ETV Bharat / bharat

ಟೀಂ ಇಂಡಿಯಾ ಪರಾಭವ ಬಳಿಕ ಸಂಭ್ರಮ: ಸ್ಕಾಲರ್​ಶಿಪ್​ ಪಡೆಯುತ್ತಿದ್ದ ಮೂವರು ವಿದ್ಯಾರ್ಥಿಗಳು ಅಮಾನತು

author img

By

Published : Oct 27, 2021, 10:58 AM IST

Updated : Oct 27, 2021, 11:36 AM IST

ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ವಿದ್ಯಾರ್ಥಿಗಳಿಗೆ ಲಭ್ಯವಿರುವ ಪ್ರಧಾನ ಮಂತ್ರಿಗಳ ವಿಶೇಷ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗಳು ಟೀಂ ಇಂಡಿಯಾ ಸೋಲನ್ನು ಸಂಭ್ರಮಿಸಿದ್ದು, ಅಮಾನತುಗೊಂಡಿದ್ದಾರೆ.

Three Kashmiri students booked for pro-Pak slogans
ಟೀಂ ಇಂಡಿಯಾ ಪರಾಭವಗೊಂಡ ಬಳಿಕ ಸಂಭ್ರಮಾಚರಣೆ: ಸ್ಕಾಲರ್​ಶಿಪ್​ ಪಡೆಯುತ್ತಿದ್ದ ಮೂವರು ವಿದ್ಯಾರ್ಥಿಗಳ ಅಮಾನತು

ಆಗ್ರಾ (ಉತ್ತರ ಪ್ರದೇಶ): ಪಾಕಿಸ್ತಾನ ವಿರುದ್ಧ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ನಂತರ ಸಂಭ್ರಮಾಚರಣೆ ಮಾಡಿದ ಆಗ್ರಾದ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಬಿಜೆಪಿ ಯುವ ಘಟಕದ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ. ಬಿಜೆಪಿ ಯುವ ಮುಖಂಡ ಗೌರವ್ ರಾಜಾವತ್ ನೀಡಿರುವ ದೂರಿನ ಆಧಾರದ ಮೇಲೆ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆಗ್ರಾ ಎಸ್‌ಪಿ ವಿಕಾಸ್ ಕುಮಾರ್ ತಿಳಿಸಿದ್ದು, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಬಳಿಕ ಕೆಲವರು ವಾಟ್ಸ್‌ಆ್ಯಪ್‌ನಲ್ಲಿ ದೇಶವಿರೋಧಿ ಸಂದೇಶಗಳನ್ನು ಬರೆದು ಹಂಚಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಈಗಾಗಲೇ ಸಿವಿಲ್ ಇಂಜಿನಿಯರಿಂಗ್ ಕೋರ್ಸ್ ಮಾಡುತ್ತಿದ್ದ ಮೂವರೂ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಹಾಗೂ ಸಂಸ್ಥೆಯಿಂದ ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಹಾಸ್ಟೆಲ್​ಗಳ ಡೀನ್ ಡಾ.ದುಷ್ಯಂತ್ ಸಿಂಗ್ ಈ ಕುರಿತು ನೋಟಿಸ್ ಹೊರಡಿಸಿದ್ದು, ಅಕ್ಟೋಬರ್ 24ರಂದು ಪಂದ್ಯದ ನಂತರ ವಿದ್ಯಾರ್ಥಿಗಳು ಪಾಕಿಸ್ತಾನದ ಪರವಾಗಿ ಸ್ಟೇಟಸ್ ಹಾಕಿಕೊಂಡಿದ್ದರು. ಈ ಮೂಲಕ ಅಶಿಸ್ತು ಪ್ರದರ್ಶನವಾಗಿದ್ದು, ಇದೇ ಕಾರಣದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಸ್ಟೆಲ್​ನಿಂದ ಅವರನ್ನು ಹೊರಹಾಕಲಾಗಿದೆ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಕ್ಷಮೆಯಾಚನೆ: ಮೂವರೂ ಕಾಶ್ಮೀರಿ ವಿದ್ಯಾರ್ಥಿಗಳು ತಾವು ಪಾಕ್ ಪರ ಸಂಭ್ರಮಿಸಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ ಎಂದು ಕಾಲೇಜಿನ ಚೀಫ್ ಪ್ರೊಕ್ಟರ್ ಡಾ.ಆಶಿಶ್ ಶುಕ್ಲಾ ಹೇಳಿದ್ದಾರೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ವಿದ್ಯಾರ್ಥಿಗಳಿಗೆ ಲಭ್ಯವಿರುವ ಪ್ರಧಾನ ಮಂತ್ರಿಗಳ ವಿಶೇಷ ವಿದ್ಯಾರ್ಥಿವೇತನ ಯೋಜನೆ (PMSSS) ಅಡಿಯಲ್ಲಿ ಈ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದರು.

ಇದನ್ನೂ ಓದಿ: ನಿಮ್ಮ ಮನೆಯಲ್ಲಿ ಬೈಕ್ ಮತ್ತು ಮಕ್ಕಳಿದ್ದಾರೆಯೇ?: ಇಲ್ಲಿದೆ ಕೇಂದ್ರ ಸರ್ಕಾರದ ಹೊಸ ರೂಲ್ಸ್

ಆಗ್ರಾ (ಉತ್ತರ ಪ್ರದೇಶ): ಪಾಕಿಸ್ತಾನ ವಿರುದ್ಧ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ನಂತರ ಸಂಭ್ರಮಾಚರಣೆ ಮಾಡಿದ ಆಗ್ರಾದ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಬಿಜೆಪಿ ಯುವ ಘಟಕದ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ. ಬಿಜೆಪಿ ಯುವ ಮುಖಂಡ ಗೌರವ್ ರಾಜಾವತ್ ನೀಡಿರುವ ದೂರಿನ ಆಧಾರದ ಮೇಲೆ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆಗ್ರಾ ಎಸ್‌ಪಿ ವಿಕಾಸ್ ಕುಮಾರ್ ತಿಳಿಸಿದ್ದು, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಬಳಿಕ ಕೆಲವರು ವಾಟ್ಸ್‌ಆ್ಯಪ್‌ನಲ್ಲಿ ದೇಶವಿರೋಧಿ ಸಂದೇಶಗಳನ್ನು ಬರೆದು ಹಂಚಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಈಗಾಗಲೇ ಸಿವಿಲ್ ಇಂಜಿನಿಯರಿಂಗ್ ಕೋರ್ಸ್ ಮಾಡುತ್ತಿದ್ದ ಮೂವರೂ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಹಾಗೂ ಸಂಸ್ಥೆಯಿಂದ ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಹಾಸ್ಟೆಲ್​ಗಳ ಡೀನ್ ಡಾ.ದುಷ್ಯಂತ್ ಸಿಂಗ್ ಈ ಕುರಿತು ನೋಟಿಸ್ ಹೊರಡಿಸಿದ್ದು, ಅಕ್ಟೋಬರ್ 24ರಂದು ಪಂದ್ಯದ ನಂತರ ವಿದ್ಯಾರ್ಥಿಗಳು ಪಾಕಿಸ್ತಾನದ ಪರವಾಗಿ ಸ್ಟೇಟಸ್ ಹಾಕಿಕೊಂಡಿದ್ದರು. ಈ ಮೂಲಕ ಅಶಿಸ್ತು ಪ್ರದರ್ಶನವಾಗಿದ್ದು, ಇದೇ ಕಾರಣದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಸ್ಟೆಲ್​ನಿಂದ ಅವರನ್ನು ಹೊರಹಾಕಲಾಗಿದೆ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಕ್ಷಮೆಯಾಚನೆ: ಮೂವರೂ ಕಾಶ್ಮೀರಿ ವಿದ್ಯಾರ್ಥಿಗಳು ತಾವು ಪಾಕ್ ಪರ ಸಂಭ್ರಮಿಸಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ ಎಂದು ಕಾಲೇಜಿನ ಚೀಫ್ ಪ್ರೊಕ್ಟರ್ ಡಾ.ಆಶಿಶ್ ಶುಕ್ಲಾ ಹೇಳಿದ್ದಾರೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ವಿದ್ಯಾರ್ಥಿಗಳಿಗೆ ಲಭ್ಯವಿರುವ ಪ್ರಧಾನ ಮಂತ್ರಿಗಳ ವಿಶೇಷ ವಿದ್ಯಾರ್ಥಿವೇತನ ಯೋಜನೆ (PMSSS) ಅಡಿಯಲ್ಲಿ ಈ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದರು.

ಇದನ್ನೂ ಓದಿ: ನಿಮ್ಮ ಮನೆಯಲ್ಲಿ ಬೈಕ್ ಮತ್ತು ಮಕ್ಕಳಿದ್ದಾರೆಯೇ?: ಇಲ್ಲಿದೆ ಕೇಂದ್ರ ಸರ್ಕಾರದ ಹೊಸ ರೂಲ್ಸ್

Last Updated : Oct 27, 2021, 11:36 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.