ETV Bharat / bharat

ರಾಷ್ಟ್ರ ರಾಜಧಾನಿ ದೆಹಲಿಗೆ 730 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿದ ಕೇಂದ್ರ ಸರ್ಕಾರ - ಕೇಂದ್ರ ಸರ್ಕಾರ ಮತ್ತು ದೆಹಲಿ ಹೈಕೋರ್ಟ್​

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಮ್ಲಜನಕದ ಅನಿವಾರ್ಯತೆಯೂ ಕೂಡಾ ಅಲ್ಲಿನ ಸೋಂಕಿತರಿಗೆ ತೀವ್ರವಾಗುತ್ತಿದೆ.

Supplied 730 MT oxygen to Delhi on May 5, Centre tells SC
ರಾಷ್ಟ್ರರಾಜಧಾನಿ ದೆಹಲಿಗೆ 730 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿದ ಕೇಂದ್ರ ಸರ್ಕಾರ
author img

By

Published : May 6, 2021, 3:20 PM IST

ನವದೆಹಲಿ: ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್​​ನ ಆದೇಶ ಪಾಲಿಸಿದ್ದು, ಮೇ 4ರಂದು ಸುಮಾರು 700 ಮೆಟ್ರಿಕ್ ಟನ್ ಆಮ್ಲಜನಕವನ್ನು ರಾಷ್ಟ್ರ ರಾಜಧಾನಿ ದೆಹಲಿಗೆ ಪೂರೈಸಿದೆ.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಆಮ್ಲಜನಕ ಪೂರೈಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ.

ಕೆಲವು ದಿನಗಳ ಹಿಂದೆ ದೆಹಲಿಯಲ್ಲಿನ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ, ಕೇಂದ್ರ ಸರ್ಕಾರದ ಅಧಿಕಾರಿಗಳು ಹೈಕೋರ್ಟ್ ನಿರ್ದೇಶನವನ್ನು ಪಾಲನೆ ಮಾಡಿರಲಿಲ್ಲ.

ಇದನ್ನೂ ಓದಿ : ತರಕಾರಿ ಬುಟ್ಟಿಗೆ ಬೂಟುಕಾಲಿಂದ ಒದ್ದು ಪೊಲೀಸ್​ ಅಧಿಕಾರಿ ದರ್ಪ - ವಿಡಿಯೋ ನೋಡಿ

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್​​ ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆ ವಿಚಾರಣೆ ನಡೆಸುತ್ತಿದ್ದು, ಈ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿ, ಆಕ್ಸಿಜನ್ ಪೂರೈಸದಿರಲು ಕಾರಣ ಏನು ಎಂದು ತಿಳಿಸಬೇಕೆಂದು ಗುರುವಾರ ಬೆಳಗ್ಗೆವರೆಗೆ ಅವಕಾಶ ನೀಡಿತ್ತು.

ಇದಕ್ಕೆ ಗುರುವಾರ ಬೆಳಗ್ಗೆ ಉತ್ತರ ನೀಡಿದ ಕೇಂದ್ರ ಸರ್ಕಾರ ಮೇ 4ರಂದು ಅಂದರೆ ಬುಧವಾರ ಸುಮಾರು 700 ಮೆಟ್ರಿಕ್ ಟನ್​​ನಷ್ಟು ಆಮ್ಲಜನಕವನ್ನು ದೆಹಲಿಗೆ ಪೂರೈಸಲಾಗಿದೆ ಎಂದು ಉತ್ತರ ನೀಡಿದೆ.

ನವದೆಹಲಿ: ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್​​ನ ಆದೇಶ ಪಾಲಿಸಿದ್ದು, ಮೇ 4ರಂದು ಸುಮಾರು 700 ಮೆಟ್ರಿಕ್ ಟನ್ ಆಮ್ಲಜನಕವನ್ನು ರಾಷ್ಟ್ರ ರಾಜಧಾನಿ ದೆಹಲಿಗೆ ಪೂರೈಸಿದೆ.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಆಮ್ಲಜನಕ ಪೂರೈಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ.

ಕೆಲವು ದಿನಗಳ ಹಿಂದೆ ದೆಹಲಿಯಲ್ಲಿನ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ, ಕೇಂದ್ರ ಸರ್ಕಾರದ ಅಧಿಕಾರಿಗಳು ಹೈಕೋರ್ಟ್ ನಿರ್ದೇಶನವನ್ನು ಪಾಲನೆ ಮಾಡಿರಲಿಲ್ಲ.

ಇದನ್ನೂ ಓದಿ : ತರಕಾರಿ ಬುಟ್ಟಿಗೆ ಬೂಟುಕಾಲಿಂದ ಒದ್ದು ಪೊಲೀಸ್​ ಅಧಿಕಾರಿ ದರ್ಪ - ವಿಡಿಯೋ ನೋಡಿ

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್​​ ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆ ವಿಚಾರಣೆ ನಡೆಸುತ್ತಿದ್ದು, ಈ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿ, ಆಕ್ಸಿಜನ್ ಪೂರೈಸದಿರಲು ಕಾರಣ ಏನು ಎಂದು ತಿಳಿಸಬೇಕೆಂದು ಗುರುವಾರ ಬೆಳಗ್ಗೆವರೆಗೆ ಅವಕಾಶ ನೀಡಿತ್ತು.

ಇದಕ್ಕೆ ಗುರುವಾರ ಬೆಳಗ್ಗೆ ಉತ್ತರ ನೀಡಿದ ಕೇಂದ್ರ ಸರ್ಕಾರ ಮೇ 4ರಂದು ಅಂದರೆ ಬುಧವಾರ ಸುಮಾರು 700 ಮೆಟ್ರಿಕ್ ಟನ್​​ನಷ್ಟು ಆಮ್ಲಜನಕವನ್ನು ದೆಹಲಿಗೆ ಪೂರೈಸಲಾಗಿದೆ ಎಂದು ಉತ್ತರ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.