ETV Bharat / bharat

ಸರ್ಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಯತ್ನ; ಶಿಕ್ಷಕ ಅಮಾನತು

author img

By

Published : Apr 13, 2022, 5:16 PM IST

Updated : Apr 13, 2022, 5:26 PM IST

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೊಲಿಗೆ ವಿಷಯದ ಸಂಬಂಧ ಪಾಠ ಹೇಳುವ ಬದಲು ಶಿಕ್ಷಕರೊಬ್ಬರು ಕ್ರಿಶ್ಚಿಯನ್​ ಪ್ರಾರ್ಥನೆ ಓದಿಸುವ ಚಟುವಟಿಕೆಯಲ್ಲಿ ನಿರತರಾಗಿದ್ದರು. ಈ ವಿಷಯವನ್ನು ವಿದ್ಯಾರ್ಥಿಗಳು ಪೋಷಕರ ಗಮನಕ್ಕೆ ತಂದಿದ್ದಾರೆ. ಬಳಿಕ ಕ್ರಮ ಕೈಗೊಳ್ಳಲಾಗಿದೆ.

Teacher Suspended for trying to religion convert school children
Teacher Suspended for trying to religion convert school children

ಕನ್ಯಾಕುಮಾರಿ(ತಮಿಳುನಾಡು): ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಯತ್ನ; ಶಿಕ್ಷಕ ಅಮಾನತು

ಕನ್ನಟ್ಟುವಿಲೈ ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡ್ತಿದ್ದಾರೆ. ಇಲ್ಲಿ ಹೊಲಿಗೆ ವಿಷಯದ ಕುರಿತಾಗಿ ಪಾಠ ಮಾಡುವ ಶಿಕ್ಷಕ ತಮ್ಮ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್​ ಪ್ರಾರ್ಥನೆ ಓದುವಂತೆ ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸೋನಂ ನಿವಾಸದಲ್ಲಿ ₹2.4 ಕೋಟಿ ನಗದು, ಆಭರಣ ಕಳವು; ಮಹಿಳಾ ನರ್ಸ್​ ಬಂಧನ

ವಿದ್ಯಾರ್ಥಿಗಳಿಗೆ ಹೊಲಿಗೆ ಸಂಬಂಧ ಪಾಠ ಹೇಳುವ ಬದಲು ಕ್ರಿಶ್ಚಿಯನ್​ ಪ್ರಾರ್ಥನೆ ಓದಿಸುವ ಚಟುವಟಿಕೆಯಲ್ಲಿ ನಿರತರರಾಗಿದ್ದು, ಈ ವಿಷಯವನ್ನು ವಿದ್ಯಾರ್ಥಿಗಳು ಪೋಷಕರ ಗಮನಕ್ಕೆ ತಂದಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೂ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಮುಖ್ಯೋಪಾಧ್ಯಾಯರಿಗೂ ದೂರು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

ಕನ್ಯಾಕುಮಾರಿ(ತಮಿಳುನಾಡು): ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಯತ್ನ; ಶಿಕ್ಷಕ ಅಮಾನತು

ಕನ್ನಟ್ಟುವಿಲೈ ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡ್ತಿದ್ದಾರೆ. ಇಲ್ಲಿ ಹೊಲಿಗೆ ವಿಷಯದ ಕುರಿತಾಗಿ ಪಾಠ ಮಾಡುವ ಶಿಕ್ಷಕ ತಮ್ಮ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್​ ಪ್ರಾರ್ಥನೆ ಓದುವಂತೆ ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸೋನಂ ನಿವಾಸದಲ್ಲಿ ₹2.4 ಕೋಟಿ ನಗದು, ಆಭರಣ ಕಳವು; ಮಹಿಳಾ ನರ್ಸ್​ ಬಂಧನ

ವಿದ್ಯಾರ್ಥಿಗಳಿಗೆ ಹೊಲಿಗೆ ಸಂಬಂಧ ಪಾಠ ಹೇಳುವ ಬದಲು ಕ್ರಿಶ್ಚಿಯನ್​ ಪ್ರಾರ್ಥನೆ ಓದಿಸುವ ಚಟುವಟಿಕೆಯಲ್ಲಿ ನಿರತರರಾಗಿದ್ದು, ಈ ವಿಷಯವನ್ನು ವಿದ್ಯಾರ್ಥಿಗಳು ಪೋಷಕರ ಗಮನಕ್ಕೆ ತಂದಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೂ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಮುಖ್ಯೋಪಾಧ್ಯಾಯರಿಗೂ ದೂರು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

Last Updated : Apr 13, 2022, 5:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.