ETV Bharat / bharat

ಅನುಮಾನಾಸ್ಪದ ರೀತಿಯಲ್ಲಿ ಒಂದೇ ಕುಟುಂಬದ ಮೂವರ ಸಾವು: ಆತ್ಮಹತ್ಯೆ ಶಂಕೆ - ಅನುಮಾನಾಸ್ಪದ ರೀತಿಯಲ್ಲಿ ಕುಟುಂಬ ಸಾವು

ಅನುಮಾನಾಸ್ಟದ ರೀತಿಯಲ್ಲಿ ಕುಟುಂಬವೊಂದು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ರಾಜ್ಯದ ಬೊಕಾರೊದಲ್ಲಿ ಜರುಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.

suspicious-death
ಕುಟುಂಬ ಸಾವು
author img

By

Published : Dec 16, 2021, 6:01 PM IST

ಬೊಕಾರೊ (ಜಾರ್ಖಂಡ್) : ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನವಾಡಿಹ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ಮಡುಗಟ್ಟಿದೆ.

ಅನುಮಾನಾಸ್ಪದ ರೀತಿಯಲ್ಲಿ ಕುಟುಂಬ ಸಾವು

ನವಾಡಿಹ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋಬರ್ಗಡ್ಡಾ ನಿವಾಸಿ ಬಿಸಿಸಿಎಲ್ ಉದ್ಯೋಗಿ ಶುಕರ್ ಧೋಬಿ, ಆತನ ಎರಡನೇ ಪತ್ನಿ ಗೌರಿ ದೇವಿ ಮತ್ತು 14 ವರ್ಷದ ಮಗ ಅಭಿಷೇಕ್ ಕುಮಾರ್ ಮೃತರು.

ಬುಧವಾರ ರಾತ್ರಿ ಇಡೀ ಕುಟುಂಬ ಊಟ ಮುಗಿಸಿ ಕೋಣೆಯಲ್ಲಿ ಮಲಗಿದ್ದರು. ಇಂದು ಬೆಳಗ್ಗೆ ಹಾಲು ಹಾಕುವ ಯುವಕ ಮನೆಗೆ ಬಂದು ಬಾಗಿಲು ತಟ್ಟಿದರೂ ಯಾರೂ ಉತ್ತರಿಸಲಿಲ್ಲ. ನಂತರ ಶುಕರ್ ಧೋಬಿ ಅವರ ಮೊದಲ ಪತ್ನಿಯ ಮಗ ರಾಜು ಧೋಬಿ ಅವರಿಗೆ ಮಾಹಿತಿ ನೀಡಲಾಯಿತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರಾಜು ಧೋಬಿ, ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಕುಟುಂಬದ ಮೂವರೂ ಶವವಾಗಿ ಪತ್ತೆಯಾಗಿದ್ದಾರೆ. ಅಭಿಷೇಕ್​ನ ಬಾಯಿಂದ ನೊರೆ ಬರುತ್ತಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಹಾರದಲ್ಲಿ ವಿಷ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ. ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಬೊಕಾರೊ (ಜಾರ್ಖಂಡ್) : ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನವಾಡಿಹ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ಮಡುಗಟ್ಟಿದೆ.

ಅನುಮಾನಾಸ್ಪದ ರೀತಿಯಲ್ಲಿ ಕುಟುಂಬ ಸಾವು

ನವಾಡಿಹ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋಬರ್ಗಡ್ಡಾ ನಿವಾಸಿ ಬಿಸಿಸಿಎಲ್ ಉದ್ಯೋಗಿ ಶುಕರ್ ಧೋಬಿ, ಆತನ ಎರಡನೇ ಪತ್ನಿ ಗೌರಿ ದೇವಿ ಮತ್ತು 14 ವರ್ಷದ ಮಗ ಅಭಿಷೇಕ್ ಕುಮಾರ್ ಮೃತರು.

ಬುಧವಾರ ರಾತ್ರಿ ಇಡೀ ಕುಟುಂಬ ಊಟ ಮುಗಿಸಿ ಕೋಣೆಯಲ್ಲಿ ಮಲಗಿದ್ದರು. ಇಂದು ಬೆಳಗ್ಗೆ ಹಾಲು ಹಾಕುವ ಯುವಕ ಮನೆಗೆ ಬಂದು ಬಾಗಿಲು ತಟ್ಟಿದರೂ ಯಾರೂ ಉತ್ತರಿಸಲಿಲ್ಲ. ನಂತರ ಶುಕರ್ ಧೋಬಿ ಅವರ ಮೊದಲ ಪತ್ನಿಯ ಮಗ ರಾಜು ಧೋಬಿ ಅವರಿಗೆ ಮಾಹಿತಿ ನೀಡಲಾಯಿತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರಾಜು ಧೋಬಿ, ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಕುಟುಂಬದ ಮೂವರೂ ಶವವಾಗಿ ಪತ್ತೆಯಾಗಿದ್ದಾರೆ. ಅಭಿಷೇಕ್​ನ ಬಾಯಿಂದ ನೊರೆ ಬರುತ್ತಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಹಾರದಲ್ಲಿ ವಿಷ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ. ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.