ಚೆನ್ನೈ: ತಮಿಳುನಾಡಲ್ಲಿ ವಿಧಾನಸಭೆ ಚುನಾವಣೆ ಮುಂಬರಲಿದ್ದು, ಸರ್ಕಾರಿ ನೌಕರರು, ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಉಡುಗೊರೆ ನೀಡಿದೆ.
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಇಂದು ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 59 ರಿಂದ 60ಕ್ಕೆ ಏರಿಕೆ ಮಾಡಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.42ಕ್ಕೆ ಇಳಿಕೆ.. 1.26 ಲಕ್ಷ ಮಂದಿಗೆ ಲಸಿಕೆ
ಅಲ್ಲದೇ 9, 10 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಿ, ಮುಂದಿನ ತರಗತಿಗಳಿಗೆ ಸರ್ಕಾರ ನೇರಪ್ರವೇಶದ ಅವಕಾಶ ಕಲ್ಪಿಸಿದೆ. ಕೊರೊನಾ ದೃಷ್ಟಿಯಿಂದ ಪರೀಕ್ಷೆ ಬರೆಯದೇ ಈ ಮೂರು ತರಗತಿಗಳ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.