ETV Bharat / bharat

₹400ಗೆ ಸಿಲಿಂಡರ್,​ ಮಹಿಳೆಯರಿಗೆ ಮಾಸಿಕ ₹3 ಸಾವಿರ: ಭರ್ಜರಿ ಚುನಾವಣಾ ಪ್ರಣಾಳಿಕೆ ಪ್ರಕಟಿಸಿದ ತೆಲಂಗಾಣ ಸಿಎಂ ಕೆಸಿಆರ್‌

author img

By ETV Bharat Karnataka Team

Published : Oct 15, 2023, 5:43 PM IST

ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಬಿಆರ್​ಎಸ್​ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಹಲವಾರು ಭರವಸೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು.

ಬಿಆರ್​ಎಸ್​ ಚುನಾವಣಾ ಪ್ರಣಾಳಿಕೆ
ಬಿಆರ್​ಎಸ್​ ಚುನಾವಣಾ ಪ್ರಣಾಳಿಕೆ

ಹೈದರಾಬಾದ್ : '400 ರೂಪಾಯಿಗೆ ಅಡುಗೆ ಅನಿಲ ಸಿಲಿಂಡರ್​​, ಪ್ರತಿ ಮಹಿಳೆಗೆ 3 ಸಾವಿರ ರೂ, ಬಿಪಿಎಲ್​ ಕುಟುಂಬಕ್ಕೆ 5 ಲಕ್ಷದ ವಿಮೆ, ಪಿಂಚಣಿ ಹೆಚ್ಚಳ..' ಮುಂದಿನ ತಿಂಗಳು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಹಂಬಲದಲ್ಲಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್​ಎಸ್​) ಮತದಾರರಿಗೆ ಈ ಎಲ್ಲಾ ಭರವಸೆಗಳನ್ನು ಘೋಷಿಸಿದೆ.

ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಕಳೆದ ವಾರ ಕಾಂಗ್ರೆಸ್​ ಘೋಷಿಸಿದ ಭರವಸೆಗಳನ್ನು ಮೀರಿಸುವ ಆಶ್ವಾಸನೆಗಳನ್ನು ಪ್ರಕಟಿಸಿದರು.

  • పేదలు, రైతులు, మహిళల సంక్షేమమే లక్ష్యంగా బీఆర్ఎస్ ఎన్నికల మ్యానిఫెస్టో

    🟣ఆరోగ్యశ్రీ గరిష్ఠ పరిమితి ₹15 లక్షలకు పెంపు

    🟣సౌభాగ్యలక్ష్మి పథకం కింద అర్హులైన పేద మహిళలకు ప్రతి నెల రూ.3 వేల చొప్పున భృతి

    🟣అర్హులైన పేదలతో పాటు అక్రిడేషన్‌ ఉన్న ప్రతి జర్నలిస్టులకు రూ.400కే గ్యాస్… pic.twitter.com/l2MpO5UrT6

    — BRS Party (@BRSparty) October 15, 2023 " class="align-text-top noRightClick twitterSection" data=" ">

ಮಹಿಳಾ ಕೇಂದ್ರಿತ ಆಶ್ವಾಸನೆ: ರಾಜಕೀಯ ಪಕ್ಷಗಳು ಮಹಿಳಾ ಕೇಂದ್ರಿತ ಭರವಸೆಗಳನ್ನು ಪ್ರಕಟಿಸುತ್ತಿದ್ದು, ಬಿಆರ್​ಎಸ್​ ಕೂಡ ಅದನ್ನೇ ಅನುಸರಿಸಿದೆ. ಸೌಭಾಗ್ಯ ಲಕ್ಷ್ಮಿ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮಹಿಳೆಯರಿಗೆ ಮಾಸಿಕ 3 ಸಾವಿರ ರೂಪಾಯಿ ಆರ್ಥಿಕ ನೆರವು, 400 ರೂ.ಗೆ ಅಡುಗೆ ಅನಿಲ ಸಿಲಿಂಡರ್, ಆಸರೆ ಪಿಂಚಣಿ ಯೋಜನೆಯಡಿ ವಿವಿಧ ವರ್ಗದ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಿಸಲಾಗುವುದು ಎಂದು ಹೇಳಿದೆ.

2024 ರ ಮಾರ್ಚ್ ನಂತರ ಪಿಂಚಣಿ ಮೊತ್ತವನ್ನು ಪ್ರಸ್ತುತ ಇರುವ 2016 ರೂಪಾಯಿಯಿಂದ 3,016 ರೂ.ಗೆ ಹೆಚ್ಚಳ, ಜೊತೆಗೆ ಪ್ರತಿ ವರ್ಷವೂ ಏರಿಕೆ ಮಾಡುತ್ತಾ ಐದು ವರ್ಷದೊಳಗೆ ಅದನ್ನು 5,000 ರೂ.ಗೆ ಏರಿಸಲಾಗುವುದು ಎಂದಿದೆ.

ದೈಹಿಕ ವಿಶೇಷಚೇತನರಿಗೆ ಮುಂದಿನ ಐದು ವರ್ಷಗಳಲ್ಲಿ ಪಿಂಚಣಿಯನ್ನು ಸದ್ಯ ಇರುವ 4,016 ರಿಂದ ರೂ 6,016 ಕ್ಕೆ ಹೆಚ್ಚಳ. ಪ್ರತಿ ವರ್ಷ 300 ರೂ.ನಂತೆ ಏರಿಸಲಾಗುವುದು. ಬಿಪಿಎಲ್ ಪಡಿತರ ಚೀಟಿ ಹೊಂದಿರುವ 93 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲು ‘ಕೆಸಿಆರ್ ವಿಮಾ’ ಯೋಜನೆ ಜಾರಿ ಮಾಡಲಾಗುವುದು. ಅದರಲ್ಲಿ ಪ್ರತಿ ಕುಟುಂಬಕ್ಕೆ 5 ಲಕ್ಷ ವಿಮೆ ನೀಡಲಾಗುವುದು. ಸರ್ಕಾರವೇ ಎಲ್‌ಐಸಿ 3,600 ರಿಂದ 4,000 ರೂ ಪ್ರೀಮಿಯಂ ಪಾವತಿಸುತ್ತದೆ ಎಂದು ಭರವಸೆಯಲ್ಲಿದೆ.

ಪ್ರಣಾಳಿಕೆಯಲ್ಲಿರುವ ಇತರೆ ಆಶ್ವಾಸನೆಗಳಿವು:

  • ರೈತು ಬಂಧು ಯೋಜನೆಯಡಿ ರೈತರಿಗೆ ವರ್ಷಕ್ಕೆ 10 ಸಾವಿರದಿಂದ 15 ಸಾವಿರ ರೂಪಾಯಿ ನೆರವು. ಮೊದಲ ವರ್ಷವೇ ಈ ಮೊತ್ತ 12 ಸಾವಿರಕ್ಕೆ ಹೆಚ್ಚಳ
  • ಆರೋಗ್ಯಶ್ರೀ ಆರೋಗ್ಯ ವಿಮಾ ಯೋಜನೆಯು 5 ಲಕ್ಷದಿಂದ 15 ಲಕ್ಷಕ್ಕೆ ಏರಿಕೆ
  • ಬಿಪಿಎಲ್ ಕುಟುಂಬಗಳಿಗೆ ಪಡಿತರ ಅಂಗಡಿಗಳ ಮೂಲಕ ಉತ್ತಮ ಅಕ್ಕಿ ಪೂರೈಕೆ
  • ವಸತಿ ರಹಿತ ಬಡವರಿಗೆ ಮನೆ ನಿವೇಶನ
  • ಮೇಲ್ಜಾತಿಯ ಬಡವರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ವಸತಿ ಶಾಲೆ ಸ್ಥಾಪನೆ
  • ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ನೀತಿ ಮರುಜಾರಿಗೆ ಅಧಿಕಾರಿಗಳ ಸಮಿತಿ ರಚನೆ
  • ಅನಾಥ ಮಕ್ಕಳಿಗಾಗಿ ವಿಶೇಷ ನೀತಿ

ಇದನ್ನೂ ಓದಿ: 'ಪರ್ಸಂಟೇಜ್ ಪಟಾಲಂ' ಕಸಕ್ಕೂ ಬಾಯಿ ಹಾಕಿದೆ; ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ: ಕುಮಾರಸ್ವಾಮಿ

ಹೈದರಾಬಾದ್ : '400 ರೂಪಾಯಿಗೆ ಅಡುಗೆ ಅನಿಲ ಸಿಲಿಂಡರ್​​, ಪ್ರತಿ ಮಹಿಳೆಗೆ 3 ಸಾವಿರ ರೂ, ಬಿಪಿಎಲ್​ ಕುಟುಂಬಕ್ಕೆ 5 ಲಕ್ಷದ ವಿಮೆ, ಪಿಂಚಣಿ ಹೆಚ್ಚಳ..' ಮುಂದಿನ ತಿಂಗಳು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಹಂಬಲದಲ್ಲಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್​ಎಸ್​) ಮತದಾರರಿಗೆ ಈ ಎಲ್ಲಾ ಭರವಸೆಗಳನ್ನು ಘೋಷಿಸಿದೆ.

ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಕಳೆದ ವಾರ ಕಾಂಗ್ರೆಸ್​ ಘೋಷಿಸಿದ ಭರವಸೆಗಳನ್ನು ಮೀರಿಸುವ ಆಶ್ವಾಸನೆಗಳನ್ನು ಪ್ರಕಟಿಸಿದರು.

  • పేదలు, రైతులు, మహిళల సంక్షేమమే లక్ష్యంగా బీఆర్ఎస్ ఎన్నికల మ్యానిఫెస్టో

    🟣ఆరోగ్యశ్రీ గరిష్ఠ పరిమితి ₹15 లక్షలకు పెంపు

    🟣సౌభాగ్యలక్ష్మి పథకం కింద అర్హులైన పేద మహిళలకు ప్రతి నెల రూ.3 వేల చొప్పున భృతి

    🟣అర్హులైన పేదలతో పాటు అక్రిడేషన్‌ ఉన్న ప్రతి జర్నలిస్టులకు రూ.400కే గ్యాస్… pic.twitter.com/l2MpO5UrT6

    — BRS Party (@BRSparty) October 15, 2023 " class="align-text-top noRightClick twitterSection" data=" ">

ಮಹಿಳಾ ಕೇಂದ್ರಿತ ಆಶ್ವಾಸನೆ: ರಾಜಕೀಯ ಪಕ್ಷಗಳು ಮಹಿಳಾ ಕೇಂದ್ರಿತ ಭರವಸೆಗಳನ್ನು ಪ್ರಕಟಿಸುತ್ತಿದ್ದು, ಬಿಆರ್​ಎಸ್​ ಕೂಡ ಅದನ್ನೇ ಅನುಸರಿಸಿದೆ. ಸೌಭಾಗ್ಯ ಲಕ್ಷ್ಮಿ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮಹಿಳೆಯರಿಗೆ ಮಾಸಿಕ 3 ಸಾವಿರ ರೂಪಾಯಿ ಆರ್ಥಿಕ ನೆರವು, 400 ರೂ.ಗೆ ಅಡುಗೆ ಅನಿಲ ಸಿಲಿಂಡರ್, ಆಸರೆ ಪಿಂಚಣಿ ಯೋಜನೆಯಡಿ ವಿವಿಧ ವರ್ಗದ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಿಸಲಾಗುವುದು ಎಂದು ಹೇಳಿದೆ.

2024 ರ ಮಾರ್ಚ್ ನಂತರ ಪಿಂಚಣಿ ಮೊತ್ತವನ್ನು ಪ್ರಸ್ತುತ ಇರುವ 2016 ರೂಪಾಯಿಯಿಂದ 3,016 ರೂ.ಗೆ ಹೆಚ್ಚಳ, ಜೊತೆಗೆ ಪ್ರತಿ ವರ್ಷವೂ ಏರಿಕೆ ಮಾಡುತ್ತಾ ಐದು ವರ್ಷದೊಳಗೆ ಅದನ್ನು 5,000 ರೂ.ಗೆ ಏರಿಸಲಾಗುವುದು ಎಂದಿದೆ.

ದೈಹಿಕ ವಿಶೇಷಚೇತನರಿಗೆ ಮುಂದಿನ ಐದು ವರ್ಷಗಳಲ್ಲಿ ಪಿಂಚಣಿಯನ್ನು ಸದ್ಯ ಇರುವ 4,016 ರಿಂದ ರೂ 6,016 ಕ್ಕೆ ಹೆಚ್ಚಳ. ಪ್ರತಿ ವರ್ಷ 300 ರೂ.ನಂತೆ ಏರಿಸಲಾಗುವುದು. ಬಿಪಿಎಲ್ ಪಡಿತರ ಚೀಟಿ ಹೊಂದಿರುವ 93 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲು ‘ಕೆಸಿಆರ್ ವಿಮಾ’ ಯೋಜನೆ ಜಾರಿ ಮಾಡಲಾಗುವುದು. ಅದರಲ್ಲಿ ಪ್ರತಿ ಕುಟುಂಬಕ್ಕೆ 5 ಲಕ್ಷ ವಿಮೆ ನೀಡಲಾಗುವುದು. ಸರ್ಕಾರವೇ ಎಲ್‌ಐಸಿ 3,600 ರಿಂದ 4,000 ರೂ ಪ್ರೀಮಿಯಂ ಪಾವತಿಸುತ್ತದೆ ಎಂದು ಭರವಸೆಯಲ್ಲಿದೆ.

ಪ್ರಣಾಳಿಕೆಯಲ್ಲಿರುವ ಇತರೆ ಆಶ್ವಾಸನೆಗಳಿವು:

  • ರೈತು ಬಂಧು ಯೋಜನೆಯಡಿ ರೈತರಿಗೆ ವರ್ಷಕ್ಕೆ 10 ಸಾವಿರದಿಂದ 15 ಸಾವಿರ ರೂಪಾಯಿ ನೆರವು. ಮೊದಲ ವರ್ಷವೇ ಈ ಮೊತ್ತ 12 ಸಾವಿರಕ್ಕೆ ಹೆಚ್ಚಳ
  • ಆರೋಗ್ಯಶ್ರೀ ಆರೋಗ್ಯ ವಿಮಾ ಯೋಜನೆಯು 5 ಲಕ್ಷದಿಂದ 15 ಲಕ್ಷಕ್ಕೆ ಏರಿಕೆ
  • ಬಿಪಿಎಲ್ ಕುಟುಂಬಗಳಿಗೆ ಪಡಿತರ ಅಂಗಡಿಗಳ ಮೂಲಕ ಉತ್ತಮ ಅಕ್ಕಿ ಪೂರೈಕೆ
  • ವಸತಿ ರಹಿತ ಬಡವರಿಗೆ ಮನೆ ನಿವೇಶನ
  • ಮೇಲ್ಜಾತಿಯ ಬಡವರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ವಸತಿ ಶಾಲೆ ಸ್ಥಾಪನೆ
  • ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ನೀತಿ ಮರುಜಾರಿಗೆ ಅಧಿಕಾರಿಗಳ ಸಮಿತಿ ರಚನೆ
  • ಅನಾಥ ಮಕ್ಕಳಿಗಾಗಿ ವಿಶೇಷ ನೀತಿ

ಇದನ್ನೂ ಓದಿ: 'ಪರ್ಸಂಟೇಜ್ ಪಟಾಲಂ' ಕಸಕ್ಕೂ ಬಾಯಿ ಹಾಕಿದೆ; ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ: ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.