ETV Bharat / bharat

ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಕೇವಲ ಮುಸ್ಲಿಂ ಸಮುದಾಯದ ಅಧ್ಯಕ್ಷರ ನೇಮಕ ಪ್ರಶ್ನಿಸಿ ಅರ್ಜಿ: ಸುಪ್ರೀಂ ನೋಟಿಸ್

author img

By

Published : Mar 16, 2022, 1:56 PM IST

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ಮಾಡಿಕೊಳ್ಳುವಾಗ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿ, ಸುಪ್ರೀಂಕೋರ್ಟ್​ಗೆ ಸಲ್ಲಿಕೆ ಮಾಡಲಾದ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ.

Supreme Court  issues notice on a plea challenging  appointment of Chairman of Karnataka state minority commission
ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಕೇವಲ ಮುಸ್ಲಿಂ ಸಮುದಾಯದ ಅಧ್ಯಕ್ಷರ ನೇಮಕ ಪ್ರಶ್ನಿಸಿ ಅರ್ಜಿ ವಿಚಾರಣೆ: ಸುಪ್ರೀಂನಿಂದ ನೋಟಿಸ್

ನವದೆಹಲಿ: ಅಲ್ಪಸಂಖ್ಯಾತ ಸಮುದಾಯಗಳೆಂದರೆ ಮುಸ್ಲಿಂ ಸಮುದಾಯದ ಜೊತೆಗೆ ಸಿಖ್, ಜೈನ್, ಕ್ರೈಸ್ತ, ಬೌದ್ಧ ಸಮುದಾಯಗಳೂ ಕೂಡಾ ಬರುತ್ತವೆ. ಆದರೆ.. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ಮಾಡಿಕೊಳ್ಳುವಾಗ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿ, ಸುಪ್ರೀಂಕೋರ್ಟ್​ಗೆ ಸಲ್ಲಿಕೆ ಮಾಡಲಾದ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ವಿಚಾರದಲ್ಲಿ ಮೊದಲಿನಿಂದಲೂ ಮತ್ತು ಇಲ್ಲಿಯವರೆಗೆ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ನೇಮಕ ಮಾಡಲಾಗುತ್ತಿದೆ. ಬೇರೆ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಆರೋಪಿಸಿ, ಅನಿಲ್ ಆ್ಯಂಟನಿ ಎಂಬುವವರು ಸುಪ್ರೀಂಕೋರ್ಟ್​ಗೆ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಈ ಕುರಿತಂತೆ ಅಲ್ಪಸಂಖ್ಯಾತ ಆಯೋಗಕ್ಕೆ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆ ಮುಂದುವರೆಸಿದೆ.

ಇದನ್ನೂ ಓದಿ: 12-14 ವರ್ಷದೊಳಗಿನ ಮಕ್ಕಳ ಲಸಿಕೆಗೆ ಚಾಲನೆ: ಅರ್ಹರೆಲ್ಲರೂ ಲಸಿಕೆ ಪಡೆಯಲು ಪ್ರಧಾನಿ ಮನವಿ

ನವದೆಹಲಿ: ಅಲ್ಪಸಂಖ್ಯಾತ ಸಮುದಾಯಗಳೆಂದರೆ ಮುಸ್ಲಿಂ ಸಮುದಾಯದ ಜೊತೆಗೆ ಸಿಖ್, ಜೈನ್, ಕ್ರೈಸ್ತ, ಬೌದ್ಧ ಸಮುದಾಯಗಳೂ ಕೂಡಾ ಬರುತ್ತವೆ. ಆದರೆ.. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ಮಾಡಿಕೊಳ್ಳುವಾಗ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿ, ಸುಪ್ರೀಂಕೋರ್ಟ್​ಗೆ ಸಲ್ಲಿಕೆ ಮಾಡಲಾದ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ನೇಮಕ ವಿಚಾರದಲ್ಲಿ ಮೊದಲಿನಿಂದಲೂ ಮತ್ತು ಇಲ್ಲಿಯವರೆಗೆ ಕೇವಲ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ನೇಮಕ ಮಾಡಲಾಗುತ್ತಿದೆ. ಬೇರೆ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಆರೋಪಿಸಿ, ಅನಿಲ್ ಆ್ಯಂಟನಿ ಎಂಬುವವರು ಸುಪ್ರೀಂಕೋರ್ಟ್​ಗೆ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಈ ಕುರಿತಂತೆ ಅಲ್ಪಸಂಖ್ಯಾತ ಆಯೋಗಕ್ಕೆ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆ ಮುಂದುವರೆಸಿದೆ.

ಇದನ್ನೂ ಓದಿ: 12-14 ವರ್ಷದೊಳಗಿನ ಮಕ್ಕಳ ಲಸಿಕೆಗೆ ಚಾಲನೆ: ಅರ್ಹರೆಲ್ಲರೂ ಲಸಿಕೆ ಪಡೆಯಲು ಪ್ರಧಾನಿ ಮನವಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.