ETV Bharat / bharat

ತೆಲಂಗಾಣ: 3 ದಿನದಲ್ಲಿ 2 ಬಾರಿ ಬಂಧನಕ್ಕೊಳಗಾದ ಬಿಜೆಪಿಯಿಂದ ಅಮಾನತಾದ ಟಿ ರಾಜಾ ಸಿಂಗ್

author img

By

Published : Aug 25, 2022, 4:12 PM IST

Updated : Aug 25, 2022, 4:48 PM IST

ಕೋಮು ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಇತ್ತೀಚೆಗೆ ಬಂಧಿತನಾಗಿ ಜಾಮೀನು ಪಡೆದು ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಇಂದು ಮತ್ತೊಮ್ಮೆ ಬಂಧಿಸಿದರು.

BJP leader T Raja Singh
BJP leader T Raja Singh

ಹೈದರಾಬಾದ್​​(ತೆಲಂಗಾಣ): ಪ್ರವಾದಿ ಮಹಮ್ಮದರ ಕುರಿತು ವಿವಾದಿತ ಹೇಳಿಕೆ ನೀಡಿ ಬಿಜೆಪಿ ಹೈಕಮಾಂಡ್​ನಿಂದ ಅಮಾನತುಗೊಂಡಿರುವ ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಇಲ್ಲಿನ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಮ್ಮ ವಿವಾದಿತ ಹೇಳಿಕೆ ವಿಚಾರವಾಗಿ ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಹೊರಬಂದಿದ್ದ ರಾಜಾ ಸಿಂಗ್‌ ಅವರನ್ನು ಭಾರಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಂಧಿಸಿದ್ದಾರೆ.

  • #WATCH | Telangana police arrests suspended BJP leader T Raja Singh from his residence in Hyderabad for his alleged remarks against Prophet Muhammad.

    Massive protests had taken place on August 23, against the leader for his alleged statement. pic.twitter.com/PzwxHWHcY8

    — ANI (@ANI) August 25, 2022 " class="align-text-top noRightClick twitterSection" data=" ">

ರಾಜಾ ಸಿಂಗ್‌ ವಿರುದ್ಧ ದಾಖಲಾಗಿರುವ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗ್ತಿದೆ. ಹೈದರಾಬಾದ್​ನ ಅವರ ನಿವಾಸದಿಂದಲೇ ಅವರನ್ನು ಅರೆಸ್ಟ್ ಮಾಡಲಾಯಿತು.

ಟಿ ರಾಜಾ ಸಿಂಗ್​ ವಿರುದ್ಧ ಈ ವರ್ಷದ ಫೆಬ್ರವರಿ ಮತ್ತು ಏಪ್ರಿಲ್​ ತಿಂಗಳಲ್ಲಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಗಸ್ಟ್​ 24ರಂದು ನೋಟಿಸ್ ಜಾರಿ ಮಾಡಲಾಗಿತ್ತು. ಫೆಬ್ರವರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಜಾ ಸಿಂಗ್​, ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಹೀಗಾಗಿ, ಅವರ ವಿರುದ್ಧ ದೂರು ದಾಖಲಾಗಿತ್ತು. ಇದಾದ ಬಳಿಕ ಏಪ್ರಿಲ್​​ನಲ್ಲಿ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದಾಗ ಪ್ರಚೋದನಕಾರಿ ಭಾಷಣ ಮಾಡಿದ್ದರು. ಎಐಎಂಐಎಂ ಪಕ್ಷದ ಮುಖಂಡರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲೂ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

ಇದಾದ ಬಳಿಕ, ಪ್ರವಾದಿ ಮೊಹಮ್ಮದ್​​​ ಪೈಗಂಬರ್‌ ಕುರಿತಾಗಿ ವಿವಾದಿತ ಹೇಳಿಕೆ ನೀಡಿದ್ದ ಆರೋಪದಲ್ಲಿ ಆಗಸ್ಟ್​​ 23ರಂದು ಟಿ ರಾಜಾ ಸಿಂಗ್ ಬಂಧನಕ್ಕೊಳಗಾಗಿದ್ದರು. ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿ ವರಿಷ್ಠರು ಕಠಿಣ ಕ್ರಮ ತೆಗೆದುಕೊಂಡು ಪಕ್ಷದಿಂದ ಅಮಾನತು ಮಾಡಿದ್ದರು.

ಇದನ್ನೂ ಓದಿ: ಬಿಜೆಪಿ ಶಾಸಕ ರಾಜಾ ಸಿಂಗ್​ಗೆ ಷರತ್ತುಗಳಿಲ್ಲದೆ 45 ನಿಮಿಷದಲ್ಲೇ ಸಿಕ್ತು ಜಾಮೀನು

ತಮ್ಮ ಬಂಧನ ಪ್ರಶ್ನಿಸಿದ ರಾಜಾ ಸಿಂಗ್‌ ಕೋರ್ಟ್ ಮೆಟ್ಟಿಲೇರಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಯಾವುದೇ ಷರತ್ತುಗಳಿಲ್ಲದೆ ಕೇವಲ 45 ನಿಮಿಷಗಳಲ್ಲಿ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ತಕ್ಷಣವೇ ಬಿಡುಗಡೆ ಮಾಡುವಂತೆಯೂ ಪೊಲೀಸರಿಗೆ ಆದೇಶಿಸಿತ್ತು. ಕೋರ್ಟ್ ಎದುರು ದೊಡ್ಡ ಮಟ್ಟದ ಪ್ರತಿಭಟನೆ ನಡೆದು ಪೊಲೀಸರು ಲಾಠಿ ಪ್ರಹಾರವನ್ನೂ ನಡೆಸಿದ್ದರು.

ಹೈದರಾಬಾದ್​​(ತೆಲಂಗಾಣ): ಪ್ರವಾದಿ ಮಹಮ್ಮದರ ಕುರಿತು ವಿವಾದಿತ ಹೇಳಿಕೆ ನೀಡಿ ಬಿಜೆಪಿ ಹೈಕಮಾಂಡ್​ನಿಂದ ಅಮಾನತುಗೊಂಡಿರುವ ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಇಲ್ಲಿನ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಮ್ಮ ವಿವಾದಿತ ಹೇಳಿಕೆ ವಿಚಾರವಾಗಿ ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಹೊರಬಂದಿದ್ದ ರಾಜಾ ಸಿಂಗ್‌ ಅವರನ್ನು ಭಾರಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಂಧಿಸಿದ್ದಾರೆ.

  • #WATCH | Telangana police arrests suspended BJP leader T Raja Singh from his residence in Hyderabad for his alleged remarks against Prophet Muhammad.

    Massive protests had taken place on August 23, against the leader for his alleged statement. pic.twitter.com/PzwxHWHcY8

    — ANI (@ANI) August 25, 2022 " class="align-text-top noRightClick twitterSection" data=" ">

ರಾಜಾ ಸಿಂಗ್‌ ವಿರುದ್ಧ ದಾಖಲಾಗಿರುವ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗ್ತಿದೆ. ಹೈದರಾಬಾದ್​ನ ಅವರ ನಿವಾಸದಿಂದಲೇ ಅವರನ್ನು ಅರೆಸ್ಟ್ ಮಾಡಲಾಯಿತು.

ಟಿ ರಾಜಾ ಸಿಂಗ್​ ವಿರುದ್ಧ ಈ ವರ್ಷದ ಫೆಬ್ರವರಿ ಮತ್ತು ಏಪ್ರಿಲ್​ ತಿಂಗಳಲ್ಲಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಗಸ್ಟ್​ 24ರಂದು ನೋಟಿಸ್ ಜಾರಿ ಮಾಡಲಾಗಿತ್ತು. ಫೆಬ್ರವರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಜಾ ಸಿಂಗ್​, ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಹೀಗಾಗಿ, ಅವರ ವಿರುದ್ಧ ದೂರು ದಾಖಲಾಗಿತ್ತು. ಇದಾದ ಬಳಿಕ ಏಪ್ರಿಲ್​​ನಲ್ಲಿ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದಾಗ ಪ್ರಚೋದನಕಾರಿ ಭಾಷಣ ಮಾಡಿದ್ದರು. ಎಐಎಂಐಎಂ ಪಕ್ಷದ ಮುಖಂಡರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲೂ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

ಇದಾದ ಬಳಿಕ, ಪ್ರವಾದಿ ಮೊಹಮ್ಮದ್​​​ ಪೈಗಂಬರ್‌ ಕುರಿತಾಗಿ ವಿವಾದಿತ ಹೇಳಿಕೆ ನೀಡಿದ್ದ ಆರೋಪದಲ್ಲಿ ಆಗಸ್ಟ್​​ 23ರಂದು ಟಿ ರಾಜಾ ಸಿಂಗ್ ಬಂಧನಕ್ಕೊಳಗಾಗಿದ್ದರು. ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿ ವರಿಷ್ಠರು ಕಠಿಣ ಕ್ರಮ ತೆಗೆದುಕೊಂಡು ಪಕ್ಷದಿಂದ ಅಮಾನತು ಮಾಡಿದ್ದರು.

ಇದನ್ನೂ ಓದಿ: ಬಿಜೆಪಿ ಶಾಸಕ ರಾಜಾ ಸಿಂಗ್​ಗೆ ಷರತ್ತುಗಳಿಲ್ಲದೆ 45 ನಿಮಿಷದಲ್ಲೇ ಸಿಕ್ತು ಜಾಮೀನು

ತಮ್ಮ ಬಂಧನ ಪ್ರಶ್ನಿಸಿದ ರಾಜಾ ಸಿಂಗ್‌ ಕೋರ್ಟ್ ಮೆಟ್ಟಿಲೇರಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಯಾವುದೇ ಷರತ್ತುಗಳಿಲ್ಲದೆ ಕೇವಲ 45 ನಿಮಿಷಗಳಲ್ಲಿ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ತಕ್ಷಣವೇ ಬಿಡುಗಡೆ ಮಾಡುವಂತೆಯೂ ಪೊಲೀಸರಿಗೆ ಆದೇಶಿಸಿತ್ತು. ಕೋರ್ಟ್ ಎದುರು ದೊಡ್ಡ ಮಟ್ಟದ ಪ್ರತಿಭಟನೆ ನಡೆದು ಪೊಲೀಸರು ಲಾಠಿ ಪ್ರಹಾರವನ್ನೂ ನಡೆಸಿದ್ದರು.

Last Updated : Aug 25, 2022, 4:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.