ETV Bharat / bharat

ಬಿಕ್ಕಟ್ಟಿನ ಸ್ಥಿತಿಯಲ್ಲಿದೆ ಜಗತ್ತು, ಅಸ್ಥಿರತೆ ಇನ್ನೂ ಎಷ್ಟು ದಿನವೋ ಗೊತ್ತಿಲ್ಲ: ಪ್ರಧಾನಿ ಮೋದಿ

author img

By

Published : Jan 12, 2023, 12:38 PM IST

ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್ ಶೃಂಗಸಭೆ ಆರಂಭವಾಗಿದೆ. ಶೃಂಗಸಭೆಯಲ್ಲಿ ಆರಂಭಿಕ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಜಗತ್ತು ಸದ್ಯ ಬಿಕ್ಕಟ್ಟಿನ ಸ್ಥಿತಿಯಲ್ಲಿದೆ ಎಂದು ಎಚ್ಚರಿಸಿದರು.

World is in state of crisis PM Modi at Voice of Global South summit
World is in state of crisis PM Modi at Voice of Global South summit

ನವದೆಹಲಿ: ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಈ ಅಸ್ಥಿರತೆಯ ಸ್ಥಿತಿ ಇನ್ನೂ ಎಷ್ಟು ದಿನ ಮುಂದುವರಿಯಲಿದೆ ಎಂಬುದನ್ನು ಊಹಿಸುವುದು ಕಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಘರ್ಷ, ಯುದ್ಧ ಮತ್ತು ಭಯೋತ್ಪಾದನೆಯಿಂದ ಉದ್ಭವಿಸುವ ವಿವಿಧ ಜಾಗತಿಕ ಸವಾಲುಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಮಾತು ಹೇಳಿದ್ದಾರೆ.ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್ ಶೃಂಗಸಭೆಯಲ್ಲಿ ಸೋಮವಾರ ತಮ್ಮ ಆರಂಭಿಕ ಭಾಷಣದಲ್ಲಿ ಆಹಾರ, ಇಂಧನ ಮತ್ತು ರಸಗೊಬ್ಬರಗಳ ಬೆಲೆಗಳು, COVID-19 ನಿಂದಾದ ಆರ್ಥಿಕ ಪರಿಣಾಮ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾಗುವ ನೈಸರ್ಗಿಕ ವಿಕೋಪಗಳ ಬಗ್ಗೆ ಮೋದಿ ಕಳವಳ ವ್ಯಕ್ತಪಡಿಸಿದರು.

ವಿವಿಧ ಅಭಿವೃದ್ಧಿಶೀಲ ರಾಷ್ಟ್ರಗಳ ಹಲವಾರು ನಾಯಕರ ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ ಎಂಬುದು ಸ್ಪಷ್ಟ. ಅಸ್ಥಿರತೆಯ ಸ್ಥಿತಿ ಇನ್ನೂ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸಲಾಗದು. ನಾವು, ಗ್ಲೋಬಲ್ ಸೌತ್, ಭವಿಷ್ಯದಲ್ಲಿ ಅತಿದೊಡ್ಡ ಸವಾಲುಗಳನ್ನು ಎದುರಿಸಲಿದ್ದೇವೆ. ಬಹುತೇಕ ಜಾಗತಿಕ ಸಮಸ್ಯೆಗಳನ್ನು ಸೃಷ್ಟಿ ಮಾಡುವಲ್ಲಿ ಗ್ಲೋಬಲ್ ಸೌತ್‌ ಯಾವುದೇ ಪಾತ್ರ ಹೊಂದಿಲ್ಲ. ಆದರೂ ಅವು ನಮ್ಮ ಮೇಲೆಯೇ ಹೆಚ್ಚು ಪರಿಣಾಮ ಬೀರುತ್ತವೆ ಎಂದು ಹೇಳಿದರು.

ಭಾರತ ಯಾವಾಗಲೂ ತನ್ನ ಅಭಿವೃದ್ಧಿಯ ಅನುಭವವನ್ನು ತನ್ನ ಜಾಗತಿಕ ದಕ್ಷಿಣದ ರಾಷ್ಟ್ರಗಳೊಂದಿಗೆ ಹಂಚಿಕೊಂಡಿದೆ. ಭಾರತವು ಈ ವರ್ಷ ತನ್ನ ಜಿ 20 ಅಧ್ಯಕ್ಷತೆಯನ್ನು ಪ್ರಾರಂಭಿಸುತ್ತಿದ್ದಂತೆ, ಜಾಗತಿಕವಾಗಿ ದಕ್ಷಿಣದ ಧ್ವನಿಯನ್ನು ವರ್ಧಿಸುವುದು ನಮ್ಮ ಗುರಿಯಾಗಿದೆ ಎಂದರು. ಗ್ಲೋಬಲ್ ಸೌತ್‌ನ ದೇಶಗಳನ್ನು ಒಟ್ಟುಗೂಡಿಸಲು ಮತ್ತು ಉಕ್ರೇನ್ ಸಂಘರ್ಷದಿಂದ ಉಂಟಾದ ಆಹಾರ ಮತ್ತು ಇಂಧನ ಭದ್ರತೆ ಸೇರಿದಂತೆ ವಿವಿಧ ಜಾಗತಿಕ ಸವಾಲುಗಳಿಗೆ ಸಂಬಂಧಿಸಿದಂತೆ ಈ ದೇಶಗಳ ಸಾಮಾನ್ಯ ಕಾಳಜಿಗಳನ್ನು ಹಂಚಿಕೊಳ್ಳಲು ಸಾಮಾನ್ಯ ವೇದಿಕೆಯನ್ನು ಒದಗಿಸಲು ಭಾರತ ಎರಡು ದಿನಗಳ ಜಿ20 ಶೃಂಗಸಭೆಯನ್ನು ಆಯೋಜಿಸುತ್ತಿದೆ.

'ಗ್ಲೋಬಲ್ ಸೌತ್' ಎಂಬುದು ಬಹುತೇಕವಾಗಿ ಏಷ್ಯಾ, ಆಫ್ರಿಕಾ ಮತ್ತು ದಕ್ಷಿಣ ಅಮೆರಿಕದ ದೇಶಗಳನ್ನು ಉಲ್ಲೇಖಿಸುತ್ತದೆ. ಉದ್ಘಾಟನಾ ಸಮಾರಂಭದ ನಾಯಕರ ಅಧಿವೇಶನದ ವಿಷಯವು ವಾಯ್ಸ್ ಆಫ್ ಗ್ಲೋಬಲ್ ಸೌತ್ - ಫಾರ್ ಹ್ಯೂಮನ್-ಸೆಂಟ್ರಿಕ್ ಡೆವಲಪ್‌ಮೆಂಟ್ ಆಗಿದೆ. ಹಾಗೆಯೇ ನಾಯಕರ ಸಮಾರೋಪ ಸಮಾರಂಭವು ಒಗ್ಗಟ್ಟಿನ ಧ್ವನಿ - ಒಗ್ಗಟ್ಟಿನ ಉದ್ದೇಶ ಆಗಿರಲಿದೆ. ಶೃಂಗಸಭೆಯ ಅಂಗವಾಗಿ ಹತ್ತು ಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ಅದರಲ್ಲಿ ನಾಲ್ಕು ಸೆಷನ್‌ಗಳು ಗುರುವಾರ ನಡೆಯಲಿವೆ. ಆರು ಸೆಷನ್​ಗಳು ಶುಕ್ರವಾರ ನಡೆಯಲಿವೆ. ಪ್ರತಿ ಅಧಿವೇಶನದಲ್ಲಿ 10-20 ದೇಶಗಳ ನಾಯಕರು ಮತ್ತು ಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ.

ನದಿ ವಿಹಾರ ಬೋಟ್​​ಗೆ ನಾಳೆ ಪ್ರಧಾನಿ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತಿ ಉದ್ದದ ನದಿ ವಿಹಾರ ಬೋಟ್​ ಎಂವಿ ಗಂಗಾ ವಿಲಾಸ್‌ಗೆ ಜನವರಿ 13 ರಂದು(ನಾಳೆ) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಇದೇ ವೇಳೆ, ವಾರಣಾಸಿಯ ಗಂಗಾ ನದಿಯ ದಡದಲ್ಲಿ 'ಟೆಂಟ್ ಸಿಟಿ' ಕೂಡ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಇತರ ಹಲವು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶಾಖಪಟ್ಟಣಂನಲ್ಲೂ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ಲಕ್ಷ ಲಕ್ಷ ಮೌಲ್ಯದ ಕಿಟಕಿಗಳಿಗೆ ಹಾನಿ!

ನವದೆಹಲಿ: ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಈ ಅಸ್ಥಿರತೆಯ ಸ್ಥಿತಿ ಇನ್ನೂ ಎಷ್ಟು ದಿನ ಮುಂದುವರಿಯಲಿದೆ ಎಂಬುದನ್ನು ಊಹಿಸುವುದು ಕಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಘರ್ಷ, ಯುದ್ಧ ಮತ್ತು ಭಯೋತ್ಪಾದನೆಯಿಂದ ಉದ್ಭವಿಸುವ ವಿವಿಧ ಜಾಗತಿಕ ಸವಾಲುಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಮಾತು ಹೇಳಿದ್ದಾರೆ.ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್ ಶೃಂಗಸಭೆಯಲ್ಲಿ ಸೋಮವಾರ ತಮ್ಮ ಆರಂಭಿಕ ಭಾಷಣದಲ್ಲಿ ಆಹಾರ, ಇಂಧನ ಮತ್ತು ರಸಗೊಬ್ಬರಗಳ ಬೆಲೆಗಳು, COVID-19 ನಿಂದಾದ ಆರ್ಥಿಕ ಪರಿಣಾಮ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾಗುವ ನೈಸರ್ಗಿಕ ವಿಕೋಪಗಳ ಬಗ್ಗೆ ಮೋದಿ ಕಳವಳ ವ್ಯಕ್ತಪಡಿಸಿದರು.

ವಿವಿಧ ಅಭಿವೃದ್ಧಿಶೀಲ ರಾಷ್ಟ್ರಗಳ ಹಲವಾರು ನಾಯಕರ ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ ಎಂಬುದು ಸ್ಪಷ್ಟ. ಅಸ್ಥಿರತೆಯ ಸ್ಥಿತಿ ಇನ್ನೂ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸಲಾಗದು. ನಾವು, ಗ್ಲೋಬಲ್ ಸೌತ್, ಭವಿಷ್ಯದಲ್ಲಿ ಅತಿದೊಡ್ಡ ಸವಾಲುಗಳನ್ನು ಎದುರಿಸಲಿದ್ದೇವೆ. ಬಹುತೇಕ ಜಾಗತಿಕ ಸಮಸ್ಯೆಗಳನ್ನು ಸೃಷ್ಟಿ ಮಾಡುವಲ್ಲಿ ಗ್ಲೋಬಲ್ ಸೌತ್‌ ಯಾವುದೇ ಪಾತ್ರ ಹೊಂದಿಲ್ಲ. ಆದರೂ ಅವು ನಮ್ಮ ಮೇಲೆಯೇ ಹೆಚ್ಚು ಪರಿಣಾಮ ಬೀರುತ್ತವೆ ಎಂದು ಹೇಳಿದರು.

ಭಾರತ ಯಾವಾಗಲೂ ತನ್ನ ಅಭಿವೃದ್ಧಿಯ ಅನುಭವವನ್ನು ತನ್ನ ಜಾಗತಿಕ ದಕ್ಷಿಣದ ರಾಷ್ಟ್ರಗಳೊಂದಿಗೆ ಹಂಚಿಕೊಂಡಿದೆ. ಭಾರತವು ಈ ವರ್ಷ ತನ್ನ ಜಿ 20 ಅಧ್ಯಕ್ಷತೆಯನ್ನು ಪ್ರಾರಂಭಿಸುತ್ತಿದ್ದಂತೆ, ಜಾಗತಿಕವಾಗಿ ದಕ್ಷಿಣದ ಧ್ವನಿಯನ್ನು ವರ್ಧಿಸುವುದು ನಮ್ಮ ಗುರಿಯಾಗಿದೆ ಎಂದರು. ಗ್ಲೋಬಲ್ ಸೌತ್‌ನ ದೇಶಗಳನ್ನು ಒಟ್ಟುಗೂಡಿಸಲು ಮತ್ತು ಉಕ್ರೇನ್ ಸಂಘರ್ಷದಿಂದ ಉಂಟಾದ ಆಹಾರ ಮತ್ತು ಇಂಧನ ಭದ್ರತೆ ಸೇರಿದಂತೆ ವಿವಿಧ ಜಾಗತಿಕ ಸವಾಲುಗಳಿಗೆ ಸಂಬಂಧಿಸಿದಂತೆ ಈ ದೇಶಗಳ ಸಾಮಾನ್ಯ ಕಾಳಜಿಗಳನ್ನು ಹಂಚಿಕೊಳ್ಳಲು ಸಾಮಾನ್ಯ ವೇದಿಕೆಯನ್ನು ಒದಗಿಸಲು ಭಾರತ ಎರಡು ದಿನಗಳ ಜಿ20 ಶೃಂಗಸಭೆಯನ್ನು ಆಯೋಜಿಸುತ್ತಿದೆ.

'ಗ್ಲೋಬಲ್ ಸೌತ್' ಎಂಬುದು ಬಹುತೇಕವಾಗಿ ಏಷ್ಯಾ, ಆಫ್ರಿಕಾ ಮತ್ತು ದಕ್ಷಿಣ ಅಮೆರಿಕದ ದೇಶಗಳನ್ನು ಉಲ್ಲೇಖಿಸುತ್ತದೆ. ಉದ್ಘಾಟನಾ ಸಮಾರಂಭದ ನಾಯಕರ ಅಧಿವೇಶನದ ವಿಷಯವು ವಾಯ್ಸ್ ಆಫ್ ಗ್ಲೋಬಲ್ ಸೌತ್ - ಫಾರ್ ಹ್ಯೂಮನ್-ಸೆಂಟ್ರಿಕ್ ಡೆವಲಪ್‌ಮೆಂಟ್ ಆಗಿದೆ. ಹಾಗೆಯೇ ನಾಯಕರ ಸಮಾರೋಪ ಸಮಾರಂಭವು ಒಗ್ಗಟ್ಟಿನ ಧ್ವನಿ - ಒಗ್ಗಟ್ಟಿನ ಉದ್ದೇಶ ಆಗಿರಲಿದೆ. ಶೃಂಗಸಭೆಯ ಅಂಗವಾಗಿ ಹತ್ತು ಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ಅದರಲ್ಲಿ ನಾಲ್ಕು ಸೆಷನ್‌ಗಳು ಗುರುವಾರ ನಡೆಯಲಿವೆ. ಆರು ಸೆಷನ್​ಗಳು ಶುಕ್ರವಾರ ನಡೆಯಲಿವೆ. ಪ್ರತಿ ಅಧಿವೇಶನದಲ್ಲಿ 10-20 ದೇಶಗಳ ನಾಯಕರು ಮತ್ತು ಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ.

ನದಿ ವಿಹಾರ ಬೋಟ್​​ಗೆ ನಾಳೆ ಪ್ರಧಾನಿ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತಿ ಉದ್ದದ ನದಿ ವಿಹಾರ ಬೋಟ್​ ಎಂವಿ ಗಂಗಾ ವಿಲಾಸ್‌ಗೆ ಜನವರಿ 13 ರಂದು(ನಾಳೆ) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಇದೇ ವೇಳೆ, ವಾರಣಾಸಿಯ ಗಂಗಾ ನದಿಯ ದಡದಲ್ಲಿ 'ಟೆಂಟ್ ಸಿಟಿ' ಕೂಡ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಇತರ ಹಲವು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶಾಖಪಟ್ಟಣಂನಲ್ಲೂ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ಲಕ್ಷ ಲಕ್ಷ ಮೌಲ್ಯದ ಕಿಟಕಿಗಳಿಗೆ ಹಾನಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.