳದ ಪ್ರಭಾವಿ ಸಚಿವ ಪಾರ್ಥ ಚಟರ್ಜಿ ಅವರನ್ನ ಕ್ಯಾಬಿನೆಟ್​​ನಿಂದ ವಜಾಗೊಳಿಸಲಾಗಿದೆ.

SSC Recruitment Scam
SSC Recruitment Scam

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಸಚಿವ ಪಾರ್ಥ ಚಟರ್ಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಾರ್ಥ ಚಟರ್ಜಿ ಅವರನ್ನ ಸಚಿವ ಸ್ಥಾನದಿಂದ ತೆಗೆದು ಹಾಕಿದ್ದೇನೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಈ ಹಿಂದೆ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದ ಪಾರ್ಥ ಚಟರ್ಜಿ ಸದ್ಯ ದೀದಿ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿರುವ ಕಾರಣ ಪಕ್ಷದ ಹಾಗೂ ಸಚಿವಾಲಯದ ಎಲ್ಲ ಹುದ್ದೆಗಳಿಂದ ವಜಾಗೊಳಿಸಲಾಗಿದೆ.

  • #SSCRecruitmentScam | I have removed Partha Chatterjee as a minister. My party takes strict action. There are many plannings behind it but I don't want to go into details: West Bengal CM Mamata Banerjee

    (File photo) pic.twitter.com/tRZbsYUDI8

    — ANI (@ANI) July 28, 2022 " class="align-text-top noRightClick twitterSection" data=" ">

ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ನಿವಾಸದಲ್ಲಿ ಬರೋಬ್ಬರಿ 21 ಕೋಟಿ ಹಣ ವಶಕ್ಕೆ ಪಡೆದುಕೊಂಡಿದ್ದ ಇಡಿ ಅಧಿಕಾರಿಗಳು ನಿನ್ನೆ ಮತ್ತೊಂದು ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಯ 27 ಕೋಟಿ ರೂ. ನಗದು ಹಾಗೂ 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದಲ್ಲಿ ಅವರ ಕೈವಾಡ ಇರುವುದು ಸಾಬೀತುಗೊಳ್ಳುತ್ತಿದ್ದಂತೆ ಪಾರ್ಥ ಚಟರ್ಜಿ ಅವರನ್ನ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ದೊಡ್ಡ ಮಟ್ಟದ ಕೂಗು ಕೇಳಿ ಬಂದಿತ್ತು.

ಇದನ್ನೂ ಓದಿರಿ: ಅರ್ಪಿತಾ ಮುಖರ್ಜಿ ನಿವಾಸದಲ್ಲಿ ಮತ್ತೆ ₹15 ಕೋಟಿ ನಗದು ಪತ್ತೆ.. ಮುಂದುವರಿದ ಎಣಿಕೆ ಕಾರ್ಯ

ಪಾರ್ಥ ಚಟರ್ಜಿ ಅವರನ್ನು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಕೆಲ ದಿನಗಳ ಹಿಂದೆ ವಿಚಾರಣೆಗೊಳಪಡಿಸಿದ್ದರು. ಈ ವೇಳೆ, ಚಟರ್ಜಿ ಅವರಿಗೆ ಆಪ್ತರಾಗಿರುವ ಅರ್ಪಿತಾ ಮುಖರ್ಜಿ ಅವರ ದಕ್ಷಿಣ ಕೋಲ್ಕತ್ತಾದಲ್ಲಿರುವ ನಿವಾಸದಿಂದ ಇಡಿ ಅಧಿಕಾರಿಗಳು ದಾಖಲೆ ಮಟ್ಟದ ಹಣ ವಶಕ್ಕೆ ಪಡೆದುಕೊಂಡಿದ್ದರು.

ಸಚಿವ ಪಾರ್ಥ ಚಟರ್ಜಿ 10 ದಿನ ಇಡಿ ಕಸ್ಟಡಿಗೆ: ಶಿಕ್ಷಕರ ನೇಮಕಾತಿ ಪ್ರಕರಣದಲ್ಲಿ ಬಂಧನವಾಗಿರುವ ಸಚಿವ ಪಾರ್ಥ ಚಟರ್ಜಿ ಅವರನ್ನ ಕೋಲ್ಕತ್ತಾ ನ್ಯಾಯಾಲಯ 10 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಭುವನೇಶ್ವರದ ಏಮ್ಸ್​​ನಲ್ಲಿ ನಿನ್ನೆ ಚಟರ್ಜಿ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನ ಇಡಿ ಅಧಿಕಾರಿಗಳ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿರುವ ಚಟರ್ಜಿ, ಸಚಿವ ಸ್ಥಾನಕ್ಕೆ ನಾನು ಏಕೆ ರಾಜೀನಾಮೆ ನೀಡಬೇಕು? ಎಂದು ಪ್ರಶ್ನೆ ಸಹ ಮಾಡಿದ್ದರು.

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಸಚಿವ ಪಾರ್ಥ ಚಟರ್ಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಾರ್ಥ ಚಟರ್ಜಿ ಅವರನ್ನ ಸಚಿವ ಸ್ಥಾನದಿಂದ ತೆಗೆದು ಹಾಕಿದ್ದೇನೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಈ ಹಿಂದೆ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದ ಪಾರ್ಥ ಚಟರ್ಜಿ ಸದ್ಯ ದೀದಿ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿರುವ ಕಾರಣ ಪಕ್ಷದ ಹಾಗೂ ಸಚಿವಾಲಯದ ಎಲ್ಲ ಹುದ್ದೆಗಳಿಂದ ವಜಾಗೊಳಿಸಲಾಗಿದೆ.

  • #SSCRecruitmentScam | I have removed Partha Chatterjee as a minister. My party takes strict action. There are many plannings behind it but I don't want to go into details: West Bengal CM Mamata Banerjee

    (File photo) pic.twitter.com/tRZbsYUDI8

    — ANI (@ANI) July 28, 2022 " class="align-text-top noRightClick twitterSection" data=" ">

ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ನಿವಾಸದಲ್ಲಿ ಬರೋಬ್ಬರಿ 21 ಕೋಟಿ ಹಣ ವಶಕ್ಕೆ ಪಡೆದುಕೊಂಡಿದ್ದ ಇಡಿ ಅಧಿಕಾರಿಗಳು ನಿನ್ನೆ ಮತ್ತೊಂದು ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಯ 27 ಕೋಟಿ ರೂ. ನಗದು ಹಾಗೂ 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದಲ್ಲಿ ಅವರ ಕೈವಾಡ ಇರುವುದು ಸಾಬೀತುಗೊಳ್ಳುತ್ತಿದ್ದಂತೆ ಪಾರ್ಥ ಚಟರ್ಜಿ ಅವರನ್ನ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ದೊಡ್ಡ ಮಟ್ಟದ ಕೂಗು ಕೇಳಿ ಬಂದಿತ್ತು.

ಇದನ್ನೂ ಓದಿರಿ: ಅರ್ಪಿತಾ ಮುಖರ್ಜಿ ನಿವಾಸದಲ್ಲಿ ಮತ್ತೆ ₹15 ಕೋಟಿ ನಗದು ಪತ್ತೆ.. ಮುಂದುವರಿದ ಎಣಿಕೆ ಕಾರ್ಯ

ಪಾರ್ಥ ಚಟರ್ಜಿ ಅವರನ್ನು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಕೆಲ ದಿನಗಳ ಹಿಂದೆ ವಿಚಾರಣೆಗೊಳಪಡಿಸಿದ್ದರು. ಈ ವೇಳೆ, ಚಟರ್ಜಿ ಅವರಿಗೆ ಆಪ್ತರಾಗಿರುವ ಅರ್ಪಿತಾ ಮುಖರ್ಜಿ ಅವರ ದಕ್ಷಿಣ ಕೋಲ್ಕತ್ತಾದಲ್ಲಿರುವ ನಿವಾಸದಿಂದ ಇಡಿ ಅಧಿಕಾರಿಗಳು ದಾಖಲೆ ಮಟ್ಟದ ಹಣ ವಶಕ್ಕೆ ಪಡೆದುಕೊಂಡಿದ್ದರು.

ಸಚಿವ ಪಾರ್ಥ ಚಟರ್ಜಿ 10 ದಿನ ಇಡಿ ಕಸ್ಟಡಿಗೆ: ಶಿಕ್ಷಕರ ನೇಮಕಾತಿ ಪ್ರಕರಣದಲ್ಲಿ ಬಂಧನವಾಗಿರುವ ಸಚಿವ ಪಾರ್ಥ ಚಟರ್ಜಿ ಅವರನ್ನ ಕೋಲ್ಕತ್ತಾ ನ್ಯಾಯಾಲಯ 10 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಭುವನೇಶ್ವರದ ಏಮ್ಸ್​​ನಲ್ಲಿ ನಿನ್ನೆ ಚಟರ್ಜಿ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನ ಇಡಿ ಅಧಿಕಾರಿಗಳ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿರುವ ಚಟರ್ಜಿ, ಸಚಿವ ಸ್ಥಾನಕ್ಕೆ ನಾನು ಏಕೆ ರಾಜೀನಾಮೆ ನೀಡಬೇಕು? ಎಂದು ಪ್ರಶ್ನೆ ಸಹ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.