ನವದೆಹಲಿ: ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸುವ ವಿಚಾರವಾಗಿ ಅಭಿಪ್ರಾಯ ತಿಳಿಸುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರಿಂ ಕೋರ್ಟ್ನಲ್ಲಿ ನಡೆಯಿತು. ಈ ಕುರಿತು ಉತ್ತರ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್ ನೀಡಿದೆ.
ಒಂದು ಚುನಾವಣೆಯನ್ನು ಉಲ್ಲೇಖಿಸಿ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಈ ಅರ್ಜಿ ಸಲ್ಲಿಸಿದ್ದರು. ಚುನಾವಣೆ ವೇಳೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳಿಗಿಂತ ನೋಟಾಗೆ ಹೆಚ್ಚು ಮತ ಬಿದ್ದರೆ ಆ ಚುನಾವಣೆಯನ್ನು ರದ್ದುಗೊಳಿಸ ಬೇಕೆಂದು ಕೋರಿದ್ದರು.
ಬಳಿಕ ಆ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು. ಈ ಸಂದರ್ಭದಲ್ಲಿ ಮೊದಲು ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮರುಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.