ETV Bharat / bharat

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ:  10 ಯಾತ್ರಿಕರ ದುರ್ಮರಣ, 7 ಮಂದಿ ಸ್ಥಿತಿ ಗಂಭೀರ

author img

By

Published : Jun 23, 2022, 8:37 AM IST

Updated : Jun 23, 2022, 8:59 AM IST

ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್​ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತ

ಉತ್ತರ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 7 ಜನ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಪಿಲಿಭಿತ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730 ರಲ್ಲಿ ನಡೆದಿದೆ.

ಹರಿದ್ವಾರದಲ್ಲಿ ಪವಿತ್ರ ಸ್ನಾನ ಮುಗಿಸಿ ಹಿಂತಿರುಗುತ್ತಿದ್ದ 17 ಮಂದಿ ಭಕ್ತರಿದ್ದ ಪಿಕಪ್ ವಾಹನ ಗಜರೌಳ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಮೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡಿದ್ದ 9 ಮಂದಿಯನ್ನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ, ಚಿಕಿತ್ಸೆ ವೇಳೆ ಇಬ್ಬರು ಮೃತಪಟ್ಟಿದ್ದು, ಉಳಿದ 7 ಜನರ ಸ್ಥಿತಿ ಚಿಂತಾಜನಕವಾಗಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ

ಈ ಕುರಿತು ಸ್ಥಳಕ್ಕೆ ಪಿಲಿಭಿತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪುಲ್ಕಿತ್ ಖರೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಜರೌಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜೀನಾಮೆ ನೀಡಿದ ಶಾಸಕರು 5 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ತಡೆ ಕೋರಿ ಅರ್ಜಿ ಸಲ್ಲಿಕೆ

ಉತ್ತರ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 7 ಜನ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಪಿಲಿಭಿತ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730 ರಲ್ಲಿ ನಡೆದಿದೆ.

ಹರಿದ್ವಾರದಲ್ಲಿ ಪವಿತ್ರ ಸ್ನಾನ ಮುಗಿಸಿ ಹಿಂತಿರುಗುತ್ತಿದ್ದ 17 ಮಂದಿ ಭಕ್ತರಿದ್ದ ಪಿಕಪ್ ವಾಹನ ಗಜರೌಳ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಮೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡಿದ್ದ 9 ಮಂದಿಯನ್ನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ, ಚಿಕಿತ್ಸೆ ವೇಳೆ ಇಬ್ಬರು ಮೃತಪಟ್ಟಿದ್ದು, ಉಳಿದ 7 ಜನರ ಸ್ಥಿತಿ ಚಿಂತಾಜನಕವಾಗಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ

ಈ ಕುರಿತು ಸ್ಥಳಕ್ಕೆ ಪಿಲಿಭಿತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪುಲ್ಕಿತ್ ಖರೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಜರೌಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜೀನಾಮೆ ನೀಡಿದ ಶಾಸಕರು 5 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ತಡೆ ಕೋರಿ ಅರ್ಜಿ ಸಲ್ಲಿಕೆ

Last Updated : Jun 23, 2022, 8:59 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.