ETV Bharat / bharat

ಇಂದು ಮಧ್ಯಾಹ್ನ ತೆಲಂಗಾಣ ಸಿಎಂ ಆಗಿ ರೇವಂತ್​ ರೆಡ್ಡಿ ಪದಗ್ರಹಣ; ನಾಳೆ ಮಿಜೋರಾಂ ಸಿಎಂ ಅಧಿಕಾರ ಸ್ವೀಕಾರ

author img

By ETV Bharat Karnataka Team

Published : Dec 7, 2023, 6:51 AM IST

Updated : Dec 7, 2023, 9:54 AM IST

ತೆಲಂಗಾಣ ಸಿಎಂ ಪದಗ್ರಹಣ ಕಾರ್ಯಕ್ರಮ ಇಂದು ಮಧ್ಯಾಹ್ನ 1.04 ಗಂಟೆಗೆ ನಡೆಯಲಿದೆ. ಸೋನಿಯಾ, ರಾಹುಲ್​ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ.

ತೆಲಂಗಾಣ ಸಿಎಂ ಆಗಿ ರೇವಂತ್​ ರೆಡ್ಡಿ
ತೆಲಂಗಾಣ ಸಿಎಂ ಆಗಿ ರೇವಂತ್​ ರೆಡ್ಡಿ

ಹೈದರಾಬಾದ್​/ಐಜ್ವಾಲ್​: ತೆಲಂಗಾಣ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ರೇವಂತ್​ ರೆಡ್ಡಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತ ಮಿಜೋರಂ ಚುನಾವಣೆಯಲ್ಲಿ ಆಡಳಿತಾರೂಢ ಎಂಎನ್​ಎಫ್​ ಸೋಲಿಸಿರುವ ಝಡ್​ಪಿಎಂನ ಮುಖ್ಯಸ್ಥ ಲಾಲ್ದುಹೋಮ ಅವರು ಶುಕ್ರವಾರ (ಡಿಸೆಂಬರ್​ 8) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತೆಲಂಗಾಣ ರಚನೆಯಾದ ಬಳಿಕ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಹೊಸ ಹುಮ್ಮಸ್ಸಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. ಎಲ್ ಬಿ ಸ್ಟೇಡಿಯಂನಲ್ಲಿ ಈ ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಸಿಎಂ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಹೈಕಮಾಂಡ್​ಗೆ ವಹಿಸಲಾಗಿತ್ತು. ಮಾತುಕತೆಯ ಬಳಿಕ ಪಿಸಿಸಿ ಅಧ್ಯಕ್ಷರಾಗಿರುವ ರೇವಂತ್​ ರೆಡ್ಡಿ ಅವರ ಹೆಸರನ್ನೇ ಎಲ್ಲರೂ ಅಖೈರುಗೊಳಿಸಿದ್ದರು.

ಡಿ.9ರಂದು ಸೋನಿಯಾ ಗಾಂಧಿ ಅವರ ಜನ್ಮದಿನ ಹಾಗೂ ತೆಲಂಗಾಣ ರಾಜ್ಯವಾಗಿ ಘೋಷಣೆ ಮಾಡಿದ ದಿನದಂದೇ ಕಾಂಗ್ರೆಸ್ ಸರ್ಕಾರ ರಚನೆಗೆ ಪ್ಲಾನ್​ ಮಾಡಲಾಗಿತ್ತು. ಇದನ್ನು ರೇವಂತ್ ರೆಡ್ಡಿ ಚುನಾವಣಾ ಪ್ರಚಾರದ ವೇಳೆ ಹಲವು ಬಾರಿ ಹೇಳಿದ್ದರು. ಆದರೆ, ಕಾರಣಾಂತರಗಳಿಂದ ಎರಡು ದಿನಗಳ ಮೊದಲೇ ನಡೆಸಲಾಗುತ್ತಿದೆ. ಹೀಗಾಗಿ ಗುರುವಾರ ಮಧ್ಯಾಹ್ನ 1:04 ಗಂಟೆಗೆ ರೇವಂತ್ ರೆಡ್ಡಿ ಪ್ರಮಾಣ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲ ಗಣ್ಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಸ್ವತಃ ರೇವಂತ್ ರೆಡ್ಡಿ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್​ ಭೇಟಿಯಾಗಿದ್ದರು. ಇಂಡಿಯಾ ಮೈತ್ರಿಕೂಟದ ನಾಯಕರಿಗೂ ಕರೆಯೋಲೆ ನೀಡಲಾಗಿದೆ.

  • #WATCH | Congress leaders Sonia Gandhi, Rahul Gandhi, Priyanka Gandhi Vadra and Deepender S Hooda at Delhi airport, on their way to Hyderabad to attend the oath-taking ceremony of Revanth Reddy as Telangana CM

    (Video source: Deepender S Hooda) pic.twitter.com/x2X3dGWqru

    — ANI (@ANI) December 7, 2023 " class="align-text-top noRightClick twitterSection" data="

#WATCH | Congress leaders Sonia Gandhi, Rahul Gandhi, Priyanka Gandhi Vadra and Deepender S Hooda at Delhi airport, on their way to Hyderabad to attend the oath-taking ceremony of Revanth Reddy as Telangana CM

(Video source: Deepender S Hooda) pic.twitter.com/x2X3dGWqru

— ANI (@ANI) December 7, 2023 ">

ಸೋನಿಯಾ ಭೇಟಿಯಾಗಿ ಆಹ್ವಾನಿಸಿದ ರೆಡ್ಡಿ: ತೆಲಂಗಾಣ ಮುಖ್ಯಮಂತ್ರಿಯಾಗಿ ನಿಯೋಜಿತವಾಗಿರುವ ರೇವಂತ್ ರೆಡ್ಡಿ ಅವರು ಬುಧವಾರ ದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ, ರಾಹುಲ್​, ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ನಡುವೆ ಸೋನಿಯಾ ಗಾಂಧಿ, ರಾಹುಲ್​ ಹಾಗೂ ಪ್ರಿಯಾಂಕಾ ಗಾಂಧಿ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು, ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದಾರೆ.

ವಿಶೇಷಚೇತನ ಮಹಿಳೆಗೆ ವಿಶೇಷ ಆಹ್ವಾನ: ರೇವಂತ್​ ರೆಡ್ಡಿ ಅವರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ವಿಶೇಷಚೇತನ ಮಹಿಳೆಯೊಬ್ಬರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ನಾಂಪಲ್ಲಿ ಕ್ಷೇತ್ರದ ರಜಿನಿ ಎಂಬಾಕೆ ವಿಶೇಷಚೇತನೆಯಾಗಿದ್ದು, ಸ್ನಾತಕೋತ್ತರ ವ್ಯಾಸಂಗ ಮಾಡಿದ್ದಾರೆ. ಉದ್ಯೋಗದ ಹುಡುಕಾಟದಲ್ಲಿರುವ ರಜಿನಿಗೆ ಚುನಾವಣಾ ಪ್ರಚಾರದ ವೇಳೆ ರೇವಂತ್​ ರೆಡ್ಡಿ ಅವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೇವಂತ್​ ರೆಡ್ಡಿ ಅವರೇ ಸಿಎಂ ಆಗುತ್ತಿದ್ದಾರೆ.

ನಾಳೆ ಮಿಜೋರಂ ಸಿಎಂ ಪದಗ್ರಹಣ: ಇನ್ನೊಂದೆಡೆ ಮಿಜೋರಂ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಝೋರಾಮ್ ಪೀಪಲ್ಸ್ ಮೂವ್​ಮೆಂಟ್​ (ಝಡ್​ಪಿಎಂ) ಮುಖ್ಯಸ್ಥ ಲಾಲ್ದುಹೋಮ ಅವರು ಶುಕ್ರವಾರ (ಡಿಸೆಂಬರ್​ 8) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಐಜ್ವಾಲ್‌ನ ರಾಜಭವನದಲ್ಲಿ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ರಾಜಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಲಾಗಿದೆ. ಸಪ್ದಂಗ್​ ಅವರು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಸಿಎಂ ಪಟ್ಟ: ಹೀಗಿತ್ತು ಆಯ್ಕೆ ಪ್ರಕ್ರಿಯೆ!

ಹೈದರಾಬಾದ್​/ಐಜ್ವಾಲ್​: ತೆಲಂಗಾಣ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ರೇವಂತ್​ ರೆಡ್ಡಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತ ಮಿಜೋರಂ ಚುನಾವಣೆಯಲ್ಲಿ ಆಡಳಿತಾರೂಢ ಎಂಎನ್​ಎಫ್​ ಸೋಲಿಸಿರುವ ಝಡ್​ಪಿಎಂನ ಮುಖ್ಯಸ್ಥ ಲಾಲ್ದುಹೋಮ ಅವರು ಶುಕ್ರವಾರ (ಡಿಸೆಂಬರ್​ 8) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತೆಲಂಗಾಣ ರಚನೆಯಾದ ಬಳಿಕ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಹೊಸ ಹುಮ್ಮಸ್ಸಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. ಎಲ್ ಬಿ ಸ್ಟೇಡಿಯಂನಲ್ಲಿ ಈ ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಸಿಎಂ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಹೈಕಮಾಂಡ್​ಗೆ ವಹಿಸಲಾಗಿತ್ತು. ಮಾತುಕತೆಯ ಬಳಿಕ ಪಿಸಿಸಿ ಅಧ್ಯಕ್ಷರಾಗಿರುವ ರೇವಂತ್​ ರೆಡ್ಡಿ ಅವರ ಹೆಸರನ್ನೇ ಎಲ್ಲರೂ ಅಖೈರುಗೊಳಿಸಿದ್ದರು.

ಡಿ.9ರಂದು ಸೋನಿಯಾ ಗಾಂಧಿ ಅವರ ಜನ್ಮದಿನ ಹಾಗೂ ತೆಲಂಗಾಣ ರಾಜ್ಯವಾಗಿ ಘೋಷಣೆ ಮಾಡಿದ ದಿನದಂದೇ ಕಾಂಗ್ರೆಸ್ ಸರ್ಕಾರ ರಚನೆಗೆ ಪ್ಲಾನ್​ ಮಾಡಲಾಗಿತ್ತು. ಇದನ್ನು ರೇವಂತ್ ರೆಡ್ಡಿ ಚುನಾವಣಾ ಪ್ರಚಾರದ ವೇಳೆ ಹಲವು ಬಾರಿ ಹೇಳಿದ್ದರು. ಆದರೆ, ಕಾರಣಾಂತರಗಳಿಂದ ಎರಡು ದಿನಗಳ ಮೊದಲೇ ನಡೆಸಲಾಗುತ್ತಿದೆ. ಹೀಗಾಗಿ ಗುರುವಾರ ಮಧ್ಯಾಹ್ನ 1:04 ಗಂಟೆಗೆ ರೇವಂತ್ ರೆಡ್ಡಿ ಪ್ರಮಾಣ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲ ಗಣ್ಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಸ್ವತಃ ರೇವಂತ್ ರೆಡ್ಡಿ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್​ ಭೇಟಿಯಾಗಿದ್ದರು. ಇಂಡಿಯಾ ಮೈತ್ರಿಕೂಟದ ನಾಯಕರಿಗೂ ಕರೆಯೋಲೆ ನೀಡಲಾಗಿದೆ.

  • #WATCH | Congress leaders Sonia Gandhi, Rahul Gandhi, Priyanka Gandhi Vadra and Deepender S Hooda at Delhi airport, on their way to Hyderabad to attend the oath-taking ceremony of Revanth Reddy as Telangana CM

    (Video source: Deepender S Hooda) pic.twitter.com/x2X3dGWqru

    — ANI (@ANI) December 7, 2023 " class="align-text-top noRightClick twitterSection" data=" ">

ಸೋನಿಯಾ ಭೇಟಿಯಾಗಿ ಆಹ್ವಾನಿಸಿದ ರೆಡ್ಡಿ: ತೆಲಂಗಾಣ ಮುಖ್ಯಮಂತ್ರಿಯಾಗಿ ನಿಯೋಜಿತವಾಗಿರುವ ರೇವಂತ್ ರೆಡ್ಡಿ ಅವರು ಬುಧವಾರ ದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ, ರಾಹುಲ್​, ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ನಡುವೆ ಸೋನಿಯಾ ಗಾಂಧಿ, ರಾಹುಲ್​ ಹಾಗೂ ಪ್ರಿಯಾಂಕಾ ಗಾಂಧಿ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು, ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದಾರೆ.

ವಿಶೇಷಚೇತನ ಮಹಿಳೆಗೆ ವಿಶೇಷ ಆಹ್ವಾನ: ರೇವಂತ್​ ರೆಡ್ಡಿ ಅವರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ವಿಶೇಷಚೇತನ ಮಹಿಳೆಯೊಬ್ಬರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ನಾಂಪಲ್ಲಿ ಕ್ಷೇತ್ರದ ರಜಿನಿ ಎಂಬಾಕೆ ವಿಶೇಷಚೇತನೆಯಾಗಿದ್ದು, ಸ್ನಾತಕೋತ್ತರ ವ್ಯಾಸಂಗ ಮಾಡಿದ್ದಾರೆ. ಉದ್ಯೋಗದ ಹುಡುಕಾಟದಲ್ಲಿರುವ ರಜಿನಿಗೆ ಚುನಾವಣಾ ಪ್ರಚಾರದ ವೇಳೆ ರೇವಂತ್​ ರೆಡ್ಡಿ ಅವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೇವಂತ್​ ರೆಡ್ಡಿ ಅವರೇ ಸಿಎಂ ಆಗುತ್ತಿದ್ದಾರೆ.

ನಾಳೆ ಮಿಜೋರಂ ಸಿಎಂ ಪದಗ್ರಹಣ: ಇನ್ನೊಂದೆಡೆ ಮಿಜೋರಂ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಝೋರಾಮ್ ಪೀಪಲ್ಸ್ ಮೂವ್​ಮೆಂಟ್​ (ಝಡ್​ಪಿಎಂ) ಮುಖ್ಯಸ್ಥ ಲಾಲ್ದುಹೋಮ ಅವರು ಶುಕ್ರವಾರ (ಡಿಸೆಂಬರ್​ 8) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಐಜ್ವಾಲ್‌ನ ರಾಜಭವನದಲ್ಲಿ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ರಾಜಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಲಾಗಿದೆ. ಸಪ್ದಂಗ್​ ಅವರು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಸಿಎಂ ಪಟ್ಟ: ಹೀಗಿತ್ತು ಆಯ್ಕೆ ಪ್ರಕ್ರಿಯೆ!

Last Updated : Dec 7, 2023, 9:54 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.