ETV Bharat / bharat

ದುರ್ಗಾಪೂಜೆ ವೇಳೆ ಕಾಲ್ತುಳಿತ : ಮಗು, ಇಬ್ಬರು ಮಹಿಳೆಯರು ಸೇರಿ ಮೂವರ ಸಾವು

author img

By ETV Bharat Karnataka Team

Published : Oct 24, 2023, 7:14 AM IST

ದುರ್ಗಾಪೂಜೆ ವೇಳೆ ಕಾಲ್ತುಳಿತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ.

three-people-including-two-women-and-a-child-were-killed-stampede-in-a-puja-pandal-in-gopalganj
ದುರ್ಗಾಪೂಜೆ ವೇಳೆ ಕಾಲ್ತುಳಿತ : ಮಗು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವು

ಗೋಪಾಲ್​ಗಂಜ್​(ಬಿಹಾರ) : ನವರಾತ್ರಿ ಹಿನ್ನೆಲೆ ದುರ್ಗಾ ಪೂಜೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಗು ಮತ್ತು ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಮೃತರನ್ನು ಆಶ್​ಕುಮಾರ್​(5), ಊರ್ಮಿಳಾ ದೇವಿ,ಶಾಂತಿ ದೇವಿ ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ನವರಾತ್ರಿ ಹಿನ್ನಲೆ ಇಲ್ಲಿನ ಗೋಪಾಲ್​ಗಂಜ್​ನಲ್ಲಿ ದುರ್ಗಾ ಪೂಜೆ ಹಮ್ಮಿಕೊಳ್ಳಲಾಗಿತ್ತು. ದುರ್ಗಾ ಪೂಜೆಗೆ ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡಳಿತ ಮಂಡಳಿ ಸದಸ್ಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಜನರನ್ನು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿದ್ದಾರೆ. ದುರ್ಗಾ ಪೂಜೆ ಹಿನ್ನೆಲೆ ಸ್ಥಳದಲ್ಲಿ ಯಾವುದೇ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿರಲಿಲ್ಲ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೋಪಾಲ್​ಗಂಜ್​ ಪೊಲೀಸ್​ ವರಿಷ್ಠಾಧಿಕಾರಿ, ಇಲ್ಲಿನ ದುರ್ಗಾ ಪೂಜಾ ಸ್ಥಳದಲ್ಲಿ ಸೋಮವಾರ ಸುಮಾರು 8.30ಕ್ಕೆ ಕಾಲ್ತುಳಿತ ಸಂಭವಿಸಿದೆ. ಇಲ್ಲಿ ಹಮ್ಮಿಕೊಂಡಿದ್ದ ದುರ್ಗಾಪೂಜೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ಸಂದರ್ಭ ಒಂದು ಮಗು ಜನಸಂದಣಿ ನಡುವೆ ನೆಲಕ್ಕೆ ಬಿದ್ದಿದೆ. ಈ ಮಗುವನ್ನು ರಕ್ಷಿಸಲು ಮುಂದಾದಾಗ ಜನಸಂದಣಿಯಲ್ಲಿ ನೂಕುನುಗ್ಗಲು ಉಂಟಾಗಿದೆ.

ಬಳಿಕ ಇಬ್ಬರು ಮಹಿಳೆಯರು ಮಗುವನ್ನು ರಕ್ಷಿಸಲು ಧಾವಿಸಿದ್ದು, ಈ ವೇಳೆ ಈ ಮಹಿಳೆಯರು ಜನರ ಕಾಲ್ತುಳಿತಕ್ಕೆ ಸಿಲುಕಿದರು. ತಕ್ಷಣ ಇವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಸ್ಥಳದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿದೆ ಎಂದು ಹೇಳಿದರು.

ದೇಗುಲ ನೋಡಲು ಮುಗಿಬಿದ್ದ ಜನ : ಗೋಪಾಲ್​ಗಂಜ್​ನಲ್ಲಿ ಗುಜರಾತ್​ನ ಶ್ರುತಿ ದೇವಾಲಯ ಮಾದರಿಯಲ್ಲಿ ದುರ್ಗಾದೇವಿ ಪೆಂಡಾಲ್​ ನಿರ್ಮಾಣ ಮಾಡಲಾಗಿತ್ತು. ಇದನ್ನು ನೋಡಲು ಸಾವಿರಾರು ಜನರು ಆಗಮಿಸಿದ್ದರು. ಈ ಸಂದರ್ಭ ಕಾಲ್ತುಳಿತ ಉಂಟಾಗಿದೆ. ಸದ್ಯ ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದು, ಆಡಳಿತ ಮಂಡಳಿ ಜನರಿಗೆ ದೇವಾಲಯಕ್ಕೆ ಬಾರದಂತೆ ನಿಷೇಧ ಹೇರಿದೆ. ಜೊತೆಗೆ ಇಲ್ಲಿ ಅಂಬೇಡ್ಕರ್​ ಚೌಕ್​ನಿಂದ ಶುಗರ್​ ಮಿಲ್​ ರಸ್ತೆಯಲ್ಲಿ ಜನ ಸಂಚಾರವನ್ನು ನಿಲ್ಲಿಸಲಾಗಿದೆ.

ಇದನ್ನೂ ಓದಿ : ಬಿಗ್‌ಬಾಸ್ ಸ್ಪರ್ಧಿ ವರ್ತೂರು​ ಸಂತೋಷ್​ಗೆ 14 ದಿನ ನ್ಯಾಯಾಂಗ ಬಂಧನ

ಗೋಪಾಲ್​ಗಂಜ್​(ಬಿಹಾರ) : ನವರಾತ್ರಿ ಹಿನ್ನೆಲೆ ದುರ್ಗಾ ಪೂಜೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಗು ಮತ್ತು ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಮೃತರನ್ನು ಆಶ್​ಕುಮಾರ್​(5), ಊರ್ಮಿಳಾ ದೇವಿ,ಶಾಂತಿ ದೇವಿ ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ನವರಾತ್ರಿ ಹಿನ್ನಲೆ ಇಲ್ಲಿನ ಗೋಪಾಲ್​ಗಂಜ್​ನಲ್ಲಿ ದುರ್ಗಾ ಪೂಜೆ ಹಮ್ಮಿಕೊಳ್ಳಲಾಗಿತ್ತು. ದುರ್ಗಾ ಪೂಜೆಗೆ ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡಳಿತ ಮಂಡಳಿ ಸದಸ್ಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಜನರನ್ನು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿದ್ದಾರೆ. ದುರ್ಗಾ ಪೂಜೆ ಹಿನ್ನೆಲೆ ಸ್ಥಳದಲ್ಲಿ ಯಾವುದೇ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿರಲಿಲ್ಲ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೋಪಾಲ್​ಗಂಜ್​ ಪೊಲೀಸ್​ ವರಿಷ್ಠಾಧಿಕಾರಿ, ಇಲ್ಲಿನ ದುರ್ಗಾ ಪೂಜಾ ಸ್ಥಳದಲ್ಲಿ ಸೋಮವಾರ ಸುಮಾರು 8.30ಕ್ಕೆ ಕಾಲ್ತುಳಿತ ಸಂಭವಿಸಿದೆ. ಇಲ್ಲಿ ಹಮ್ಮಿಕೊಂಡಿದ್ದ ದುರ್ಗಾಪೂಜೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ಸಂದರ್ಭ ಒಂದು ಮಗು ಜನಸಂದಣಿ ನಡುವೆ ನೆಲಕ್ಕೆ ಬಿದ್ದಿದೆ. ಈ ಮಗುವನ್ನು ರಕ್ಷಿಸಲು ಮುಂದಾದಾಗ ಜನಸಂದಣಿಯಲ್ಲಿ ನೂಕುನುಗ್ಗಲು ಉಂಟಾಗಿದೆ.

ಬಳಿಕ ಇಬ್ಬರು ಮಹಿಳೆಯರು ಮಗುವನ್ನು ರಕ್ಷಿಸಲು ಧಾವಿಸಿದ್ದು, ಈ ವೇಳೆ ಈ ಮಹಿಳೆಯರು ಜನರ ಕಾಲ್ತುಳಿತಕ್ಕೆ ಸಿಲುಕಿದರು. ತಕ್ಷಣ ಇವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಸ್ಥಳದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿದೆ ಎಂದು ಹೇಳಿದರು.

ದೇಗುಲ ನೋಡಲು ಮುಗಿಬಿದ್ದ ಜನ : ಗೋಪಾಲ್​ಗಂಜ್​ನಲ್ಲಿ ಗುಜರಾತ್​ನ ಶ್ರುತಿ ದೇವಾಲಯ ಮಾದರಿಯಲ್ಲಿ ದುರ್ಗಾದೇವಿ ಪೆಂಡಾಲ್​ ನಿರ್ಮಾಣ ಮಾಡಲಾಗಿತ್ತು. ಇದನ್ನು ನೋಡಲು ಸಾವಿರಾರು ಜನರು ಆಗಮಿಸಿದ್ದರು. ಈ ಸಂದರ್ಭ ಕಾಲ್ತುಳಿತ ಉಂಟಾಗಿದೆ. ಸದ್ಯ ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದು, ಆಡಳಿತ ಮಂಡಳಿ ಜನರಿಗೆ ದೇವಾಲಯಕ್ಕೆ ಬಾರದಂತೆ ನಿಷೇಧ ಹೇರಿದೆ. ಜೊತೆಗೆ ಇಲ್ಲಿ ಅಂಬೇಡ್ಕರ್​ ಚೌಕ್​ನಿಂದ ಶುಗರ್​ ಮಿಲ್​ ರಸ್ತೆಯಲ್ಲಿ ಜನ ಸಂಚಾರವನ್ನು ನಿಲ್ಲಿಸಲಾಗಿದೆ.

ಇದನ್ನೂ ಓದಿ : ಬಿಗ್‌ಬಾಸ್ ಸ್ಪರ್ಧಿ ವರ್ತೂರು​ ಸಂತೋಷ್​ಗೆ 14 ದಿನ ನ್ಯಾಯಾಂಗ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.