ETV Bharat / bharat

ತಮಿಳುನಾಡಿನಲ್ಲಿ ಐತಿಹಾಸಿಕ ಕೃಷಿ ಬಜೆಟ್ ಮಂಡನೆ.. ಅನ್ನದಾತರಿಗೆ 34,220.65 ಕೋಟಿ ರೂ. ಮೀಸಲು!

author img

By

Published : Aug 14, 2021, 5:13 PM IST

ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡನೆ ಮಾಡಿದ್ದು, ಅನೇಕ ಮಹತ್ವದ ಯೋಜನೆ ಘೋಷಣೆ ಮಾಡಿದೆ.

budget for agriculture
budget for agriculture

ಚೆನ್ನೈ(ತಮಿಳುನಾಡು): ತಮಿಳುನಾಡಿನಲ್ಲಿ ಹೊಸದಾಗಿ ಸರ್ಕಾರ ರಚನೆ ಮಾಡಿರುವ ಸ್ಟಾಲಿನ್​ ನೇತೃತ್ವದ ಡಿಎಂಕೆ ಇದೇ ಮೊದಲ ಸಲ ಕೃಷಿ ಬಜೆಟ್ ಮಂಡನೆ ಮಾಡಿದೆ. ಅನ್ನದಾತರ ಹಿತರಕ್ಷಣೆ ಹಾಗೂ ಕೃಷಿ ವಲಯದಲ್ಲಿ ಮತ್ತಷ್ಟು ಅಭಿವೃದ್ಧಿ ತರುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ತಮಿಳುನಾಡು ಕೃಷಿ ಸಚಿವ ಎಂಆರ್​ಕೆ ಪನ್ನಿರಸೇಲ್ವಂ ಬಜೆಟ್ ಮಂಡನೆ ಮಾಡಿದ್ದು, 2021-22ನೇ ಸಾಲಿನ ಬಜೆಟ್​ನಲ್ಲಿ ಕೃಷಿಗಾಗಿ Rs.34,220.65 ಕೋಟಿ ರೂ. ಮೀಸಲು ಇಟ್ಟಿದ್ದಾರೆ. ಪ್ರಮುಖವಾಗಿ ಪಶುಸಂಗೋಪನೆ, ಮೀನುಗಾರಿಕೆ, ಹೈನುಗಾರಿಕೆ ಅಭಿವೃದ್ಧಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ರೇಷ್ಮೆ ಕೃಷಿ ಮತ್ತು ಅರಣ್ಯ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

  • Tamil Nadu Agriculture &Farmers Welfare Min MRK Panneerselvam presented 1st-ever exclusive budget for agriculture in Assembly earlier today.

    I dedicate this budget to protesting farmers in Delhi. Cultivation area in TN to be increased from 60%to75%(11.75 lakh hectares), he said pic.twitter.com/OwFakzRK1V

    — ANI (@ANI) August 14, 2021 " class="align-text-top noRightClick twitterSection" data=" ">

Tamil Nadu Agriculture &Farmers Welfare Min MRK Panneerselvam presented 1st-ever exclusive budget for agriculture in Assembly earlier today.

I dedicate this budget to protesting farmers in Delhi. Cultivation area in TN to be increased from 60%to75%(11.75 lakh hectares), he said pic.twitter.com/OwFakzRK1V

— ANI (@ANI) August 14, 2021

4,508.23 ಕೋಟಿ ರೂ. ರೈತರ ವಿದ್ಯುತ್ ಬಳಕೆಗೋಸ್ಕರ ವಿನಯೋಗ ಮಾಡಲಾಗುವುದು ಎಂದು ತಿಳಿಸಿರುವ ಸಚಿವರು, ರೈತರು ಬಳಕೆ ಮಾಡುವ ಪಂಪ್​ಸೆಟ್​ಗಳಿಗೆ ಉಚಿತವಾಗಿ ವಿದ್ಯುತ್​ ನೀಡುವುದಾಗಿ ತಿಳಿಸಿದ್ದಾರೆ.​ 1,245. 45 ಕೋಟಿ ರೂ. ಕೃಷಿ ಇಲಾಖೆ ಅಭಿವೃದ್ಧಿಗೆ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಯೋಜನೆಗಳಿಗೆ ಈಗಾಗಲೇ ಸ್ಟಾಲಿನ್ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಇಂದಿನ ಬಜೆಟ್​ ಕೂಡ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಅರ್ಪಣೆ ಮಾಡಿದೆ.

ಇದನ್ನೂ ಓದಿರಿ: ಅಬಕಾರಿ ಸುಂಕ ಕಡಿತ : ತಮಿಳುನಾಡಿನಲ್ಲಿ 100 ಗಡಿಯಿಂದ ಕೆಳಗಿಳಿದ ಪೆಟ್ರೋಲ್ ದರ

ಕೃಷಿ ಬಜೆಟ್​ನಲ್ಲಿ ಪ್ರಮುಖವಾಗಿ 16 ಅಂಶಗಳ ಮೇಲೆ ಕೆಲಸ ಮಾಡಲು ನಿರ್ಧರಿಸಲಾಗಿದ್ದು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಮುಂದಾಗಿರುವುದಾಗಿ ತಿಳಿಸಿದರು. ಜೊತೆಗೆ ಕೃಷಿ ವಲಯದತ್ತ ಯುವಕರನ್ನ ಸೆಳೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು. ನಿನ್ನೆ ಬಜೆಟ್ ಮಂಡನೆ ಮಾಡಿದ್ದ ಸ್ಟಾಲಿನ್​ ಸರ್ಕಾರ ಪೆಟ್ರೋಲ್​ ಮೇಲಿನ ಅಬಕಾರಿ ಸುಂಕ 3 ರೂಪಾಯಿ ಕಡಿತಗೊಳಿಸುವುದಾಗಿ ತಿಳಿಸಿದೆ.

ಚೆನ್ನೈ(ತಮಿಳುನಾಡು): ತಮಿಳುನಾಡಿನಲ್ಲಿ ಹೊಸದಾಗಿ ಸರ್ಕಾರ ರಚನೆ ಮಾಡಿರುವ ಸ್ಟಾಲಿನ್​ ನೇತೃತ್ವದ ಡಿಎಂಕೆ ಇದೇ ಮೊದಲ ಸಲ ಕೃಷಿ ಬಜೆಟ್ ಮಂಡನೆ ಮಾಡಿದೆ. ಅನ್ನದಾತರ ಹಿತರಕ್ಷಣೆ ಹಾಗೂ ಕೃಷಿ ವಲಯದಲ್ಲಿ ಮತ್ತಷ್ಟು ಅಭಿವೃದ್ಧಿ ತರುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ತಮಿಳುನಾಡು ಕೃಷಿ ಸಚಿವ ಎಂಆರ್​ಕೆ ಪನ್ನಿರಸೇಲ್ವಂ ಬಜೆಟ್ ಮಂಡನೆ ಮಾಡಿದ್ದು, 2021-22ನೇ ಸಾಲಿನ ಬಜೆಟ್​ನಲ್ಲಿ ಕೃಷಿಗಾಗಿ Rs.34,220.65 ಕೋಟಿ ರೂ. ಮೀಸಲು ಇಟ್ಟಿದ್ದಾರೆ. ಪ್ರಮುಖವಾಗಿ ಪಶುಸಂಗೋಪನೆ, ಮೀನುಗಾರಿಕೆ, ಹೈನುಗಾರಿಕೆ ಅಭಿವೃದ್ಧಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ರೇಷ್ಮೆ ಕೃಷಿ ಮತ್ತು ಅರಣ್ಯ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

  • Tamil Nadu Agriculture &Farmers Welfare Min MRK Panneerselvam presented 1st-ever exclusive budget for agriculture in Assembly earlier today.

    I dedicate this budget to protesting farmers in Delhi. Cultivation area in TN to be increased from 60%to75%(11.75 lakh hectares), he said pic.twitter.com/OwFakzRK1V

    — ANI (@ANI) August 14, 2021 " class="align-text-top noRightClick twitterSection" data=" ">

4,508.23 ಕೋಟಿ ರೂ. ರೈತರ ವಿದ್ಯುತ್ ಬಳಕೆಗೋಸ್ಕರ ವಿನಯೋಗ ಮಾಡಲಾಗುವುದು ಎಂದು ತಿಳಿಸಿರುವ ಸಚಿವರು, ರೈತರು ಬಳಕೆ ಮಾಡುವ ಪಂಪ್​ಸೆಟ್​ಗಳಿಗೆ ಉಚಿತವಾಗಿ ವಿದ್ಯುತ್​ ನೀಡುವುದಾಗಿ ತಿಳಿಸಿದ್ದಾರೆ.​ 1,245. 45 ಕೋಟಿ ರೂ. ಕೃಷಿ ಇಲಾಖೆ ಅಭಿವೃದ್ಧಿಗೆ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಯೋಜನೆಗಳಿಗೆ ಈಗಾಗಲೇ ಸ್ಟಾಲಿನ್ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಇಂದಿನ ಬಜೆಟ್​ ಕೂಡ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಅರ್ಪಣೆ ಮಾಡಿದೆ.

ಇದನ್ನೂ ಓದಿರಿ: ಅಬಕಾರಿ ಸುಂಕ ಕಡಿತ : ತಮಿಳುನಾಡಿನಲ್ಲಿ 100 ಗಡಿಯಿಂದ ಕೆಳಗಿಳಿದ ಪೆಟ್ರೋಲ್ ದರ

ಕೃಷಿ ಬಜೆಟ್​ನಲ್ಲಿ ಪ್ರಮುಖವಾಗಿ 16 ಅಂಶಗಳ ಮೇಲೆ ಕೆಲಸ ಮಾಡಲು ನಿರ್ಧರಿಸಲಾಗಿದ್ದು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಮುಂದಾಗಿರುವುದಾಗಿ ತಿಳಿಸಿದರು. ಜೊತೆಗೆ ಕೃಷಿ ವಲಯದತ್ತ ಯುವಕರನ್ನ ಸೆಳೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು. ನಿನ್ನೆ ಬಜೆಟ್ ಮಂಡನೆ ಮಾಡಿದ್ದ ಸ್ಟಾಲಿನ್​ ಸರ್ಕಾರ ಪೆಟ್ರೋಲ್​ ಮೇಲಿನ ಅಬಕಾರಿ ಸುಂಕ 3 ರೂಪಾಯಿ ಕಡಿತಗೊಳಿಸುವುದಾಗಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.